ಟ್ರೈನಿ ಐಎಎಸ್ ಅಧಿಕಾರಿ​ ಪೂಜಾ ಖೇಡ್ಕರ್​ ತಾಯಿ ಪಿಸ್ತೂಲ್​ ಹಿಡಿದು ರೈತರ ಹೆದರಿಸುತ್ತಿರುವ ವಿಡಿಯೋ ವೈರಲ್

ಮಹಾರಾಷ್ಟ್ರ ಕೇಡರ್ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ನಿರಂತರವಾಗಿ ವಿವಾದಗಳಲ್ಲಿ ಸಿಲುಕುತ್ತಿದ್ದಾರೆ. ಈ ನಡುವೆ ಇದೀಗ ಅವರ ತಾಯಿ ಮನೋರಮಾ ಅವರ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಇದರಲ್ಲಿ ರೈತರಿಗೆ ಅವರು ಪಿಸ್ತೂಲ್ ತೋರಿಸಿ ಬೆದರಿಸುತ್ತಿರುವುದನ್ನು ಕಾಣಬಹುದು.

ವಿವಾದಿತ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ರೈತರೊಬ್ಬರಿಗೆ ಪಿಸ್ತೂಲ್​ ಹಿಡಿದು ಹೆದರಿಸುತ್ತಿರುವ ವಿಡಿಯೋವೊಂದು ವೈರಲ್​ ಆಗಿದೆ. ಅದು ಹಳೆಯ ವಿಡಿಯೋ ಎಂದು ಹೇಳಲಾಗುತ್ತಿದ್ದು, ಇದೀಗ ಪೂಜಾ ಖೇಡ್ಕರ್​ ತುಂಬಾ ಚರ್ಚೆಯಲ್ಲಿರುವ ಸಮಯದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ವೀಡಿಯೊವನ್ನು 2023 ರಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರದಾದ್ಯಂತ ಆಸ್ತಿ ಹೊಂದಿರುವ ಖೇಡ್ಕರ್ ಕುಟುಂಬ ಪುಣೆಯ ಮುಲ್ಶಿ ತಹಸಿಲ್‌ನಲ್ಲಿ 25 ಎಕರೆ ಭೂಮಿಯನ್ನು ಖರೀದಿಸಿತ್ತು. ಅಕ್ಕಪಕ್ಕದ ರೈತರ ಜಮೀನನ್ನು ಕೂಡ ಒತ್ತುವರಿ ಮಾಡಿಕೊಳ್ಳಲಾಗಿತ್ತು.
ಇದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದಾಗ ಖೇಡ್ಕರ್ ಅವರ ತಾಯಿ ಮನೋರಮಾ ಬೌನ್ಸರ್ ಸಮೇತ ಸ್ಥಳಕ್ಕೆ ಆಗಮಿಸಿ ಪಿಸ್ತೂಲ್ ತೋರಿಸಿ ರೈತರಿಗೆ ಬೆದರಿಕೆ ಹಾಕಿದ್ದಾರೆ. ವಿಡಿಯೋದಲ್ಲಿ ಮನೋರಮಾ ಜಮೀನು ತನ್ನ ಹೆಸರಿನಲ್ಲಿದೆ ಎಂದು ಹೇಳಿದ್ದಾರೆ.

ನೀನು ನಿಜವಾದ ಮಾಲೀಕನೇ ಆಗಿರಬಹುದು ಆದರೆ ಈ ಜಾಗವು ನನ್ನ ಹೆಸರಿನಲ್ಲಿದೆ, ಅದು ಕೋರ್ಟ್​ನಲ್ಲಿದೆ ಈ ಜಾಗವನ್ನು ನೀನು ಹೇಗೆ ತೆಗೆದುಕೊಳ್ತೀಯಾ ನಾನು ನೋಡ್ತೇನೆ ಎಂದು ಧಮಕಿ ಹಾಕಿದ್ದಾರೆ.
ಆದರೆ ಮೇಡಂ ಕೋರ್ಟ್​ ಇನ್ನೂ ತೀರ್ಪು ನೀಡಿಲ್ಲ, ಈಗಲೂ ಈ ಜಾಗದ ನಿಜವಾದ ಮಾಲೀಕ ನಾನೇ ಎಂದು ವ್ಯಕ್ತಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ಓದಿ: ಕಾರು, ಮನೆ, ಕಚೇರಿ ಬೇಕು ಎಂದು ಬೇಡಿಕೆ ಇಟ್ಟಿದ್ದ ವಿವಾದಿತ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ಯಾರು?

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಹಾಗೂ ಸರ್ಕಾರಿ ಫಲಕ ಅಳವಡಿಸಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನಲ್ಲೇ ಅವರನ್ನು ಅಧಿಕಾರ ದುರುಪಯೋಗದ ಆರೋಪದ ಮೇಲೆ ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಲಾಗಿದೆ.

32 ವರ್ಷದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಅವರು ಈ ಹಿಂದೆ ಪ್ರತ್ಯೇಕ ಕ್ಯಾಬಿನ್, ವಾಹನ ಮತ್ತು ಸಿಬ್ಬಂದಿ ನೀಡಬೇಕು ಎಂಬ ಬೇಡಿಕೆಯಿಂದ ವಿವಾದ ಹುಟ್ಟುಹಾಕಿದ್ದರು. ಇದೀಗ ತರಬೇತಿ ಪೂರ್ಣಗೊಳ್ಳುವ ಮೊದಲು ಪುಣೆಯಿಂದ ವಿದರ್ಭ ಪ್ರದೇಶದ ವಾಶಿಮ್ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.  ವಾಶಿಮ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಪೂಜಾ ಅಧಿಕಾರ ವಹಿಸಿಕೊಂಡರು.

ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪವೂ ಇದೆ.

ಪೂಜಾ ಖೇಡ್ಕರ್ ಅವರು ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿದ್ದ ಕಾರಣ ಅವರಿಗೆ ಸರ್ಕಾರದಿಂದ ವಾಹನ ಸೌಲಭ್ಯ ನೀಡಿಲ್ಲ. ಆದರೆ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಕೆಂಪು- ನೀಲಿ ಬೀಕನ್ ಲೈಟ್ ಮತ್ತು ವಿಐಪಿ ನಂಬರ್ ಪ್ಲೇಟ್‌ ಅಳವಡಿಸಿದ್ದು, ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಪುಣೆ ಪೊಲೀಸರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us