AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಮನೆ ಖಾಲಿ ಮಾಡಿಸಿತು! ಪ್ರಿಯಾಂಕಾ ವಾದ್ರಾ ಈಗ ಎಲ್ಲಿಗೆ ಹೋಗ್ತಾರೆ ಗೊತ್ತಾ?

ದೆಹಲಿ: ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ನೀಡಿದ್ದ ವಿಶಿಷ್ಟ SPG (ಸ್ಪೆಷಲ್ ಪ್ರೊಟೆಕ್ಷನ್​ ಗ್ರೂಪ್​) ಭದ್ರತೆಯನ್ನ ವಾಪಸ್​ ಪಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್​ ನೀಡಿದೆ. ಕಳೆದ ಹಲವಾರು ವರ್ಷಗಳಿಂದ ತಾವು ವಾಸವಾಗಿದ್ದ ಸರ್ಕಾರಿ ಬಂಗಲೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡಲು ಅವರಿಗೆ ಸೂಚಿಸಿದೆ. ನಿಯಮಗಳ ಪ್ರಕಾರ SPG ಭದ್ರತೆಯನ್ನು ಹಿಂಪಡೆದಿರುವ ಕಾರಣ ಸರ್ಕಾರಿ ನಿವಾಸದಲ್ಲಿ ಪ್ರಿಯಾಂಕಾ ವಾದ್ರಾ ವಾಸ್ತವ್ಯ ಹೂಡುವಂತಿಲ್ಲ. ಹಾಗಾಗಿ, ಪ್ರಿಯಾಂಕಾಗೆ ತಮ್ಮ ನಿವಾಸವನ್ನು ಖಾಲಿ ಮಾಡಲು ಸೂಚಿಸಲಾಗಿದೆ […]

ಸರ್ಕಾರ ಮನೆ ಖಾಲಿ ಮಾಡಿಸಿತು! ಪ್ರಿಯಾಂಕಾ ವಾದ್ರಾ ಈಗ ಎಲ್ಲಿಗೆ ಹೋಗ್ತಾರೆ ಗೊತ್ತಾ?
ಪ್ರಿಯಾಂಕಾ ಗಾಂಧಿ
KUSHAL V
| Edited By: |

Updated on: Jul 02, 2020 | 2:19 PM

Share

ದೆಹಲಿ: ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ನೀಡಿದ್ದ ವಿಶಿಷ್ಟ SPG (ಸ್ಪೆಷಲ್ ಪ್ರೊಟೆಕ್ಷನ್​ ಗ್ರೂಪ್​) ಭದ್ರತೆಯನ್ನ ವಾಪಸ್​ ಪಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್​ ನೀಡಿದೆ. ಕಳೆದ ಹಲವಾರು ವರ್ಷಗಳಿಂದ ತಾವು ವಾಸವಾಗಿದ್ದ ಸರ್ಕಾರಿ ಬಂಗಲೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡಲು ಅವರಿಗೆ ಸೂಚಿಸಿದೆ.

ನಿಯಮಗಳ ಪ್ರಕಾರ SPG ಭದ್ರತೆಯನ್ನು ಹಿಂಪಡೆದಿರುವ ಕಾರಣ ಸರ್ಕಾರಿ ನಿವಾಸದಲ್ಲಿ ಪ್ರಿಯಾಂಕಾ ವಾದ್ರಾ ವಾಸ್ತವ್ಯ ಹೂಡುವಂತಿಲ್ಲ. ಹಾಗಾಗಿ, ಪ್ರಿಯಾಂಕಾಗೆ ತಮ್ಮ ನಿವಾಸವನ್ನು ಖಾಲಿ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಹಾಗಾದ್ರೆ ಪ್ರಿಯಾಂಕಾ ಎಲ್ಲಿ ವಾಸ್ತವ್ಯ ಹೂಡಲಿದ್ದಾರೆ..? ಮೂಲಗಳ ಪ್ರಕಾರ ಪ್ರಿಯಾಂಕಾ, ಉತ್ತರ ಪ್ರದೇಶದ ರಾಜಧಾನಿ ಲಕ್ನೋಗೆ ಶಿಫ್ಟ್ ಆಗಲಿದ್ದಾರೆ. ಅಲ್ಲಿ ದೊಡ್ಡ ಬಂಗಲೆಯೊಂದರಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗ್ತಿದೆ. ಲಕ್ನೋದ ಗೋಖಲೆ ಮಾರ್ಗದಲ್ಲಿರುವ ಈ ನಿವಾಸ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ತಿರದ ಸಂಬಂಧಿಯಾಗಿದ್ದ ಮಾಜಿ ಕೇಂದ್ರ ಸಚಿವೆ ಶೀಲಾ ಕೌಲ್​ಗೆ ಸೇರಿದ್ದು. ಹೀಗಾಗಿ ಇದೇ ಬಂಗಲೆಯಲ್ಲಿ ವಾಸವಿರಲು ಪ್ರಿಯಾಂಕಾ ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ.

ಜೊತೆಗೆ ಪಕ್ಷದ ಕಡೆಯಿಂದ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾಗೆ 2022ರಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯ ಪೂರ್ವ ಸಿದ್ಧತೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಮತ್ತಷ್ಟು ನೆರವಾಗುತ್ತದೆ ಎಂಬ ಮಾಹಿತಿ ಇದೆ. ಆದರೆ, ಸದ್ಯಕ್ಕೆ ಅವರಿಗೆ Z+ ಕೆಟಗರಿ ಭದ್ರತೆ ನೀಡಿರುವ ಹಿನ್ನೆಲೆಯಲ್ಲಿ ಈ ನಿವಾಸವನ್ನ ಆಯ್ಕೆ ಮಾಡಲು SPG ಅನುಮತಿ ಪಡೆಯಬೇಕಾಗುತ್ತದೆ. ಹೀಗಾಗಿ ಭದ್ರತಾ ಸಂಸ್ಥೆಯಿಂದ ಅನುಮತಿ ಸಿಕ್ಕ ನಂತರ ಅವರು ಅಲ್ಲಿಗೆ ಶಿಫ್ಟ್​ ಆಗ್ತಾರೆ ಎಂದು ಹೇಳಲಾಗಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!