AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಮನೆ ಖಾಲಿ ಮಾಡಿಸಿತು! ಪ್ರಿಯಾಂಕಾ ವಾದ್ರಾ ಈಗ ಎಲ್ಲಿಗೆ ಹೋಗ್ತಾರೆ ಗೊತ್ತಾ?

ದೆಹಲಿ: ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ನೀಡಿದ್ದ ವಿಶಿಷ್ಟ SPG (ಸ್ಪೆಷಲ್ ಪ್ರೊಟೆಕ್ಷನ್​ ಗ್ರೂಪ್​) ಭದ್ರತೆಯನ್ನ ವಾಪಸ್​ ಪಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್​ ನೀಡಿದೆ. ಕಳೆದ ಹಲವಾರು ವರ್ಷಗಳಿಂದ ತಾವು ವಾಸವಾಗಿದ್ದ ಸರ್ಕಾರಿ ಬಂಗಲೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡಲು ಅವರಿಗೆ ಸೂಚಿಸಿದೆ. ನಿಯಮಗಳ ಪ್ರಕಾರ SPG ಭದ್ರತೆಯನ್ನು ಹಿಂಪಡೆದಿರುವ ಕಾರಣ ಸರ್ಕಾರಿ ನಿವಾಸದಲ್ಲಿ ಪ್ರಿಯಾಂಕಾ ವಾದ್ರಾ ವಾಸ್ತವ್ಯ ಹೂಡುವಂತಿಲ್ಲ. ಹಾಗಾಗಿ, ಪ್ರಿಯಾಂಕಾಗೆ ತಮ್ಮ ನಿವಾಸವನ್ನು ಖಾಲಿ ಮಾಡಲು ಸೂಚಿಸಲಾಗಿದೆ […]

ಸರ್ಕಾರ ಮನೆ ಖಾಲಿ ಮಾಡಿಸಿತು! ಪ್ರಿಯಾಂಕಾ ವಾದ್ರಾ ಈಗ ಎಲ್ಲಿಗೆ ಹೋಗ್ತಾರೆ ಗೊತ್ತಾ?
ಪ್ರಿಯಾಂಕಾ ಗಾಂಧಿ
KUSHAL V
| Edited By: |

Updated on: Jul 02, 2020 | 2:19 PM

Share

ದೆಹಲಿ: ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ನೀಡಿದ್ದ ವಿಶಿಷ್ಟ SPG (ಸ್ಪೆಷಲ್ ಪ್ರೊಟೆಕ್ಷನ್​ ಗ್ರೂಪ್​) ಭದ್ರತೆಯನ್ನ ವಾಪಸ್​ ಪಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್​ ನೀಡಿದೆ. ಕಳೆದ ಹಲವಾರು ವರ್ಷಗಳಿಂದ ತಾವು ವಾಸವಾಗಿದ್ದ ಸರ್ಕಾರಿ ಬಂಗಲೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡಲು ಅವರಿಗೆ ಸೂಚಿಸಿದೆ.

ನಿಯಮಗಳ ಪ್ರಕಾರ SPG ಭದ್ರತೆಯನ್ನು ಹಿಂಪಡೆದಿರುವ ಕಾರಣ ಸರ್ಕಾರಿ ನಿವಾಸದಲ್ಲಿ ಪ್ರಿಯಾಂಕಾ ವಾದ್ರಾ ವಾಸ್ತವ್ಯ ಹೂಡುವಂತಿಲ್ಲ. ಹಾಗಾಗಿ, ಪ್ರಿಯಾಂಕಾಗೆ ತಮ್ಮ ನಿವಾಸವನ್ನು ಖಾಲಿ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಹಾಗಾದ್ರೆ ಪ್ರಿಯಾಂಕಾ ಎಲ್ಲಿ ವಾಸ್ತವ್ಯ ಹೂಡಲಿದ್ದಾರೆ..? ಮೂಲಗಳ ಪ್ರಕಾರ ಪ್ರಿಯಾಂಕಾ, ಉತ್ತರ ಪ್ರದೇಶದ ರಾಜಧಾನಿ ಲಕ್ನೋಗೆ ಶಿಫ್ಟ್ ಆಗಲಿದ್ದಾರೆ. ಅಲ್ಲಿ ದೊಡ್ಡ ಬಂಗಲೆಯೊಂದರಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗ್ತಿದೆ. ಲಕ್ನೋದ ಗೋಖಲೆ ಮಾರ್ಗದಲ್ಲಿರುವ ಈ ನಿವಾಸ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ತಿರದ ಸಂಬಂಧಿಯಾಗಿದ್ದ ಮಾಜಿ ಕೇಂದ್ರ ಸಚಿವೆ ಶೀಲಾ ಕೌಲ್​ಗೆ ಸೇರಿದ್ದು. ಹೀಗಾಗಿ ಇದೇ ಬಂಗಲೆಯಲ್ಲಿ ವಾಸವಿರಲು ಪ್ರಿಯಾಂಕಾ ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ.

ಜೊತೆಗೆ ಪಕ್ಷದ ಕಡೆಯಿಂದ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾಗೆ 2022ರಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯ ಪೂರ್ವ ಸಿದ್ಧತೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಮತ್ತಷ್ಟು ನೆರವಾಗುತ್ತದೆ ಎಂಬ ಮಾಹಿತಿ ಇದೆ. ಆದರೆ, ಸದ್ಯಕ್ಕೆ ಅವರಿಗೆ Z+ ಕೆಟಗರಿ ಭದ್ರತೆ ನೀಡಿರುವ ಹಿನ್ನೆಲೆಯಲ್ಲಿ ಈ ನಿವಾಸವನ್ನ ಆಯ್ಕೆ ಮಾಡಲು SPG ಅನುಮತಿ ಪಡೆಯಬೇಕಾಗುತ್ತದೆ. ಹೀಗಾಗಿ ಭದ್ರತಾ ಸಂಸ್ಥೆಯಿಂದ ಅನುಮತಿ ಸಿಕ್ಕ ನಂತರ ಅವರು ಅಲ್ಲಿಗೆ ಶಿಫ್ಟ್​ ಆಗ್ತಾರೆ ಎಂದು ಹೇಳಲಾಗಿದೆ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ