AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಇರಾನ್ ವಿದೇಶಾಂಗ ಸಚಿವರ ಭೇಟಿಯಲ್ಲಿ ಪ್ರವಾದಿ ಮೊಹಮ್ಮದ್ ವಿವಾದ ಬಗ್ಗೆ ಮಾತು ಬಂದಿಲ್ಲ: ಎಂಇಎ

ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ವಿದೇಶಾಂಗ ವ್ಯವಹಾರಗಳ ಸಚಿವರು ಮತ್ತು ಇರಾನ್ ಸಚಿವರ ನಡುವಿನ ಮಾತುಕತೆ ವೇಳೆ ಈ ವಿಷಯ ಪ್ರಸ್ತಾಪ ಆಗಿಲ್ಲ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಇರಾನ್ ವಿದೇಶಾಂಗ ಸಚಿವರ ಭೇಟಿಯಲ್ಲಿ ಪ್ರವಾದಿ ಮೊಹಮ್ಮದ್ ವಿವಾದ ಬಗ್ಗೆ ಮಾತು ಬಂದಿಲ್ಲ: ಎಂಇಎ
ಅರಿಂದಮ್ ಬಾಗ್ಚಿ
TV9 Web
| Edited By: |

Updated on: Jun 09, 2022 | 9:54 PM

Share

ದೆಹಲಿ: ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಪ್ರವಾದಿ ಮೊಹಮ್ಮದ್ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ (Hossein Amir-Abdollahian) ಭೇಟಿ ವೇಳೆ ಪ್ರಸ್ತಾಪಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಅವರೊಂದಿಗಿನ ಸಭೆಯಲ್ಲಿ ಅಮೀರ್-ಅಬ್ದುಲ್ಲಾಹಿಯಾನ್ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ಇರಾನ್ ಹೇಳಿಕೆ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಇರಾನ್ ಸಚಿವರ ನಡುವಿನ ಮಾತುಕತೆ ವೇಳೆ ಈ ವಿಷಯ ಪ್ರಸ್ತಾಪ ಆಗಿಲ್ಲ ಎಂದು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಮಾತುಕತೆಗಳ ಬಗ್ಗೆ ಪ್ರತಿಕ್ರಿಯಿಸಲು ನಾನು ಇಚ್ಛಿಸುವುದಿಲ್ಲ. ನೀವು ಹೇಳುತ್ತಿರುವ ಆ ಹೇಳಿಕೆಗಳನ್ನು ಇರಾನ್ ವಾಪಸ್ ತೆಗೆದುಕೊಂಡಿದೆ ಎಂದಿದ್ದಾರೆ. ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರರು ಪ್ರವಾದಿ ಬಗ್ಗೆ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆ ವ್ಯಕ್ತಿಗಳ ಹೇಳಿಕೆಗಳು ಸರ್ಕಾರದ ಅಭಿಪ್ರಾಯವನ್ನು ಬಿಂಬಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಟ್ವೀಟ್‌ಗಳು ಮತ್ತು ಕಾಮೆಂಟ್‌ಗಳು ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ ಎಂದಿದ್ದಾರೆ ಬಾಗ್ಚಿ.

“ಇದನ್ನು ನಮ್ಮ ಸಂವಾದಕರಿಗೆ ತಿಳಿಸಲಾಗಿದೆ ಮತ್ತು ಕಾಮೆಂಟ್‌ಗಳು ಮತ್ತು ಟ್ವೀಟ್‌ಗಳನ್ನು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ತಿಳಿಸಲಾಗಿದೆ. ನಾನು ಈ ಬಗ್ಗೆ ಹೆಚ್ಚೇನೂ ಹೇಳಲಾರೆ ಎಂದು ಬಾಗ್ಚಿ ಹೇಳಿದ್ದಾರೆ.

ಇದೀಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ಪ್ರವಾದಿ ಮತ್ತು ಇಸ್ಲಾಂ ಧರ್ಮದ ವಿರುದ್ಧ ಮಾಡಿರುವ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಇರಾನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಪಶ್ಚಿಮ ಏಷ್ಯಾದ ಹಲವಾರು ದೇಶಗಳು ಆಕ್ರೋಶ ವ್ಯಕ್ತಪಡಿಸಿವೆ. ಆಡಳಿತಾರೂಢ ಬಿಜೆಪಿ ಈಗಾಗಲೇ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ