AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ

ಅಲ್ತಫ್​ ಅಹ್ಮದ್ ಶಾ ಅಲಿಯಾಸ್​ ಅಲ್ತಫ್ ಫಾಂಟೂಶ್​ ಅವರ ಪುತ್ರ ಅನೀಸ್​ ಉಲ್​ ಇಸ್ಲಾಮ್​ ಸರ್ಕಾರಿ ಸ್ವಾಮ್ಯದ ಕನ್ವೆನ್ಶನ್​ ಕೇಂದ್ರದಲ್ಲಿ ಸಂಶೋಧನಾ ಅಧಿಕಾರಿ (Research Officer)ಯಾಗಿ ಕೆಲಸ ಮಾಡುತ್ತಿದ್ದರು.

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ
ಸೈಯದ್​ ಅಲಿ ಗೀಲಾನಿ
TV9 Web
| Updated By: Lakshmi Hegde|

Updated on:Oct 16, 2021 | 11:32 PM

Share

ಶ್ರೀನಗರ: ಇತ್ತೀಚೆಗೆ ಮೃತಪಟ್ಟ ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ (Syed Ali Geelani) ಅವರ ಮೊಮ್ಮಗ ಅನೀಸ್​ ಉಲ್​ ಇಸ್ಲಾಮ್​​ ಅವರನ್ನು ಸರ್ಕಾರಿ ಹುದ್ದೆಯಿಂದ ವಜಾಗೊಳಿಸಿ ಆದೇಶ ನೀಡಲಾಗಿದೆ. ಜಮ್ಮು-ಕಾಶ್ಮಿರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಅವರು ನೆರವು ನೀಡುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ.  

ಅಲ್ತಫ್​ ಅಹ್ಮದ್ ಶಾ ಅಲಿಯಾಸ್​ ಅಲ್ತಫ್ ಫಾಂಟೂಶ್​ ಅವರ ಪುತ್ರ ಅನೀಸ್​ ಉಲ್​ ಇಸ್ಲಾಮ್​ ಸರ್ಕಾರಿ ಸ್ವಾಮ್ಯದ ಕನ್ವೆನ್ಶನ್​ ಕೇಂದ್ರದಲ್ಲಿ ಸಂಶೋಧನಾ ಅಧಿಕಾರಿ (Research Officer)ಯಾಗಿ ಕೆಲಸ ಮಾಡುತ್ತಿದ್ದರು. 2016ರಲ್ಲಿ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿದ್ದಾಗಿನಂದಲೂ ಅವರು ಈ ಹುದ್ದೆಯಲ್ಲಿ ಇದ್ದರು.  ಇದೀಗ ಸಂವಿಧಾನದ ಕಲಂ 311 (2) (ಸಿ) ಅಡಿಯಲ್ಲಿ ಬರುವ ವಿಶೇಷ ನಿಬಂಧನೆಗಳ ಅನುಸಾರ ಅವರನ್ನು ವಜಾಗೊಳಿಸಲಾಗಿದೆ.

ಇನ್ನು ಗೀಲಾನಿ ಸೆಪ್ಟೆಂಬರ್​​ನಲ್ಲಿ ಮೃತಪಟ್ಟಿದ್ದಾರೆ. ಅವರು 30 ವರ್ಷಗಳಿಂದ ಕಾಶ್ಮೀರ ಪ್ರತ್ಯೇಕತಾವಾದ ಹೋರಾಟಗಾರರಾಗಿದ್ದರು. ಪಾಕ್​ಗೆ ಬೆಂಬಲ ನೀಡುತ್ತಿದ್ದರು. ಅವರು ಮೃತಪಟ್ಟಾಗ ಮೃತದೇಹದ ಮೇಲೆ ಕುಟುಂಬಸ್ಥರು ಪಾಕಿಸ್ತಾನದ ಧ್ವಜ ಹೊದೆಸಿದ್ದು ವಿವಾದ ಸೃಷ್ಟಿಸಿತ್ತು. ಕುಟುಂಬಸ್ಥರ ವಿರುದ್ಧ ಪೊಲೀಸರು ಎಫ್​ಐಆರ್​ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ಕುಟುಂಬದಲ್ಲಿ ಪ್ರೀತಿ, ಸಾಮರಸ್ಯ ಮತ್ತು ಸೌಹಾರ್ದತೆ ನೆಲೆಗೊಂಡಿರಬೇಕಾದರೆ ಸದಸ್ಯರ ನಡುವೆ ಸಂವಾದ ಅತಿ ಮುಖ್ಯ: ಡಾ ಸೌಜನ್ಯ ವಶಿಷ್ಠ

ಆರೋಗ್ಯದ ಬಗ್ಗೆ ಮಾಹಿತಿ ನೀಡುವ ನಾಯ್ಸ್ ಕಲರ್​ಫಿಟ್​ ಪ್ರೋ ಸ್ಮಾರ್ಟ್ ವಾಚ್ ಈಗ ಕಡಿಮೆ ಬೆಲೆಗೆ ಲಭ್ಯ!

Published On - 10:37 pm, Sat, 16 October 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ