AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಪರ ಬರಹ, ತನಿಖೆ ಶುರು

ಜಿ20 ಶೃಂಗಸಭೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ಭರದ ಸಿದ್ಧತೆಗಳೂ ನಡೆಯುತ್ತಿವೆ. ಇದೇ ವೇಳೆ ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಸಂಬಂಧಿತ ಘೋಷಣೆಗಳನ್ನು ಬರೆಯಲಾಗಿದ್ದು, ತನಿಖೆ ಶುರುವಾಗಿದೆ.

ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಪರ ಬರಹ, ತನಿಖೆ ಶುರು
ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿಗಳ ಪರ ಬರಹImage Credit source: ANI
ನಯನಾ ರಾಜೀವ್
|

Updated on:Aug 27, 2023 | 1:06 PM

Share

ಜಿ20 ಶೃಂಗಸಭೆಯು  ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ಭರದ ಸಿದ್ಧತೆಗಳೂ ನಡೆಯುತ್ತಿವೆ. ಇದೇ ವೇಳೆ ದೆಹಲಿಯ ಐದು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನಿ ಸಂಬಂಧಿತ ಘೋಷಣೆಗಳನ್ನು ಬರೆಯಲಾಗಿದ್ದು, ತನಿಖೆ ಶುರುವಾಗಿದೆ.

ದೆಹಲಿಯು ಖಲಿಸ್ತಾನವಾಗಲಿದೆ, ಖಲಿಸ್ತಾನ್ ಜಿಂದಾಬಾದ್ ಎಂದು ಘೋಷಣೆಯನ್ನು ಬರೆಯಲಾಗಿದೆ. ಜಿ20 ಶೃಂಗಸಭೆಗೂ ಮುನ್ನ ಈ ಘಟನೆ ದೆಹಲಿಯಲ್ಲಿ ಸಂಚಲನ ಮೂಡಿಸಿದೆ. ಇದರ ವಿರುದ್ಧ ದೆಹಲಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ, ಇದಲ್ಲದೇ ಗುಪ್ತಚರ ಸಂಸ್ಥೆಗಳೂ ತನಿಖೆ ಆರಂಭಿಸಿವೆ.

ದೆಹಲಿಯ ಶಿವಾಜಿ ಪಾರ್ಕ್‌ನಿಂದ ಪಂಜಾಬಿ ಬಾಗ್‌ವರೆಗೆ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆಯಲಾಗಿದೆ. ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿಯಲ್ಲಿ ಶೃಂಗಸಭೆ ನಡೆಯಲಿದೆ. ಯುರೋಪಿಯನ್ ಒಕ್ಕೂಟದ 30 ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ದೇಶಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸುವ ನಿರೀಕ್ಷೆಯಿದೆ.

G20 ಶೃಂಗಸಭೆಯನ್ನು ಯಶಸ್ವಿಗೊಳಿಸಲು ಸಹಾಯ ಮಾಡುವಂತೆ ಪ್ರಧಾನಿ ಮೋದಿ ಶನಿವಾರ ದೆಹಲಿ ಜನತೆಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿಗಳ ದಾಳಿ, ಕಚೇರಿ ಧ್ವಂಸ

ಸಂಚಾರ ನಿಯಮಗಳ ಬದಲಾವಣೆಯಿಂದಾಗಿ ದೆಹಲಿ ನಿವಾಸಿಗಳು ಅನಾನುಕೂಲತೆಯನ್ನು ಎದುರಿಸಬೇಕಾಗಬಹುದು. ಸೆಪ್ಟೆಂಬರ್ 5 ರಿಂದ ಸೆಪ್ಟೆಂಬರ್ 15 ರವರೆಗೆ ಸಾಕಷ್ಟು ಅನಾನುಕೂಲತೆ ಉಂಟಾಗಲಿದೆ ಮತ್ತು ಅದಕ್ಕಾಗಿ ನಾನು ಮುಂಚಿತವಾಗಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:05 pm, Sun, 27 August 23

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್