AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಪರ ಬರಹ, ತನಿಖೆ ಶುರು

ಜಿ20 ಶೃಂಗಸಭೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ಭರದ ಸಿದ್ಧತೆಗಳೂ ನಡೆಯುತ್ತಿವೆ. ಇದೇ ವೇಳೆ ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಸಂಬಂಧಿತ ಘೋಷಣೆಗಳನ್ನು ಬರೆಯಲಾಗಿದ್ದು, ತನಿಖೆ ಶುರುವಾಗಿದೆ.

ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಪರ ಬರಹ, ತನಿಖೆ ಶುರು
ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿಗಳ ಪರ ಬರಹImage Credit source: ANI
ನಯನಾ ರಾಜೀವ್
|

Updated on:Aug 27, 2023 | 1:06 PM

Share

ಜಿ20 ಶೃಂಗಸಭೆಯು  ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ಭರದ ಸಿದ್ಧತೆಗಳೂ ನಡೆಯುತ್ತಿವೆ. ಇದೇ ವೇಳೆ ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಸಂಬಂಧಿತ ಘೋಷಣೆಗಳನ್ನು ಬರೆಯಲಾಗಿದ್ದು, ತನಿಖೆ ಶುರುವಾಗಿದೆ.

ದೆಹಲಿಯು ಖಲಿಸ್ತಾನವಾಗಲಿದೆ, ಖಲಿಸ್ತಾನ್ ಜಿಂದಾಬಾದ್ ಎಂದು ಘೋಷಣೆಯನ್ನು ಬರೆಯಲಾಗಿದೆ. ಜಿ20 ಶೃಂಗಸಭೆಗೂ ಮುನ್ನ ಈ ಘಟನೆ ದೆಹಲಿಯಲ್ಲಿ ಸಂಚಲನ ಮೂಡಿಸಿದೆ. ಇದರ ವಿರುದ್ಧ ದೆಹಲಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ, ಇದಲ್ಲದೇ ಗುಪ್ತಚರ ಸಂಸ್ಥೆಗಳೂ ತನಿಖೆ ಆರಂಭಿಸಿವೆ.

ದೆಹಲಿಯ ಶಿವಾಜಿ ಪಾರ್ಕ್‌ನಿಂದ ಪಂಜಾಬಿ ಬಾಗ್‌ವರೆಗೆ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆಯಲಾಗಿದೆ. ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿಯಲ್ಲಿ ಶೃಂಗಸಭೆ ನಡೆಯಲಿದೆ. ಯುರೋಪಿಯನ್ ಒಕ್ಕೂಟದ 30 ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ದೇಶಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸುವ ನಿರೀಕ್ಷೆಯಿದೆ.

G20 ಶೃಂಗಸಭೆಯನ್ನು ಯಶಸ್ವಿಗೊಳಿಸಲು ಸಹಾಯ ಮಾಡುವಂತೆ ಪ್ರಧಾನಿ ಮೋದಿ ಶನಿವಾರ ದೆಹಲಿ ಜನತೆಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿಗಳ ದಾಳಿ, ಕಚೇರಿ ಧ್ವಂಸ

ಸಂಚಾರ ನಿಯಮಗಳ ಬದಲಾವಣೆಯಿಂದಾಗಿ ದೆಹಲಿ ನಿವಾಸಿಗಳು ಅನಾನುಕೂಲತೆಯನ್ನು ಎದುರಿಸಬೇಕಾಗಬಹುದು. ಸೆಪ್ಟೆಂಬರ್ 5 ರಿಂದ ಸೆಪ್ಟೆಂಬರ್ 15 ರವರೆಗೆ ಸಾಕಷ್ಟು ಅನಾನುಕೂಲತೆ ಉಂಟಾಗಲಿದೆ ಮತ್ತು ಅದಕ್ಕಾಗಿ ನಾನು ಮುಂಚಿತವಾಗಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:05 pm, Sun, 27 August 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ