AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ

ಪಂಜಾಬ್​ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧು ಟ್ವೀಟ್​ ಮಾಡಿ, ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ, ಹಿಂಸಾಚಾರಕ್ಕೆ ಕಾರಣರಾದ ಕೇಂದ್ರ ಸಚಿವರ ಪುತ್ರನನ್ನು ನಾಳೆಯೊಳಗೆ ಬಂಧಿಸುವಂತೆ ಆಗ್ರಹಿಸಿದ್ದಾರೆ.

Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ
ಪ್ರಿಯಾಂಕಾ ಗಾಂಧಿ ಬಂಧನ
TV9 Web
| Edited By: |

Updated on:Oct 05, 2021 | 6:15 PM

Share

ಹಿಂಸಾಚಾರ ನಡೆದ ಲಖಿಂಪುರ ಖೇರಿ (Lakhimpur Kheri violence)ಗೆ ನಿನ್ನೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್​ ಪ್ರಧಾನಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra)ರನ್ನು ಸೀತಾಪುರದ ಬಳಿ ಪೊಲೀಸರು ವಶಕ್ಕೆ ಪಡೆದು, ಗೆಸ್ಟ್​ಹೌಸ್​​ನಲ್ಲಿ ಇರಿಸಿದ್ದರು. ಹೀಗೆ ವಶಕ್ಕೆ ಪಡೆದು 24ಗಂಟೆ ಬಳಿಕ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಒಟ್ಟು 10 ಮಂದಿ ಕಾಂಗ್ರೆಸ್​ ನಾಯಕರನ್ನು ಇಂದು ಸೀತಾಪುರ ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಎಲ್ಲರ ವಿರುದ್ಧವೂ ಎಫ್​ಐಆರ್​ ದಾಖಲಿಸಿದ್ದಾರೆ. ಹೀಗೆ ಪ್ರಿಯಾಂಕಾ ಗಾಂಧಿಯವರೊಟ್ಟಿಗೆ ಬಂಧನಕ್ಕೆ ಒಳಗಾದವರಲ್ಲಿ ಕಾಂಗ್ರೆಸ್​ ನಾಯಕ ದೀಪೇಂದರ್ ಸಿಂಗ್​ ಹೂಡಾ, ಯುಪಿ ಕಾಂಗ್ರೆಸ್​ ರಾಜ್ಯ ಅಧ್ಯಕ್ಷ ಅಜಯ್​ ಕುಮಾರ್​ ಲಲ್ಲು, ಪಕ್ಷದ ಎಂಎಲ್​ಸಿ ದೀಪಕ್​ ಸಿಂಗ್​ ಕೂಡ ಇದ್ದಾರೆ. ಕ್ರಿಮಿನಲ್​ ಪ್ರೊಸೀಜರ್​ ಕೋಡ್​ನ ಸೆಕ್ಷನ್​ 151ರ ಅಡಿ ಇವರನ್ನೆಲ್ಲ ಬಂಧಿಸಲಾಗಿದೆ.

ಈ ಬಗ್ಗೆ ಹರ್​ಗಾಂವ್​ ಠಾಣೆ ಅಧಿಕಾರಿ ಬ್ರಿಜೇಶ್​ ಕುಮಾರ್​ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ನಿನ್ನೆ ಪ್ರಿಯಾಂಕಾ ಗಾಂಧಿಯವರು ಲಖಿಂಪುರ ಖೇರಿಗೆ ಹೊರಟಿದ್ದರು. ನಾವು ಅವರನ್ನು ತಡೆದು, ಅಲ್ಲಿ ಸೆಕ್ಷನ್​ 144 ಜಾರಿಯಾಗಿದೆ. ಹಾಗಾಗಿ ನೀವು ಹೋಗುವಂತಿಲ್ಲ ಎಂದು ಹೇಳಿದ್ದೆವು. ಆದರೂ ನಮ್ಮ ಮಾತು ಕೇಳಲಿಲ್ಲ. ಆಗ ಅನಿವಾರ್ಯವಾಗಿ ಅವರನ್ನು ವಶಕ್ಕೆ ಪಡೆದು ಸ್ಥಳೀಯ ಗೆಸ್ಟ್​ಹೌಸ್​​ನಲ್ಲಿ ಇರಿಸಲಾಗಿತ್ತು. ಇಂದು ಬಂಧನವಾಗಿದೆ. ಮುಂದಿನ ಕ್ರಮದ ಬಗ್ಗೆ ಹಿರಿಯ ಅಧಿಕಾರಿಗಳು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಪ್ರತಿಭಟನಾ ಮೆರವಣಿಗೆ ಎಚ್ಚರಿಕೆ ನೀಡಿದ ನವಜೋತ್​ ಸಿಂಗ್ ಸಿಧು ಈ ಮಧ್ಯೆ ಪಂಜಾಬ್​ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧು ಟ್ವೀಟ್​ ಮಾಡಿ, ಭಾನುವಾರ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ, ಹಿಂಸಾಚಾರಕ್ಕೆ ಕಾರಣರಾದ ಕೇಂದ್ರ ಸಚಿವರ ಪುತ್ರನನ್ನು ನಾಳೆಯೊಳಗೆ (ಬುಧವಾರ) ಬಂಧಿಸದೆ ಇದ್ದರೆ ಹಾಗೇ, ಅನಗತ್ಯವಾಗಿ ಬಂಧಿಸಲ್ಪಟ್ಟಿರುವ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನು ಬಿಡುಗಡೆ ಮಾಡದೆ ಇದ್ದರೆ, ಪಂಜಾಬ್​ ಕಾಂಗ್ರೆಸ್​​ನಿಂದ ಲಖಿಂಪುರ ಖೇರಿ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನವಜೋತ್​ ಸಿಂಗ್​ ಸಿಧು ನಿನ್ನೆ ಲಖಿಂಪುರ ಖೇರಿಯಲ್ಲಿ ಹಿಂಸಾಚಾರ ನಡೆದ ಬೆನ್ನಲ್ಲೇ ಚಂಡಿಗಡ್​​ನ ರಾಜ್ಯಪಾಲರ ಭವನದ ಎದುರು ಪ್ರತಿಭಟನೆ ನಡೆಸಿದ್ದರು. ಅದಾದ ಬಳಿಕ ಅವರನ್ನು ಸಾರಂಗಪುರ ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದರು. ಇಂದು ಟ್ವೀಟ್ ಮಾಡಿ, ನೇರವಾಗಿ ಲಖಿಂಪುರ ಖೇರಿಗೇ ಹೋಗುತ್ತೇವೆ ಎಂದಿದ್ದಾರೆ. ತಮ್ಮ ಟ್ವೀಟ್​​ನಲ್ಲಿ ಆಶೀಶ್​ ಮಿಶ್ರಾರ ಹೆಸರನ್ನು ಉಲ್ಲೇಖಿಸದೆ ಇದ್ದರೂ, ಘಟನೆಯ ಹಿಂದೆ ಕೇಂದ್ರ ಸಚಿವರ ಪುತ್ರ ಇದ್ದಾರೆ ಎಂಬುದನ್ನು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಸರ್ಕಾರ ಆರ್​ಎಸ್​ಎಸ್​ ಹಿಡಿತದಲ್ಲಿದೆ; ಕಾಂಗ್ರೆಸ್ ಸರಿಯಾಗಿದ್ದಿದ್ದರೆ ದೇಶ ಹೀಗಿರುತ್ತಿರಲಿಲ್ಲ: ಹೆಚ್​ಡಿ ಕುಮಾರಸ್ವಾಮಿ

Video: ಲಖನೌಗೆ ಪ್ರಧಾನಿ ಮೋದಿ ಭೇಟಿ ಸುದ್ದಿ ಕೇಳಿ ವಿಡಿಯೋ ಬಿಡುಗಡೆ ಮಾಡಿ ‘ನೀವಿದನ್ನು ನೋಡಿದ್ದೀರಾ‘? ಎಂದ ಪ್ರಿಯಾಂಕಾ ಗಾಂಧಿ ವಾದ್ರಾ

Published On - 6:14 pm, Tue, 5 October 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ