AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಆಪರೇಷನ್ ಬ್ಲೂಸ್ಟಾರ್​​ನ 38ನೇ ವಾರ್ಷಿಕೋತ್ಸವ ವೇಳೆ ಸ್ವರ್ಣ ಮಂದಿರದಲ್ಲಿ ಖಲಿಸ್ತಾನ್ ಪರ ಘೋಷಣೆ

Operation Bluestar ಹಲವಾರು ಯುವಕರು ಖಲಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಬರೆದಿದ್ದ ಪ್ಲೆಕಾರ್ಡ್ ಹಿಡಿದಿದ್ದರು. ಹತ್ಯೆಯಾದ ಪ್ರತ್ಯೇಕತಾವಾದಿ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಚಿತ್ರವಿರುವ ಟೀ ಶರ್ಟ್‌ಗಳನ್ನು ಅವರು ಧರಿಸಿದ್ದರು

Watch ಆಪರೇಷನ್ ಬ್ಲೂಸ್ಟಾರ್​​ನ 38ನೇ ವಾರ್ಷಿಕೋತ್ಸವ ವೇಳೆ ಸ್ವರ್ಣ ಮಂದಿರದಲ್ಲಿ ಖಲಿಸ್ತಾನ್ ಪರ ಘೋಷಣೆ
ಸಿಖ್ ಸಂಘಟನೆಗಳು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 06, 2022 | 2:12 PM

Share

ಅಮೃತ್​​ಸರ್: ಆಪರೇಷನ್ ಬ್ಲೂಸ್ಟಾರ್‌ನ (Operation Bluestar) 38 ನೇ ವಾರ್ಷಿಕೋತ್ಸವದಂದು ಗೋಲ್ಡನ್ ಟೆಂಪಲ್‌ನಲ್ಲಿ (Golden Temple) ತೀವ್ರಗಾಮಿ ಸಿಖ್ ಸಂಘಟನೆಗಳು ಮತ್ತು ಶಿರೋಮಣಿ ಅಕಾಲಿದಳ (ಅಮೃತಸರ) ಬೆಂಬಲಿಗರು ಖಲಿಸ್ತಾನ್ ಪರ (Pro-Khalistan) ಘೋಷಣೆಗಳನ್ನು ಕೂಗಿದ್ದಾರೆ. ಸಿಖ್ಖರ ಪ್ರಸಿದ್ಧ ಮಂದಿರವಾದ ಅಕಾಲ್ ತಖ್ತ್ ಬಳಿಯ ಗೋಲ್ಡನ್ ಟೆಂಪಲ್‌ನ ಆವರಣವು ಖಲಿಸ್ತಾನ್ ಪರ ಘೋಷಣೆಗಳೊಂದಿಗೆ ಪ್ರತಿಧ್ವನಿಸಿತು. ಹಲವಾರು ಯುವಕರು ಖಾಲಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಬರೆದಿದ್ದ ಪ್ಲೆಕಾರ್ಡ್ ಹಿಡಿದಿದ್ದರು. ಹತ್ಯೆಯಾದ ಪ್ರತ್ಯೇಕತಾವಾದಿ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಚಿತ್ರವಿರುವ ಟೀ ಶರ್ಟ್‌ಗಳನ್ನು ಅವರು ಧರಿಸಿದ್ದರು. ಸ್ಥಳದಲ್ಲಿದ್ದ ಮಾಜಿ ಸಂಸದ ಸಿಮ್ರಂಜಿತ್ ಸಿಂಗ್ ಮಾನ್ ನೇತೃತ್ವದ ಶಿರೋಮಣಿ ಅಕಾಲಿದಳ (ಅಮೃತಸರ) ಸಂಘಟನೆಯ ಕಾರ್ಯಕರ್ತರು ಸಹ ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ್ದಾರೆ. ಅವರು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯನ್ನು ಪ್ರಸ್ತಾಪಿಸಿದ್ದು ಕುಟುಂಬಕ್ಕೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿದರು. 1984 ರಲ್ಲಿ ಗೋಲ್ಡನ್ ಟೆಂಪಲ್‌ನಿಂದ ಉಗ್ರರನ್ನು ಹೊರಹಾಕಲು ನಡೆಸಿದ ಮಿಲಿಟರಿ ಕಾರ್ಯಾಚರಣೆಯಾಗಿದೆ ಆಪರೇಷನ್ ಬ್ಲೂಸ್ಟಾರ್. ಕಾರ್ಯಕ್ರಮವು ಸುಗಮವಾಗಿ ಸಾಗುವುದನ್ನು ಖಚಿತಪಡಿಸಿಕೊಳ್ಳಲು ಅಮೃತಸರದಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಿಖ್ ಸಮುದಾಯಕ್ಕೆ ನೀಡಿದ ಸಂದೇಶದಲ್ಲಿ ಅಕಲ್ ತಖ್ತ್‌ನ ಜತೇದಾರ್ ಜ್ಞಾನಿ ಹರ್‌ಪ್ರೀತ್ ಸಿಂಗ್, ಸಿಖ್ ಧರ್ಮ ಪ್ರಚಾರಕ್ಕಾಗಿ ಸಿಖ್ ಬೋಧಕರು ಮತ್ತು ವಿದ್ವಾಂಸರು ಗಡಿ ಪ್ರದೇಶಗಳಿಗೆ ಭೇಟಿ ನೀಡಬೇಕು ಮತ್ತು ಶ್ರೀಮಂತ ಸಿಖ್ ತತ್ವಗಳು ಮತ್ತು ಇತಿಹಾಸದ ಬಗ್ಗೆ ಯುವಕರಿಗೆ ತಿಳಿಸಬೇಕಾಗಿದೆ ಎಂದಿದ್ದಾರೆ.

ಹಲವಾರು ಯುವಕರನ್ನು ಕಾಡುತ್ತಿರುವ ಮಾದಕ ವಸ್ತುಗಳ ಹಾವಳಿಯ ವಿರುದ್ಧ ಹೋರಾಡುವ ಅಗತ್ಯತೆಯ ಬಗ್ಗೆಯೂ ಅವರು ಮಾತನಾಡಿದರು.

ಸಿಖ್ಖರ ಅತ್ಯುನ್ನತ ಧಾರ್ಮಿಕ ಸಂಸ್ಥೆಯಾದ ಶಿರೋಮಣಿ ಗುರುದ್ವಾರ ಪರ್ಬಂಧಕ್ ಕಮಿಟಿ (SGPC) ಗುರು ಗ್ರಂಥ ಸಾಹಿಬ್‌ನ ‘ಸರೂಪ್’ (ಸಂಪುಟ) ಅನ್ನು ಪ್ರದರ್ಶಿಸಿತು. ಅಂದು ಗರ್ಭಗುಡಿಯಲ್ಲಿ ಸ್ಥಾಪಿಸಲಾಗಿದ್ದ ‘ಸರೂಪ್’ ಮೇಲೆ 1984ರಲ್ಲಿ ಸೇನಾ ಕಾರ್ಯಾಚರಣೆ ವೇಳೆ ಗುಂಡು ತಾಗಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:08 pm, Mon, 6 June 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ