AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸಗೊಬ್ಬರಕ್ಕಾಗಿ ಸರದಿ ಸಾಲಿನಲ್ಲಿ ನಿಂತು ಮೃತಪಟ್ಟ ರೈತರ ಕುಟುಂಬ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ

Priyanka Gandhi Vadra . ಈ ವೇಳೆ ಮಾಧ್ಯಮದವರಲ್ಲಿ ಮಾತನಾಡಿದ ಪ್ರಿಯಾಂಕಾ ಉತ್ತರ ಪ್ರದೇಶ ಸರ್ಕಾರ ರೈತರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಕಡಿಮೆ ಪ್ರಮಾಣದ ರಸಗೊಬ್ಬರವನ್ನು ಈಗ ಗೋಣಿಚೀಲಗಳಲ್ಲಿ ನೀಡಲಾಗುತ್ತಿದೆ ಮತ್ತು ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು.

ರಸಗೊಬ್ಬರಕ್ಕಾಗಿ ಸರದಿ ಸಾಲಿನಲ್ಲಿ ನಿಂತು ಮೃತಪಟ್ಟ ರೈತರ ಕುಟುಂಬ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 29, 2021 | 1:01 PM

Share

ಲಲಿತ್‌ಪುರ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ಸರದಿ ಸಾಲಿನಲ್ಲಿ ನಿಂತು ಅನಾರೋಗ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ನಾಲ್ವರು ರೈತರ ಕುಟುಂಬಗಳನ್ನು ಭೇಟಿ ಮಾಡಿದರು. ಈ ವೇಳೆ ಮಾಧ್ಯಮದವರಲ್ಲಿ ಮಾತನಾಡಿದ ಪ್ರಿಯಾಂಕಾ ಉತ್ತರ ಪ್ರದೇಶ ಸರ್ಕಾರ ರೈತರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಕಡಿಮೆ ಪ್ರಮಾಣದ ರಸಗೊಬ್ಬರವನ್ನು ಈಗ ಗೋಣಿಚೀಲಗಳಲ್ಲಿ ನೀಡಲಾಗುತ್ತಿದೆ ಮತ್ತು ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು. ಅವರಿಗೆ ಸಾಕಷ್ಟು ಸಮಸ್ಯೆಗಳಿವೆ ಆದರೆ ಸರ್ಕಾರ ಕೇಳುತ್ತಿಲ್ಲ. ರೈತರು ತಿಂಗಳಾನುಗಟ್ಟಲೆ ರಸ್ತೆಗಿಳಿದಿರುವುದು ಅವರಿಗೆ ಗೊತ್ತಿದೆ. ಅವರ ಮೇಲೆ ವಾಹನಗಳನ್ನು ಹರಿಸಲಾಗಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

“ನೋವು ಹಂಚಿಕೊಳ್ಳುವುದು ನಮ್ಮ ಸಂಪ್ರದಾಯ. ಗ್ರಾಮ, ಬಡವರು, ಕಾರ್ಮಿಕರು, ರೈತರ ನೋವು ಕಾಂಗ್ರೆಸ್‌ನ ನೋವು, ” ಎಂದು ಉತ್ತರ ಪ್ರದೇಶ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ ಕಾಂಗ್ರೆಸ್ ನಾಯಕಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದೆ.

ಸಾವನ್ನಪ್ಪಿದ ರೈತರಲ್ಲಿ 53 ವರ್ಷದ ಭೋಗಿಲಾಲ್ ಪಾಲ್ ಕೂಡ ಸೇರಿದ್ದಾರೆ, ಅವರು ಶುಕ್ರವಾರ ಸತತ ಎರಡನೇ ದಿನವೂ ನಾಯಗಾಂವ್ ಗ್ರಾಮದಲ್ಲಿ ತಮ್ಮ ಜಮೀನಿಗೆ ರಸಗೊಬ್ಬರಗಳನ್ನು ಸಂಗ್ರಹಿಸಲು ಅಂಗಡಿಯ ಹೊರಗೆ ಸರದಿ ಸಾಲಿನಲ್ಲಿ ನಿಂತಿದ್ದಾಗ ಕುಸಿದು ಬಿದ್ದಿದ್ದರು.

”ಸರ್ಕಾರ ವಿಫಲವಾಗಿದೆ, ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇದು ಕೇವಲ ಈ ನಾಲ್ವರು ರೈತರ ಸಮಸ್ಯೆಯಲ್ಲ, ಇಡೀ ಬುಂದೇಲ್‌ಖಂಡ್ ಎದುರಿಸುತ್ತಿರುವ ಸಮಸ್ಯೆಯಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆಡಳಿತದ ಪ್ರಕಾರ, ಇತ್ತೀಚೆಗೆ ಮಳೆಯಿಂದಾಗಿ ರಸಗೊಬ್ಬರಗಳ ಬೇಡಿಕೆ ಹೆಚ್ಚಾಗಿದೆ. ಈ ಕುಟುಂಬಕ್ಕೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವಂತೆ ಜಿಲ್ಲಾಧಿಕಾರಿ ಅಣ್ಣಾವಿ ದಿನೇಶ್ ಕುಮಾರ್ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಮೃತ ರೈತನ ಸೋದರಳಿಯ ಪ್ರಕಾರ, ಪಾಲ್ ಕಳೆದ ಕೆಲವು ದಿನಗಳಲ್ಲಿ ಹಲವಾರು ಅಂಗಡಿಗಳಿಗೆ ಭೇಟಿ ನೀಡಿ ರಸಗೊಬ್ಬರ ವ್ಯವಸ್ಥೆ ಮಾಡಲು ಪ್ರಯತ್ನಿಸಿದ್ದರು. ಆದರೆ, ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಆಡಳಿತ ಹೇಳಿದೆ.

ಇದನ್ನೂ ಓದಿ: ಗಾಜಿಪುರ, ಟಿಕ್ರಿಯಲ್ಲಿ ಬ್ಯಾರಿಕೇಡ್‌ ತೆರವು; ರೈತರು ಸಂಸತ್​​ಗೆ ಹೋಗಲಿದ್ದಾರೆ ಎಂದ ರಾಕೇಶ್ ಟಿಕಾಯತ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ