AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gitanjali Aiyar: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಮತ್ತು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರ ಸಂಸ್ಥೆಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದ ಗೀತಾಂಜಲಿ ಅಯ್ಯರ್ ಅವರು ಬುಧವಾರ (ಜೂನ್ 7) ನಿಧನರಾದರು.

Gitanjali Aiyar: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ
ಗೀತಾಂಜಲಿ ಅಯ್ಯರ್Image Credit source: Doordarshan
ಗಣಪತಿ ಶರ್ಮಾ
|

Updated on:Jun 07, 2023 | 10:10 PM

Share

ನವದೆಹಲಿ: ದೂರದರ್ಶನದ (Doordarshan) ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಮತ್ತು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರ ಸಂಸ್ಥೆಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದ ಗೀತಾಂಜಲಿ ಅಯ್ಯರ್ (Gitanjali Aiyar) ಅವರು ಬುಧವಾರ (ಜೂನ್ 7) ನಿಧನರಾದರು. 1971 ರಲ್ಲಿ ದೂರದರ್ಶನ ಸೇರಿದ್ದ ಅವರು ಅನೇಕ ಪ್ರಶಸ್ತಿಗಳಿಗೂ ಭಾಜನರಾಗಿದ್ದರು. ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ಆ್ಯಂಕರ್​​ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

ಅವರು ತಮ್ಮ ಅತ್ಯುತ್ತಮ ಕೆಲಸ, ಸಾಧನೆಗಳು ಮತ್ತು ಕೊಡುಗೆಗಾಗಿ 1989 ರಲ್ಲಿ ‘ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ’ಗೂ ಭಾಜನರಾಗಿದ್ದರು. ಅವರು ಭಾರತದ ಪ್ರಮುಖ ದಾನಿಗಳನ್ನೊಳಗೊಂಡ ‘ವರ್ಲ್ಡ್ ವೈಡ್ ಫಂಡ್’ನ ಮುಖ್ಯಸ್ಥರೂ ಆಗಿದ್ದರು.

ಗೀತಾಂಜಲಿ ಅಯ್ಯರ್ ಅವರು ಕೋಲ್ಕತ್ತಾದ ಲೊರೆಟೊ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಕೂಡ ಪಡೆದಿದ್ದರು.

ಇದನ್ನೂ ಓದಿ: Odisha: ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಸಾವು

ದೂರದರ್ಶನದಲ್ಲಿ ಸುದ್ದಿ ನಿರೂಪಕಿಯಾಗಿ ಯಶಸ್ವಿ ವೃತ್ತಿಜೀವನದ ನಂತರ ಗೀತಾಂಜಲಿ ಅವರು, ಕಾರ್ಪೊರೇಟ್ ಸಂವಹನ, ಸರ್ಕಾರಿ ಸಂಪರ್ಕ ಮತ್ತು ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ಬವಹಿಸಿದ್ದರು. ಅವರು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯಲ್ಲಿ (ಸಿಐಐ) ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದಲ್ಲದೆ, ‘ಖಂಡಾ್’ ಎಂಬ ಧಾರಾವಾಹಿಯಲ್ಲಿ ಸಹ ನಟಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:09 pm, Wed, 7 June 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ