AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬ್ರಾ ಪೊಲೀಸ್ ಸಮನ್ಸ್

ಮೇ ತಿಂಗಳ ಕೊನೆಯಲ್ಲಿ ಸುದ್ದಿವಾಹಿನಿಯ ಚರ್ಚೆಯಲ್ಲಿ ಇಸ್ಲಾಂ ವಿರೋಧಿ ಹೇಳಿಕೆ ನೀಡಿದ್ದ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬ್ರಾ ಪೊಲೀಸ್ ಸಮನ್ಸ್
ನೂಪುರ್ ಶರ್ಮಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 07, 2022 | 3:32 PM

Share

ಪ್ರವಾದಿ ಮುಹಮ್ಮದ್ (Prophet Muhammad) ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ನೂಪುರ್ ಶರ್ಮಾ (Nupur Sharma) ಮತ್ತು ನವೀನ್ ಜಿಂದಾಲ್ (Naveen Jindal) ಅವರನ್ನು ಬಿಜೆಪಿ(BJP) ಅಮಾನತುಗೊಳಿಸಿದ ಎರಡು ದಿನಗಳ ನಂತರ, ಮಹಾರಾಷ್ಟ್ರದ ಮುಂಬ್ರಾ ಪೊಲೀಸರು ಮಂಗಳವಾರ ಶರ್ಮಾ ಅವರಿಗೆ ಸಮನ್ಸ್ ನೀಡಿದ್ದಾರೆ. ಶರ್ಮಾ ಅವರ ವಿವಾದಾತ್ಮಕ ಹೇಳಿಕೆಗಳ ಕುರಿತು ಹೇಳಿಕೆ ದಾಖಲಿಸಲು ಜೂನ್ 22 ರಂದು ಬರಬೇಕು ಎಂದಿದ್ದಾರೆ ಮುಂಬ್ರಾ ಪೊಲೀಸರು. ಮೇ ತಿಂಗಳ ಕೊನೆಯಲ್ಲಿ ಸುದ್ದಿವಾಹಿನಿಯ ಚರ್ಚೆಯಲ್ಲಿ ಇಸ್ಲಾಂ ವಿರೋಧಿ ಹೇಳಿಕೆ ನೀಡಿದ್ದ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. 2015ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಆಕೆಯನ್ನು ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಶರ್ಮಾ ಸೋತಿದ್ದರು. ಶರ್ಮಾ ಅವರನ್ನು ಅಮಾನತುಗೊಳಿಸುವುದರ ಜತೆಗೆ ಬಿಜೆಪಿ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಿತ್ತು. ಗಲ್ಫ್ ಪ್ರದೇಶದ ಮೂರು ದೇಶಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಲು ತಮ್ಮ ರಾಷ್ಟ್ರಗಳಿಗೆ ಭಾರತೀಯ ರಾಯಭಾರಿಗಳನ್ನು ಕರೆಸಿದ ನಂತರ ಮತ್ತು ಭಾರತದಿಂದ ಸಾರ್ವಜನಿಕ ಕ್ಷಮೆಯಾಚಿಸಲು ಒತ್ತಾಯಿಸಿದ ನಂತರ ಈ ಕ್ರಮ ಬಂದಿದೆ. ಸೋಮವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಮಾಲ್ಡೀವ್ಸ್ ಶರ್ಮಾ ಮತ್ತು ಜಿಂದಾಲ್ ಹೇಳಿಕೆಗಳನ್ನು ಖಂಡಿಸಿವಲೆ. ಸೌದಿ ಅರೇಬಿಯಾ, ಓಮನ್, ಬಹ್ರೇನ್, ಜೋರ್ಡಾನ್, ಲಿಬಿಯಾ, ಅಫ್ಘಾನಿಸ್ತಾನ, ಇಂಡೋನೇಷ್ಯಾ, ಪಾಕಿಸ್ತಾನ, ಕತಾರ್, ಕುವೈತ್ ಮತ್ತು ಇರಾನ್‌ ಭಾನುವಾರ ಭಾರತೀಯ ರಾಯಭಾರಿಗಳನ್ನು ಕರೆಸಿ ಹೇಳಿಕೆಗಳನ್ನು ಖಂಡಿಸಿತು.

ಭಾನುವಾರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆಯಲ್ಲಿ ಶರ್ಮಾ ಮತ್ತು ಜಿಂದಾಲ್ ಅವರ ಹೆಸರನ್ನು ಉಲ್ಲೇಖಿಸದೆ ಪಕ್ಷವು “ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ” ಎಂದಿದ್ದಾರೆ. “ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಭಾರತೀಯ ಜನತಾ ಪಕ್ಷವು ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವ ಅಥವಾ ಅವಮಾನಿಸುವ ಯಾವುದೇ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಬಿಜೆಪಿಯು ಅಂತಹ ವ್ಯಕ್ತಿಗಳನ್ನು ಅಥವಾ ತತ್ವಶಾಸ್ತ್ರವನ್ನು ಪ್ರಚಾರ ಮಾಡುವುದಿಲ್ಲ ಎಂದು ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ
Image
ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ; ಎಲ್ಲ ಧರ್ಮಗಳ ಬಗ್ಗೆ ಗೌರವ, ಸಹಿಷ್ಣುತೆಯನ್ನು ಪ್ರೋತ್ಸಾಹಿಸಿ: ವಿಶ್ವಸಂಸ್ಥೆ
Image
ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾಗೆ ಭದ್ರತೆ
Image
ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ: ಕುವೈತ್​​ನ ಸೂಪರ್ ಮಾರ್ಕೆಟ್​​ಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬಹಿಷ್ಕಾರ
Image
ಬಿಜೆಪಿಯ ಮತಾಂಧತೆ ಜಾಗತಿಕವಾಗಿ ಭಾರತದ ಸ್ಥಾನಮಾನಕ್ಕೆ ಧಕ್ಕೆ ತಂದಿದೆ: ರಾಹುಲ್ ಗಾಂಧಿ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:27 pm, Tue, 7 June 22