ಅಪರಾಧ ನ್ಯಾಯ ವ್ಯವಸ್ಥೆಯನ್ನು ಭಾರತೀಯಗೊಳಿಸುವ ಪ್ರಕ್ರಿಯೆ ನಡೆದು ಬಂದ ಹಾದಿ ಹೀಗಿದೆ ನೋಡಿ

Indianising the Criminal Justice System; ವಸಾಹತುಶಾಹಿ ಕಾಲದ ಅಪರಾಧ ನ್ಯಾಯ ಸಂಹಿತೆಯ ಭಾರತೀಕರಣಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ತರಾತುರಿಯಲ್ಲಿ ಮಾಡಿಲ್ಲ. 2019 ರಲ್ಲೇ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಆರಂಭಿಸಿತ್ತು. ಇದರ ಭಾಗವಾಗಿ ಅಮಿತ್ ಶಾ ಅವರು 58 ಔಪಚಾರಿಕ ಮತ್ತು 100 ಅನೌಪಚಾರಿಕ ಪರಿಶೀಲನಾ ಸಭೆಗಳನ್ನು ನಡೆಸಿದ್ದರು.

ಅಪರಾಧ ನ್ಯಾಯ ವ್ಯವಸ್ಥೆಯನ್ನು ಭಾರತೀಯಗೊಳಿಸುವ ಪ್ರಕ್ರಿಯೆ ನಡೆದು ಬಂದ ಹಾದಿ ಹೀಗಿದೆ ನೋಡಿ
ಸಾಂದರ್ಭಿಕ ಚಿತ್ರ
Follow us
|

Updated on: Aug 12, 2023 | 1:35 PM

ನವದೆಹಲಿ, ಆಗಸ್ಟ್ 12: ಬ್ರಿಟಿಷ್ ವಸಾಹತುಶಾಹಿ ಕಾಲದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಅಥವಾ ಕ್ರಿಮಿನಲ್ ಜಸ್ಟೀಸ್ ಸಿಸ್ಟಂ (Criminal Justice System) ಅನ್ನು ಭಾರತೀಯಗೊಳಿಸುವ ಪ್ರಕ್ರಿಯೆಯ ಪ್ರಮುಖ ಹಂತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮೂರು ಮಸೂದೆಗಳನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಇಂಡಿಯನ್ ಎವಿಡೆನ್ಸ್ ಆ್ಯಕ್ಟ್​​ಗೆ ಪರ್ಯಾಯವಾಗಿ ಭಾರತೀಯ ನ್ಯಾಯ ಸಂಹಿತಾ, ನಾಗರೀಕ ಸುರಕ್ಷಾ ಸಂಹಿತಾ ಹಾಗೂ ಭಾರತೀಯ ಸಾಕ್ಷ್ಯ ಎಂಬುದಾಗಿ ಪರಿಷ್ಕೃತ ಮಸೂದೆ ಮಂಡನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಹೇಳಿಕೆಗಳು, ಪ್ರತಿ ಹೇಳಿಕೆಗಳು ಕೂಡ ವರದಿಯಾಗಿವೆ. ಆದರೆ, ವಸಾಹತುಶಾಹಿ ಕಾಲದ ಅಪರಾಧ ನ್ಯಾಯ ಸಂಹಿತೆಯ ಭಾರತೀಕರಣಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ತರಾತುರಿಯಲ್ಲಿ ಮಾಡಿಲ್ಲ. 2019 ರಲ್ಲೇ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಆರಂಭಿಸಿತ್ತು.

2019ರ ಸೆಪ್ಟೆಂಬರ್​​ನಲ್ಲೇ ಪ್ರಕ್ರಿಯೆ ಆರಂಭಿಸಿದ್ದ ಅಮಿತ್ ಶಾ

ಕ್ರಿಮಿನಲ್ ಜಸ್ಟೀಸ್ ಸಿಸ್ಟಂ ಅನ್ನು ಭಾರತೀಯಗೊಳಿಸುವ ಪ್ರಕ್ರಿಯೆಯ ಮೊದಲ ಹಂತವಾಗಿ 2019ರ ಸೆಪ್ಟೆಂಬರ್​​ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಪ್ರವೃತ್ತರಾಗಿದ್ದರು. ಎಲ್ಲ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಆಡಳಿತಗಾರರಿಗೆ ಅಮಿತ್ ಶಾ ಪತ್ರ ಬರೆದಿದ್ದರು.

2020 ರ ಜನವರಿಯಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿಗಳು, ಎಲ್ಲಾ ಹೈಕೋರ್ಟ್‌ಗಳು, ಬಾರ್ ಕೌನ್ಸಿಲ್‌ಗಳು ಮತ್ತು ಕಾನೂನು ವಿಶ್ವವಿದ್ಯಾಲಯಗಳ ಮುಖ್ಯ ನ್ಯಾಯಮೂರ್ತಿಗಳಿಂದ ಸಲಹೆಗಳನ್ನು ಕೇಳಲಾಗಿತ್ತು. ಒಂದು ವರ್ಷದ ನಂತರ, 2021 ರ ಡಿಸೆಂಬರ್​​ನಲ್ಲಿ, ಸಂಸದರಿಂದಲೂ ಸಲಹೆಗಳನ್ನು ಕೇಳಲಾಗಿತ್ತು.

ಐಪಿಎಸ್ ಅಧಿಕಾರಿಗಳ, ಕಾನೂನು ತಜ್ಞರ ಸಲಹೆ ಪಡೆದಿದ್ದ ಬಿಪಿಆರ್​​ಡಿ

ಬ್ಯೂರೋ ಆಫ್​ ಪೊಲೀಸ್​ ರಿಸರ್ಚ್ ಆ್ಯಂಡ್ ಡೆವಲಪ್​ಮೆಂಟ್ (BPRD) ಎಲ್ಲಾ ಐಪಿಎಲ್ ಅಧಿಕಾರಿಗಳ ಸಲಹೆಗಳನ್ನು ಕೋರಿತು ಮತ್ತು ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

ಯಾರೆಲ್ಲ ಸಲಹೆ ನೀಡಿದ್ದರು?

18 ರಾಜ್ಯಗಳು ಮತ್ತು 6 ಕೇಂದ್ರಾಡಳಿತ ಪ್ರದೇಶಗಳು, ಸುಪ್ರೀಂ ಕೋರ್ಟ್, 16 ಹೈಕೋರ್ಟ್​​ಗಳು, ಐದು ನ್ಯಾಯಾಂಗ ಅಕಾಡೆಮಿಗಳು, 22 ಕಾನೂನು ವಿಶ್ವವಿದ್ಯಾಲಯಗಳು ಮತ್ತು 142 ಸಂಸದರು ಸಲಹೆಗಳನ್ನು ನೀಡಿದ್ದರು.

ಇದನ್ನೂ ಓದಿ: ಗುಂಪು ಹತ್ಯೆಗೆ ಮರಣದಂಡನೆ: ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ

ಅಮಿತ್ ಶಾ ನಡೆಸಿದ್ದ ಸಭೆಗಳೆಷ್ಟು?

ಒಟ್ಟಾರೆಯಾಗಿ, ಕ್ರಿಮಿನಲ್ ಜಸ್ಟೀಸ್ ಸಿಸ್ಟಂ ಅನ್ನು ಭಾರತೀಯಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಅಮಿತ್ ಶಾ ಅವರು 58 ಔಪಚಾರಿಕ ಮತ್ತು 100 ಅನೌಪಚಾರಿಕ ಪರಿಶೀಲನಾ ಸಭೆಗಳನ್ನು ನಡೆಸಿದ್ದರು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಆಡಳಿತದ ಕೆಲವು ರಾಜ್ಯಗಳು, ಕೇರಳ ಮತ್ತು ಪಶ್ಚಿಮ ಬಂಗಾಳ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ