AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ

ಪಂಜಾಬ್​ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧು ಟ್ವೀಟ್​ ಮಾಡಿ, ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ, ಹಿಂಸಾಚಾರಕ್ಕೆ ಕಾರಣರಾದ ಕೇಂದ್ರ ಸಚಿವರ ಪುತ್ರನನ್ನು ನಾಳೆಯೊಳಗೆ ಬಂಧಿಸುವಂತೆ ಆಗ್ರಹಿಸಿದ್ದಾರೆ.

Lakhimpur Kheri violence: ಪ್ರಿಯಾಂಕಾ ಗಾಂಧಿ ಸೇರಿ 11 ಕಾಂಗ್ರೆಸ್​ ನಾಯಕರ ಅಧಿಕೃತ ಬಂಧನ; ನವಜೋತ್​ ಸಿಂಗ್​ ಸಿಧುರಿಂದ ಎಚ್ಚರಿಕೆ
ಪ್ರಿಯಾಂಕಾ ಗಾಂಧಿ ಬಂಧನ
TV9 Web
| Edited By: |

Updated on:Oct 05, 2021 | 6:15 PM

Share

ಹಿಂಸಾಚಾರ ನಡೆದ ಲಖಿಂಪುರ ಖೇರಿ (Lakhimpur Kheri violence)ಗೆ ನಿನ್ನೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್​ ಪ್ರಧಾನಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra)ರನ್ನು ಸೀತಾಪುರದ ಬಳಿ ಪೊಲೀಸರು ವಶಕ್ಕೆ ಪಡೆದು, ಗೆಸ್ಟ್​ಹೌಸ್​​ನಲ್ಲಿ ಇರಿಸಿದ್ದರು. ಹೀಗೆ ವಶಕ್ಕೆ ಪಡೆದು 24ಗಂಟೆ ಬಳಿಕ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಒಟ್ಟು 10 ಮಂದಿ ಕಾಂಗ್ರೆಸ್​ ನಾಯಕರನ್ನು ಇಂದು ಸೀತಾಪುರ ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಎಲ್ಲರ ವಿರುದ್ಧವೂ ಎಫ್​ಐಆರ್​ ದಾಖಲಿಸಿದ್ದಾರೆ. ಹೀಗೆ ಪ್ರಿಯಾಂಕಾ ಗಾಂಧಿಯವರೊಟ್ಟಿಗೆ ಬಂಧನಕ್ಕೆ ಒಳಗಾದವರಲ್ಲಿ ಕಾಂಗ್ರೆಸ್​ ನಾಯಕ ದೀಪೇಂದರ್ ಸಿಂಗ್​ ಹೂಡಾ, ಯುಪಿ ಕಾಂಗ್ರೆಸ್​ ರಾಜ್ಯ ಅಧ್ಯಕ್ಷ ಅಜಯ್​ ಕುಮಾರ್​ ಲಲ್ಲು, ಪಕ್ಷದ ಎಂಎಲ್​ಸಿ ದೀಪಕ್​ ಸಿಂಗ್​ ಕೂಡ ಇದ್ದಾರೆ. ಕ್ರಿಮಿನಲ್​ ಪ್ರೊಸೀಜರ್​ ಕೋಡ್​ನ ಸೆಕ್ಷನ್​ 151ರ ಅಡಿ ಇವರನ್ನೆಲ್ಲ ಬಂಧಿಸಲಾಗಿದೆ.

ಈ ಬಗ್ಗೆ ಹರ್​ಗಾಂವ್​ ಠಾಣೆ ಅಧಿಕಾರಿ ಬ್ರಿಜೇಶ್​ ಕುಮಾರ್​ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ನಿನ್ನೆ ಪ್ರಿಯಾಂಕಾ ಗಾಂಧಿಯವರು ಲಖಿಂಪುರ ಖೇರಿಗೆ ಹೊರಟಿದ್ದರು. ನಾವು ಅವರನ್ನು ತಡೆದು, ಅಲ್ಲಿ ಸೆಕ್ಷನ್​ 144 ಜಾರಿಯಾಗಿದೆ. ಹಾಗಾಗಿ ನೀವು ಹೋಗುವಂತಿಲ್ಲ ಎಂದು ಹೇಳಿದ್ದೆವು. ಆದರೂ ನಮ್ಮ ಮಾತು ಕೇಳಲಿಲ್ಲ. ಆಗ ಅನಿವಾರ್ಯವಾಗಿ ಅವರನ್ನು ವಶಕ್ಕೆ ಪಡೆದು ಸ್ಥಳೀಯ ಗೆಸ್ಟ್​ಹೌಸ್​​ನಲ್ಲಿ ಇರಿಸಲಾಗಿತ್ತು. ಇಂದು ಬಂಧನವಾಗಿದೆ. ಮುಂದಿನ ಕ್ರಮದ ಬಗ್ಗೆ ಹಿರಿಯ ಅಧಿಕಾರಿಗಳು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಪ್ರತಿಭಟನಾ ಮೆರವಣಿಗೆ ಎಚ್ಚರಿಕೆ ನೀಡಿದ ನವಜೋತ್​ ಸಿಂಗ್ ಸಿಧು ಈ ಮಧ್ಯೆ ಪಂಜಾಬ್​ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​ ಸಿಧು ಟ್ವೀಟ್​ ಮಾಡಿ, ಭಾನುವಾರ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ, ಹಿಂಸಾಚಾರಕ್ಕೆ ಕಾರಣರಾದ ಕೇಂದ್ರ ಸಚಿವರ ಪುತ್ರನನ್ನು ನಾಳೆಯೊಳಗೆ (ಬುಧವಾರ) ಬಂಧಿಸದೆ ಇದ್ದರೆ ಹಾಗೇ, ಅನಗತ್ಯವಾಗಿ ಬಂಧಿಸಲ್ಪಟ್ಟಿರುವ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನು ಬಿಡುಗಡೆ ಮಾಡದೆ ಇದ್ದರೆ, ಪಂಜಾಬ್​ ಕಾಂಗ್ರೆಸ್​​ನಿಂದ ಲಖಿಂಪುರ ಖೇರಿ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನವಜೋತ್​ ಸಿಂಗ್​ ಸಿಧು ನಿನ್ನೆ ಲಖಿಂಪುರ ಖೇರಿಯಲ್ಲಿ ಹಿಂಸಾಚಾರ ನಡೆದ ಬೆನ್ನಲ್ಲೇ ಚಂಡಿಗಡ್​​ನ ರಾಜ್ಯಪಾಲರ ಭವನದ ಎದುರು ಪ್ರತಿಭಟನೆ ನಡೆಸಿದ್ದರು. ಅದಾದ ಬಳಿಕ ಅವರನ್ನು ಸಾರಂಗಪುರ ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದರು. ಇಂದು ಟ್ವೀಟ್ ಮಾಡಿ, ನೇರವಾಗಿ ಲಖಿಂಪುರ ಖೇರಿಗೇ ಹೋಗುತ್ತೇವೆ ಎಂದಿದ್ದಾರೆ. ತಮ್ಮ ಟ್ವೀಟ್​​ನಲ್ಲಿ ಆಶೀಶ್​ ಮಿಶ್ರಾರ ಹೆಸರನ್ನು ಉಲ್ಲೇಖಿಸದೆ ಇದ್ದರೂ, ಘಟನೆಯ ಹಿಂದೆ ಕೇಂದ್ರ ಸಚಿವರ ಪುತ್ರ ಇದ್ದಾರೆ ಎಂಬುದನ್ನು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಸರ್ಕಾರ ಆರ್​ಎಸ್​ಎಸ್​ ಹಿಡಿತದಲ್ಲಿದೆ; ಕಾಂಗ್ರೆಸ್ ಸರಿಯಾಗಿದ್ದಿದ್ದರೆ ದೇಶ ಹೀಗಿರುತ್ತಿರಲಿಲ್ಲ: ಹೆಚ್​ಡಿ ಕುಮಾರಸ್ವಾಮಿ

Video: ಲಖನೌಗೆ ಪ್ರಧಾನಿ ಮೋದಿ ಭೇಟಿ ಸುದ್ದಿ ಕೇಳಿ ವಿಡಿಯೋ ಬಿಡುಗಡೆ ಮಾಡಿ ‘ನೀವಿದನ್ನು ನೋಡಿದ್ದೀರಾ‘? ಎಂದ ಪ್ರಿಯಾಂಕಾ ಗಾಂಧಿ ವಾದ್ರಾ

Published On - 6:14 pm, Tue, 5 October 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು