Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೈನಿ ಐಎಎಸ್ ಅಧಿಕಾರಿ​ ಪೂಜಾ ಖೇಡ್ಕರ್​ ತಾಯಿ ಪಿಸ್ತೂಲ್​ ಹಿಡಿದು ರೈತರ ಹೆದರಿಸುತ್ತಿರುವ ವಿಡಿಯೋ ವೈರಲ್

ಮಹಾರಾಷ್ಟ್ರ ಕೇಡರ್ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ನಿರಂತರವಾಗಿ ವಿವಾದಗಳಲ್ಲಿ ಸಿಲುಕುತ್ತಿದ್ದಾರೆ. ಈ ನಡುವೆ ಇದೀಗ ಅವರ ತಾಯಿ ಮನೋರಮಾ ಅವರ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಇದರಲ್ಲಿ ರೈತರಿಗೆ ಅವರು ಪಿಸ್ತೂಲ್ ತೋರಿಸಿ ಬೆದರಿಸುತ್ತಿರುವುದನ್ನು ಕಾಣಬಹುದು.

Follow us
ನಯನಾ ರಾಜೀವ್
|

Updated on: Jul 12, 2024 | 2:33 PM

ವಿವಾದಿತ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ರೈತರೊಬ್ಬರಿಗೆ ಪಿಸ್ತೂಲ್​ ಹಿಡಿದು ಹೆದರಿಸುತ್ತಿರುವ ವಿಡಿಯೋವೊಂದು ವೈರಲ್​ ಆಗಿದೆ. ಅದು ಹಳೆಯ ವಿಡಿಯೋ ಎಂದು ಹೇಳಲಾಗುತ್ತಿದ್ದು, ಇದೀಗ ಪೂಜಾ ಖೇಡ್ಕರ್​ ತುಂಬಾ ಚರ್ಚೆಯಲ್ಲಿರುವ ಸಮಯದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ವೀಡಿಯೊವನ್ನು 2023 ರಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರದಾದ್ಯಂತ ಆಸ್ತಿ ಹೊಂದಿರುವ ಖೇಡ್ಕರ್ ಕುಟುಂಬ ಪುಣೆಯ ಮುಲ್ಶಿ ತಹಸಿಲ್‌ನಲ್ಲಿ 25 ಎಕರೆ ಭೂಮಿಯನ್ನು ಖರೀದಿಸಿತ್ತು. ಅಕ್ಕಪಕ್ಕದ ರೈತರ ಜಮೀನನ್ನು ಕೂಡ ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದಾಗ ಖೇಡ್ಕರ್ ಅವರ ತಾಯಿ ಮನೋರಮಾ ಬೌನ್ಸರ್ ಸಮೇತ ಸ್ಥಳಕ್ಕೆ ಆಗಮಿಸಿ ಪಿಸ್ತೂಲ್ ತೋರಿಸಿ ರೈತರಿಗೆ ಬೆದರಿಕೆ ಹಾಕಿದ್ದಾರೆ. ವಿಡಿಯೋದಲ್ಲಿ ಮನೋರಮಾ ಜಮೀನು ತನ್ನ ಹೆಸರಿನಲ್ಲಿದೆ ಎಂದು ಹೇಳಿದ್ದಾರೆ.

ನೀನು ನಿಜವಾದ ಮಾಲೀಕನೇ ಆಗಿರಬಹುದು ಆದರೆ ಈ ಜಾಗವು ನನ್ನ ಹೆಸರಿನಲ್ಲಿದೆ, ಅದು ಕೋರ್ಟ್​ನಲ್ಲಿದೆ ಈ ಜಾಗವನ್ನು ನೀನು ಹೇಗೆ ತೆಗೆದುಕೊಳ್ತೀಯಾ ನಾನು ನೋಡ್ತೇನೆ ಎಂದು ಧಮಕಿ ಹಾಕಿದ್ದಾರೆ. ಆದರೆ ಮೇಡಂ ಕೋರ್ಟ್​ ಇನ್ನೂ ತೀರ್ಪು ನೀಡಿಲ್ಲ, ಈಗಲೂ ಈ ಜಾಗದ ನಿಜವಾದ ಮಾಲೀಕ ನಾನೇ ಎಂದು ವ್ಯಕ್ತಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ಓದಿ: ಕಾರು, ಮನೆ, ಕಚೇರಿ ಬೇಕು ಎಂದು ಬೇಡಿಕೆ ಇಟ್ಟಿದ್ದ ವಿವಾದಿತ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ಯಾರು?

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಹಾಗೂ ಸರ್ಕಾರಿ ಫಲಕ ಅಳವಡಿಸಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನಲ್ಲೇ ಅವರನ್ನು ಅಧಿಕಾರ ದುರುಪಯೋಗದ ಆರೋಪದ ಮೇಲೆ ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಲಾಗಿದೆ.

32 ವರ್ಷದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಅವರು ಈ ಹಿಂದೆ ಪ್ರತ್ಯೇಕ ಕ್ಯಾಬಿನ್, ವಾಹನ ಮತ್ತು ಸಿಬ್ಬಂದಿ ನೀಡಬೇಕು ಎಂಬ ಬೇಡಿಕೆಯಿಂದ ವಿವಾದ ಹುಟ್ಟುಹಾಕಿದ್ದರು. ಇದೀಗ ತರಬೇತಿ ಪೂರ್ಣಗೊಳ್ಳುವ ಮೊದಲು ಪುಣೆಯಿಂದ ವಿದರ್ಭ ಪ್ರದೇಶದ ವಾಶಿಮ್ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.  ವಾಶಿಮ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಪೂಜಾ ಅಧಿಕಾರ ವಹಿಸಿಕೊಂಡರು.

ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪವೂ ಇದೆ.

ಪೂಜಾ ಖೇಡ್ಕರ್ ಅವರು ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿದ್ದ ಕಾರಣ ಅವರಿಗೆ ಸರ್ಕಾರದಿಂದ ವಾಹನ ಸೌಲಭ್ಯ ನೀಡಿಲ್ಲ. ಆದರೆ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಕೆಂಪು- ನೀಲಿ ಬೀಕನ್ ಲೈಟ್ ಮತ್ತು ವಿಐಪಿ ನಂಬರ್ ಪ್ಲೇಟ್‌ ಅಳವಡಿಸಿದ್ದು, ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಪುಣೆ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್