AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಗಾಂಧಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ

ಲೋಕಸಭಾ ಚುನಾವಣೆಯ ಎರಡು ಹಂತಗಳು ಮುಕ್ತಾಯಗೊಂಡಿದ್ದು, ಮೂರನೇ ಹಂತದ ಚುನಾವಣೆಗೆ ಸಿದ್ಧತೆಗಳು ಶುರುವಾಗಿವೆ. ಕಾಂಗ್ರೆಸ್​ ಪಕ್ಷವು ರಾಯ್​ ಬರೇಲಿ ಹಾಗೂ ಅಮೇಥಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ, ರಾಯ್​ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಗಾಂಧಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ
ಪ್ರಿಯಾಂಕಾ ಗಾಂಧಿImage Credit source: Mint
ನಯನಾ ರಾಜೀವ್
|

Updated on: Apr 30, 2024 | 10:15 AM

Share

ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಅವರು 2024ರ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮಾತ್ರ ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ಅಮೇಥಿ ಮತ್ತು ಪಕ್ಷದ ಭದ್ರಕೋಟೆಯಾದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸ್ಮೃತಿ ಇರಾನಿ ಅವರನ್ನು ಅಮೇಥಿಗೆ ತನ್ನ ಅಭ್ಯರ್ಥಿ ಎಂದು ಘೋಷಿಸಿದರೆ, ಹಳೆಯ ಪಕ್ಷವು ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಮಾಡಲಿದೆ ಎಂದು ಹೇಳಿದೆ. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಯ್ ಬರೇಲಿಯಿಂದ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಅಮೇಥಿ ಮತ್ತು ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಈ ಬಾರಿಯೂ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹ ಕೆಲ ದಿನಗಳಿಂದ ಇತ್ತು.

ಅದೇ ಸಮಯದಲ್ಲಿ ಪ್ರಿಯಾಂಕಾಗೆ ರಾಯ್ ಬರೇಲಿಯಿಂದ ಟಿಕೆಟ್ ನೀಡಬಹುದು ಎಂದು ಹೇಳಲಾಗಿತ್ತು. ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿತ್ತು. ಪಕ್ಷದ ನಾಯಕತ್ವವು ರಾಹುಲ್ ಗಾಂಧಿಗೆ ಅಮೇಥಿಯಿಂದ ಮತ್ತು ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸಲು ಪ್ರಸ್ತಾಪಿಸಿತ್ತು. ಆದರೆ ಈ ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸಲು ಇಬ್ಬರೂ ನಾಯಕರು ನಿರಾಕರಿಸಿದ್ದಾರೆ.

ಮತ್ತಷ್ಟು ಓದಿ: ನೂರಾರು ಮಹಿಳೆಯರ ಜೀವನ ಹಾಳು ಮಾಡಿದ ವ್ಯಕ್ತಿಯ ಭುಜದ ಮೇಲೆ ಕೈಹಾಕಿ ಪೋಸ್ ಕೊಟ್ಟಿದ್ರಿ: ಮೋದಿಗೆ ಕುಟುಕಿದ ಪ್ರಿಯಾಂಕಾ

ರಾಹುಲ್ ಗಾಂಧಿ 2019ರಲ್ಲಿ ಎರಡು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಯುಪಿಯ ಅಮೇಠಿ ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಆದರೆ ಸೋನಿಯಾ ಗಾಂಧಿ ಯುಪಿಯ ರಾಯ್ ಬರೇಲಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಿಂದ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಸೋಲನ್ನು ಎದುರಿಸಬೇಕಾಯಿತು.

ಆದರೆ ರಾಯ್ ಬರೇಲಿಯಿಂದ ಸೋನಿಯಾ ಭಾರಿ ಮತಗಳಿಂದ ಗೆದ್ದಿದ್ದರು. ಸೋನಿಯಾ ಈ ಬಾರಿ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಹೀಗಿರುವಾಗ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ಬಹಳ ದಿನಗಳಿಂದ ನಡೆಯುತ್ತಿತ್ತು.

ಇತ್ತೀಚೆಗಷ್ಟೇ ಹರಿದ್ವಾರಕ್ಕೆ ಆಗಮಿಸಿದ್ದ ರಾಬರ್ಟ್ ವಾದ್ರಾ ಬಳಿ ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂದು ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಸದಾ ನಾಡಿನ ಜನರ ಮಧ್ಯೆ ಇದ್ದೇನೆ ಎಂಬ ಕಾರಣಕ್ಕೆ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂಬ ಧ್ವನಿ ದೇಶದೆಲ್ಲೆಡೆ ಬರುತ್ತಿದೆ. 1999ರಿಂದ ಅಲ್ಲಿಗೆ ಪ್ರಚಾರಕ್ಕೆ ಹೋಗಿದ್ದೆ. ಸೋನಿಯಾ ಗಾಂಧಿಯನ್ನು ಅಲ್ಲಿಂದ ಗೆಲುವಿನತ್ತ ಕರೆತಂದಿದ್ದೆವು. ಜನರು ಯಾವಾಗಲೂ ನಾನು ಅವರ ಜತೆ ಇರಬೇಕೆಂದು ಬಯಸುತ್ತಾರೆ ಎಂದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ