AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಂಟ್ ಅನ್ನಪೂರ್ಣ ಏರಿದ ದೇಶದ ಮೊದಲ ಮಹಿಳೆ; ಪರ್ವತಾರೋಹಿ ಪ್ರಿಯಾಂಕ ಮೊಹಿತೆ ಹೊಸ ದಾಖಲೆ

ಬಯೊಕಾನ್ ಕಾರ್ಯನಿರ್ವಾಹಕ ಅಧಿಕಾರಿ, ಪರ್ವತಾರೋಹಿ ರಾಷ್ಟ್ರಧ್ವಜ ಹಿಡಿದುಕೊಂಡಿರುವ ಫೊಟೊವನ್ನು ಕೂಡ ಹಂಚಿಕೊಂಡಿದ್ದಾರೆ. ಮೌಂಟ್ ಅನ್ನಪೂರ್ಣ ನೇಪಾಳದಲ್ಲಿ ಇರುವ ಹಿಮಾಲಯಾ ಶ್ರೇಣಿಯ ಶಿಖರವಾಗಿದೆ. ಹಾಗೂ ಆರೋಹಕ್ಕೆ ಬಲುಕಠಿಣವಾಗಿರುವ ಶಿಖರ ಇದು ಎಂದು ಗುರುತಿಸಿಕೊಂಡಿದೆ.

ಮೌಂಟ್ ಅನ್ನಪೂರ್ಣ ಏರಿದ ದೇಶದ ಮೊದಲ ಮಹಿಳೆ; ಪರ್ವತಾರೋಹಿ ಪ್ರಿಯಾಂಕ ಮೊಹಿತೆ ಹೊಸ ದಾಖಲೆ
ಪರ್ವತಾರೋಹಿ ಪ್ರಿಯಾಂಕ ಮೊಹಿತೆ
TV9 Web
| Edited By: |

Updated on:Nov 30, 2021 | 12:16 PM

Share

ವಿಶ್ವದ ಹತ್ತನೇ ಅತಿ ಎತ್ತರದ ಪರ್ವತ ಶಿಖರ ಮೌಂಟ್ ಅನ್ನಪೂರ್ಣವನ್ನು ಪಶ್ಚಿಮ ಮಹಾರಾಷ್ಟ್ರದ ಪ್ರಿಯಾಂಕ ಮೊಹಿತೆ ಎಂಬಾಕೆ ಆರೋಹಣ ಮಾಡಿದ್ದಾರೆ. ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. 28 ವರ್ಷದ ಪ್ರಿಯಾಂಕ ಎಂಬವರು ಮೌಂಟ್ ಅನ್ನಪೂರ್ಣ ಶಿಖರವನ್ನು ಏರಿರುವ ಬಗ್ಗೆ, ಸಹೋದ್ಯೋಗಿ ಮತ್ತು ಬಯೊಕಾನ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಮಾಜುಮ್​ದಾರ್ ಶಾ ಎಂಬವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ನಮ್ಮ ಸಹೋದ್ಯೋಗಿ ಪ್ರಿಯಾಂಕ ಮೊಹಿತೆ, 8091 ಮೀಟರ್ ಎತ್ತರದ ಹಾಗೂ ವಿಶ್ವದ ಹತ್ತನೇ ಅತಿ ಎತ್ತರದ ಶಿಖರವಾಗಿರುವ ಮೌಂಟ್ ಅನ್ನಪೂರ್ಣ ಪರ್ವತವನ್ನು ಏರಿದ್ದಾರೆ. 2021 ಏಪ್ರಿಲ್ 16ರಂದು ಮಧ್ಯಾಹ್ನ 1.30ರ ವೇಳೆಗೆ ಶಿಖರದ ತುದಿ ತಲುಪಿದ್ದಾರೆ. ಪ್ರಿಯಾಂಕ, ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳೆಯಾಗಿದ್ದಾರೆ. ನಾವು ಈ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದು ಕಿರಣ್ ಮಜುಮ್​ದಾರ್ ಶಾ ಟ್ವೀಟ್ ಮಾಡಿದ್ದಾರೆ.

ಬಯೊಕಾನ್ ಕಾರ್ಯನಿರ್ವಾಹಕ ಅಧಿಕಾರಿ, ಪರ್ವತಾರೋಹಿ ರಾಷ್ಟ್ರಧ್ವಜ ಹಿಡಿದುಕೊಂಡಿರುವ ಫೊಟೊವನ್ನು ಕೂಡ ಹಂಚಿಕೊಂಡಿದ್ದಾರೆ. ಮೌಂಟ್ ಅನ್ನಪೂರ್ಣ ನೇಪಾಳದಲ್ಲಿ ಇರುವ ಹಿಮಾಲಯಾ ಶ್ರೇಣಿಯ ಶಿಖರವಾಗಿದೆ. ಹಾಗೂ ಆರೋಹಕ್ಕೆ ಬಲುಕಠಿಣವಾಗಿರುವ ಶಿಖರ ಇದು ಎಂದು ಗುರುತಿಸಿಕೊಂಡಿದೆ.

ಪರ್ವತಾರೋಹಿ ಪ್ರಿಯಾಂಕ ಮೊಹಿತೆ 2013ರಲ್ಲಿ 8,849 ಮೀಟರ್ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ್ದರು. 2018ರಲ್ಲಿ 8,516 ಮೀಟರ್ ಎತ್ತರದ ಮೌಂಟ್ ಲೋಟ್ಸೆ ಶಿಖರವನ್ನು, 8,485 ಮೀಟರ್ ಎತ್ತರದ ಮೌಂಟ್ ಮಕಲು ಶಿಖರವನ್ನು ಹಾಗೂ 2016ರಲ್ಲಿ 5,895 ಮೀಟರ್ ಎತ್ತರದ ಮೌಂಟ್ ಕಿಲಿಮಂಜಾರೋ ಪರ್ವತವನ್ನು ಏರಿದ್ದರು.

ತಮ್ಮ ಬಾಲ್ಯದಿಂದಲೂ ಪರ್ವತಾರೋಹಣದ ಬಗ್ಗೆ ಆಸಕ್ತಿ ಹೊಂದಿರುವ ಪ್ರಿಯಾಂಕ, ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿ ಪರ್ವತಗಳನ್ನು ಹತ್ತುತ್ತಾ ಪರ್ವತಾರೋಹಣ ಅಭ್ಯಾಸ ಮಾಡಿಕೊಂಡರು. ಹಿಮಾಲಯದ ಗರ್​ವಾಲ್ ವಿಭಾಗದ ಶ್ರೇಣಿಯನ್ನು ಆರೋಹಣ ಮಾಡುವ ಮೂಲಕ 2012ರಲ್ಲಿ ಅಧಿಕೃತವಾಗಿ ಪರ್ವತ ಶ್ರೇಣಿ ಏರಲು ಆರಂಭಿಸಿದ್ದರು ಎಂದು ಪ್ರಿಯಾಂಕ ಸಹೋದರ ಆಕಾಶ್ ಮೊಹಿತೆ ಪಿಟಿಐಗೆ ತಿಳಿಸಿದ್ದಾರೆ. ಬೆಂಗಳೂರು ಮೂಲದ ಪರ್ವತಾರೋಹಿ, ಮಹಾರಾಷ್ಟ್ರ ಸರ್ಕಾರದ 2017-18 ಸಾಲಿನ ಶಿವ ಛತ್ರಪತಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ಎತ್ತರದ ದಾಖಲೆ ಬರೆದ ಮೌಂಟ್ ಎವೆರೆಸ್ಟ್: ಎತ್ತರ ಎಷ್ಟು ಹೆಚ್ಚಾಗಿದೆ?

ಇದನ್ನೂ ಓದಿ: ಅಂಜನಾದ್ರಿ ಪರ್ವತಕ್ಕೆ ರಾಜ್ಯಪಾಲರ ಭೇಟಿ: ಗುಜರಾತ್​ನ ಹನುಮ ದೇವಸ್ಥಾನಕ್ಕೆ ಬಳಸುವ ಶಿಲೆಗೆ ಪೂಜೆ

(Priyanka Mohite becomes first Indian Woman to scale worlds 10th highest peak Mt Annapurna)

Published On - 4:43 pm, Tue, 20 April 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ