AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಹುದೊಡ್ಡ ದಾಖಲೆಗಳನ್ನೇ ನಿರ್ಮಿಸಿದೆ’-ಟ್ವೀಟ್​ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ

Priyanka Gandhi Vadra: ದೇಶದಲ್ಲಿ ಸದ್ಯ ಪೆಟ್ರೋಲ್​-ಡೀಸೆಲ್​ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಕೂಡ ಬೆಲೆಯಲ್ಲಿ 30-35 ಪೈಸೆಗಳಷ್ಟು ಏರಿಕೆಯಾಗಿದೆ.

‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಹುದೊಡ್ಡ ದಾಖಲೆಗಳನ್ನೇ ನಿರ್ಮಿಸಿದೆ’-ಟ್ವೀಟ್​ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Edited By: |

Updated on: Oct 24, 2021 | 3:37 PM

Share

ದೆಹಲಿ: ಜನಸಾಮಾನ್ಯರಿಗೆ ತೊಂದರೆ ಕೊಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಾಖಲೆಗಳನ್ನು ನಿರ್ಮಿಸಿದೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಹಣದುಬ್ಬರ ಶುರುವಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದೂ ಕಿಡಿಕಾರಿದ್ದಾರೆ. 

ಪೆಟ್ರೋಲ್​ ಬೆಲೆ ಏರಿಕೆಯಾಗುತ್ತಿದೆ ಎಂಬ ಮಾಧ್ಯಮ ವರದಿಯೊಂದನ್ನು ಶೇರ್​ ಮಾಡಿಕೊಂಡಿರುವ ಪ್ರಿಯಾಂಕಾ ಗಾಂಧಿ,  ಮೋದಿ ಜೀ ಸರ್ಕಾರ ಸಾರ್ವಜನಿಕರಿಗೆ ತೊಂದರೆ ಕೊಡುವುದರಲ್ಲಿ ಬಹುದೊಡ್ಡ ದಾಖಲೆಗಳನ್ನು ನಿರ್ಮಿಸುತ್ತಿದೆ. ನಿರುದ್ಯೋಗ ಮಿತಿಮೀರಿದೆ. ಸರ್ಕಾರಿ ಆಸ್ತಿಗಳು ಮಾರಾಟವಾಗುತ್ತಿವೆ. ಪೆಟ್ರೋಲ್​ ರೇಟ್​ ವಿಪರೀತ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್​ ಹಿರಿಯ ವಕ್ತಾರ ರಣದೀಪ್​ ಸುರ್ಜೇವಾಲಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದೇ ಮಾಧ್ಯಮ ವರದಿಯನ್ನು ಶೇರ್​ ಮಾಡಿಕೊಂಡು ಅಚ್ಛೆ ದಿನ್​ (ಒಳ್ಳೆಯ ದಿನಗಳು) ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಪೆಟ್ರೋಲ್​ ಏರಿಕೆ ವಿರುದ್ಧ ಅಭಿಯಾನ ಈ ವರ್ಷ ಇಲ್ಲಿಯವರೆಗೆ ಒಟ್ಟು 23.50 ರೂ. ಹೆಚ್ಚಾಗಿದ್ದು ದಾಖಲೆ ಎಂದು ಕಾಂಗ್ರೆಸ್ ಆರೋಪಿಸಿದೆ.  ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ನವೆಂಬರ್​ 14ರಿಂದ 29ರವರೆಗೆ ಸಾಮೂಹಿಕ ಆಂದೋಲನ ನಡೆಸಲು ಪಕ್ಷ ನಿರ್ಧಾರ ಮಾಡಿದೆ. ಕಾಂಗ್ರೆಸ್​​ನ ಪ್ರಮುಖ ನಾಯಕರು ತಮ್ಮ ತಮ್ಮ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ತಿಳಿಸಿದ್ದಾರೆ.

ನಿರಂತರವಾಗಿ ಏರುತ್ತಿದೆ ಇಂಧನ ದರ ದೇಶದಲ್ಲಿ ಸದ್ಯ ಪೆಟ್ರೋಲ್​-ಡೀಸೆಲ್​ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಕೂಡ ಬೆಲೆಯಲ್ಲಿ 30-35 ಪೈಸೆಗಳಷ್ಟು ಏರಿಕೆಯಾಗಿದೆ. ದೆಹಲಿಯಲ್ಲಿ 35 ಪೈಸೆ ಏರಿಕೆಯಾಗಿದ್ದು, ಸದ್ಯ ಅಲ್ಲಿ ಒಂದು ಲೀಟರ್​ ಪೆಟ್ರೋಲ್​​ಗೆ 107.59 ರೂ.ಇದೆ.

ಇದನ್ನೂ ಓದಿ: ದಾವಣಗೆರೆ: ಸೂಳೆಕೆರೆ ಕೋಡಿ ಬಿದ್ದ ಹಿನ್ನೆಲೆ ಕೆಂಗಾಪುರ ಕಣಿವೆ ಬಿಳಚಿ ಮಧ್ಯೆ ಇರುವ ಸೇತುವೆ​ ಜಲಾವೃತ

ನೋರಾ ಫತೇಹಿಗೆ ಗಿಫ್ಟ್​ ಆಗಿ ಸಿಕ್ಕಿತ್ತು ಐಷಾರಾಮಿ ಕಾರು; ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿಗೆ ಸಂಕಷ್ಟ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ