AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gitanjali Aiyar: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಮತ್ತು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರ ಸಂಸ್ಥೆಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದ ಗೀತಾಂಜಲಿ ಅಯ್ಯರ್ ಅವರು ಬುಧವಾರ (ಜೂನ್ 7) ನಿಧನರಾದರು.

Gitanjali Aiyar: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ
ಗೀತಾಂಜಲಿ ಅಯ್ಯರ್Image Credit source: Doordarshan
Ganapathi Sharma
|

Updated on:Jun 07, 2023 | 10:10 PM

Share

ನವದೆಹಲಿ: ದೂರದರ್ಶನದ (Doordarshan) ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಮತ್ತು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರ ಸಂಸ್ಥೆಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದ ಗೀತಾಂಜಲಿ ಅಯ್ಯರ್ (Gitanjali Aiyar) ಅವರು ಬುಧವಾರ (ಜೂನ್ 7) ನಿಧನರಾದರು. 1971 ರಲ್ಲಿ ದೂರದರ್ಶನ ಸೇರಿದ್ದ ಅವರು ಅನೇಕ ಪ್ರಶಸ್ತಿಗಳಿಗೂ ಭಾಜನರಾಗಿದ್ದರು. ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ಆ್ಯಂಕರ್​​ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

ಅವರು ತಮ್ಮ ಅತ್ಯುತ್ತಮ ಕೆಲಸ, ಸಾಧನೆಗಳು ಮತ್ತು ಕೊಡುಗೆಗಾಗಿ 1989 ರಲ್ಲಿ ‘ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ’ಗೂ ಭಾಜನರಾಗಿದ್ದರು. ಅವರು ಭಾರತದ ಪ್ರಮುಖ ದಾನಿಗಳನ್ನೊಳಗೊಂಡ ‘ವರ್ಲ್ಡ್ ವೈಡ್ ಫಂಡ್’ನ ಮುಖ್ಯಸ್ಥರೂ ಆಗಿದ್ದರು.

ಗೀತಾಂಜಲಿ ಅಯ್ಯರ್ ಅವರು ಕೋಲ್ಕತ್ತಾದ ಲೊರೆಟೊ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಕೂಡ ಪಡೆದಿದ್ದರು.

ಇದನ್ನೂ ಓದಿ: Odisha: ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಸಾವು

ದೂರದರ್ಶನದಲ್ಲಿ ಸುದ್ದಿ ನಿರೂಪಕಿಯಾಗಿ ಯಶಸ್ವಿ ವೃತ್ತಿಜೀವನದ ನಂತರ ಗೀತಾಂಜಲಿ ಅವರು, ಕಾರ್ಪೊರೇಟ್ ಸಂವಹನ, ಸರ್ಕಾರಿ ಸಂಪರ್ಕ ಮತ್ತು ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ಬವಹಿಸಿದ್ದರು. ಅವರು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯಲ್ಲಿ (ಸಿಐಐ) ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದಲ್ಲದೆ, ‘ಖಂಡಾ್’ ಎಂಬ ಧಾರಾವಾಹಿಯಲ್ಲಿ ಸಹ ನಟಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:09 pm, Wed, 7 June 23