AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kirandeep Kaur: ವಾರಿಸ್ ದೆ ಪಂಜಾಬ್ ಮುಖ್ಯಸ್ಥ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ವಿಮಾನ ಪ್ರಯಾಣಕ್ಕೆ ತಡೆ,​ ಅಧಿಕಾರಿಗಳಿಂದ ವಿಚಾರಣೆ

ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಪಂಜಾಬ್ ಪೊಲೀಸರು ಕಿರಣ್‌ದೀಪ್ ಕೌರ್​​ನ್ನು ತಡೆದಿದ್ದಾರೆ.

Kirandeep Kaur: ವಾರಿಸ್ ದೆ ಪಂಜಾಬ್ ಮುಖ್ಯಸ್ಥ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ವಿಮಾನ ಪ್ರಯಾಣಕ್ಕೆ ತಡೆ,​ ಅಧಿಕಾರಿಗಳಿಂದ ವಿಚಾರಣೆ
ಕಿರಣ್ ದೀಪ್ ಕೌರ್
Follow us
ರಶ್ಮಿ ಕಲ್ಲಕಟ್ಟ
|

Updated on:Apr 20, 2023 | 1:13 PM

ವಾರಿಸ್ ದೆ ಪಂಜಾಬ್ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅವರ ಪತ್ನಿ ಕಿರಣ್‌ದೀಪ್ ಕೌರ್ (Kirandeep Kaur) ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಆಕೆಯನ್ನು ತಡೆದಿದ್ದು ವಲಸೆ ಇಲಾಖೆ ವಿಚಾರಣೆ ನಡೆಸುತ್ತಿದೆ. ಈ ಹಿಂದೆ ಆಕೆಯನ್ನು ಬಂಧಿಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿತ್ತು.ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣದೀಪ್ ಕೌರ್ ಅವರನ್ನು ಇನ್ನೂ ಬಂಧಿಸಲಾಗಿಲ್ಲ ಪಂಜಾಬ್ ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಆದರೆ ವಲಸೆ ಇಲಾಖೆಯಿಂದ ವಿಚಾರಣೆ ನಡೆಸಲಾಗುತ್ತಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಎಎನ್ಐ ಟ್ವೀಟ್ ಮಾಡಿದೆ.

ಇತ್ತೀಚೆಗೆ ದಿ ವೀಕ್ ಗೆ ನೀಡಿದ ಸಂದರ್ಶನದಲ್ಲಿ ತನಗೆ ಅಮೃತ್ ಪಾಲ್ ಸಿಂಗ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಕಿರಣ್ ದೀಪ್ ಹೇಳಿದ್ದರು. ಆದಾಗ್ಯೂ ಅಮೃತ್ ಪಾಲ್ ಸಿಂಗ್ ನ ಎಲ್ಲ ಚಟುವಟಿಕೆಗಳನ್ನು ಸಮರ್ಥಿಸಿಕೊಂಡ ಕೌರ್, ಆತನನ್ನು ಪೊಲೀಸರು ಅಕ್ರಮವಾಗಿ ಬಂಧಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ನಾನು ಅವರನ್ನು ಬಿಟ್ಟುಕೊಡುವುದಿಲ್ಲ. ಅವನ ಜತೆ ಯಾವುದೇ ಸಂಪರ್ಕ ಇಲ್ಲ. ಆತ ಮನೆಗೆ ಸುರಕ್ಷಿತವಾಗಿ ಬರಲಿ ಎಂದು ನಾನು ಬಯಸುತ್ತಿದ್ದೇನೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: Global Buddhist Summit: ಭಾರತವು ಜಗತ್ತಿಗೆ ಯುದ್ಧವನ್ನು ನೀಡಿಲ್ಲ, ಬುದ್ಧನ ಆದರ್ಶಗಳನ್ನು ನೀಡಿದೆ: ಮೋದಿ

ಆಕೆಯನ್ನು ವಲಸೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದೆ ಎಂದು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ಪ್ರಾಥಮಿಕ ಮಾಧ್ಯಮ ವರದಿಗಳ ಪ್ರಕಾರ, ಆಕೆಯ ಮೇಲೆ ಯಾವುದೇ ಪ್ರಕರಣಗಳಿಲ್ಲ. ಅಮೃತಪಾಲ್ ಸಿಂಗ್ ಪತ್ತೆಗಾಗಿ ಹುಡುಕಾಟ ಪ್ರಾರಂಭವಾದಾಗಿನಿಂದ ಕೌರ್ ಪೂರ್ವಜರ ಹಳ್ಳಿಯಲ್ಲಿ ನೆಲೆಸಿದ್ದಾಳೆ. ಕೌರ್ ಯುಕೆ ಪ್ರಜೆಯಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Thu, 20 April 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ