AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಹುದೊಡ್ಡ ದಾಖಲೆಗಳನ್ನೇ ನಿರ್ಮಿಸಿದೆ’-ಟ್ವೀಟ್​ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ

Priyanka Gandhi Vadra: ದೇಶದಲ್ಲಿ ಸದ್ಯ ಪೆಟ್ರೋಲ್​-ಡೀಸೆಲ್​ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಕೂಡ ಬೆಲೆಯಲ್ಲಿ 30-35 ಪೈಸೆಗಳಷ್ಟು ಏರಿಕೆಯಾಗಿದೆ.

‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಹುದೊಡ್ಡ ದಾಖಲೆಗಳನ್ನೇ ನಿರ್ಮಿಸಿದೆ’-ಟ್ವೀಟ್​ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Updated By: Lakshmi Hegde|

Updated on: Oct 24, 2021 | 3:37 PM

Share

ದೆಹಲಿ: ಜನಸಾಮಾನ್ಯರಿಗೆ ತೊಂದರೆ ಕೊಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಾಖಲೆಗಳನ್ನು ನಿರ್ಮಿಸಿದೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಹಣದುಬ್ಬರ ಶುರುವಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದೂ ಕಿಡಿಕಾರಿದ್ದಾರೆ. 

ಪೆಟ್ರೋಲ್​ ಬೆಲೆ ಏರಿಕೆಯಾಗುತ್ತಿದೆ ಎಂಬ ಮಾಧ್ಯಮ ವರದಿಯೊಂದನ್ನು ಶೇರ್​ ಮಾಡಿಕೊಂಡಿರುವ ಪ್ರಿಯಾಂಕಾ ಗಾಂಧಿ,  ಮೋದಿ ಜೀ ಸರ್ಕಾರ ಸಾರ್ವಜನಿಕರಿಗೆ ತೊಂದರೆ ಕೊಡುವುದರಲ್ಲಿ ಬಹುದೊಡ್ಡ ದಾಖಲೆಗಳನ್ನು ನಿರ್ಮಿಸುತ್ತಿದೆ. ನಿರುದ್ಯೋಗ ಮಿತಿಮೀರಿದೆ. ಸರ್ಕಾರಿ ಆಸ್ತಿಗಳು ಮಾರಾಟವಾಗುತ್ತಿವೆ. ಪೆಟ್ರೋಲ್​ ರೇಟ್​ ವಿಪರೀತ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್​ ಹಿರಿಯ ವಕ್ತಾರ ರಣದೀಪ್​ ಸುರ್ಜೇವಾಲಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದೇ ಮಾಧ್ಯಮ ವರದಿಯನ್ನು ಶೇರ್​ ಮಾಡಿಕೊಂಡು ಅಚ್ಛೆ ದಿನ್​ (ಒಳ್ಳೆಯ ದಿನಗಳು) ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಪೆಟ್ರೋಲ್​ ಏರಿಕೆ ವಿರುದ್ಧ ಅಭಿಯಾನ ಈ ವರ್ಷ ಇಲ್ಲಿಯವರೆಗೆ ಒಟ್ಟು 23.50 ರೂ. ಹೆಚ್ಚಾಗಿದ್ದು ದಾಖಲೆ ಎಂದು ಕಾಂಗ್ರೆಸ್ ಆರೋಪಿಸಿದೆ.  ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ನವೆಂಬರ್​ 14ರಿಂದ 29ರವರೆಗೆ ಸಾಮೂಹಿಕ ಆಂದೋಲನ ನಡೆಸಲು ಪಕ್ಷ ನಿರ್ಧಾರ ಮಾಡಿದೆ. ಕಾಂಗ್ರೆಸ್​​ನ ಪ್ರಮುಖ ನಾಯಕರು ತಮ್ಮ ತಮ್ಮ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ತಿಳಿಸಿದ್ದಾರೆ.

ನಿರಂತರವಾಗಿ ಏರುತ್ತಿದೆ ಇಂಧನ ದರ ದೇಶದಲ್ಲಿ ಸದ್ಯ ಪೆಟ್ರೋಲ್​-ಡೀಸೆಲ್​ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಕೂಡ ಬೆಲೆಯಲ್ಲಿ 30-35 ಪೈಸೆಗಳಷ್ಟು ಏರಿಕೆಯಾಗಿದೆ. ದೆಹಲಿಯಲ್ಲಿ 35 ಪೈಸೆ ಏರಿಕೆಯಾಗಿದ್ದು, ಸದ್ಯ ಅಲ್ಲಿ ಒಂದು ಲೀಟರ್​ ಪೆಟ್ರೋಲ್​​ಗೆ 107.59 ರೂ.ಇದೆ.

ಇದನ್ನೂ ಓದಿ: ದಾವಣಗೆರೆ: ಸೂಳೆಕೆರೆ ಕೋಡಿ ಬಿದ್ದ ಹಿನ್ನೆಲೆ ಕೆಂಗಾಪುರ ಕಣಿವೆ ಬಿಳಚಿ ಮಧ್ಯೆ ಇರುವ ಸೇತುವೆ​ ಜಲಾವೃತ

ನೋರಾ ಫತೇಹಿಗೆ ಗಿಫ್ಟ್​ ಆಗಿ ಸಿಕ್ಕಿತ್ತು ಐಷಾರಾಮಿ ಕಾರು; ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿಗೆ ಸಂಕಷ್ಟ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ