AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prophet Row: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬಂಧನ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನೂಪುರ್ ಶರ್ಮಾ ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಹಿಂಪಡೆಯುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.

Prophet Row: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬಂಧನ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ನೂಪುರ್ ಶರ್ಮ
TV9 Web
| Edited By: |

Updated on:Sep 09, 2022 | 1:34 PM

Share

ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ (Prophet Remarks Row) ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರನ್ನು ಬಂಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ (Supreme Court) ಇಂದು ನಿರಾಕರಿಸಿದೆ. ನಿರ್ದೇಶನಗಳನ್ನು ನೀಡುವಾಗ ನ್ಯಾಯಾಲಯವು ಸೂಕ್ಷ್ಮವಾಗಿರಬೇಕು. ಈ ಅರ್ಜಿಯನ್ನು ಹಿಂಪಡೆಯುವುದು ನಮ್ಮ ಸಲಹೆ ಎಂದು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ತಿಳಿಸಿದ್ದಾರೆ.

ನೂಪುರ್ ಶರ್ಮಾ ಅವರ ಹೇಳಿಕೆಯಿಂದ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ, ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಅನೇಕ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ಒತ್ತಾಯದ ಕ್ರಮ ತೆಗೆದುಕೊಳ್ಳದಂತೆ ಜುಲೈನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಮಧ್ಯೆ ನೂಪುರ್ ಶರ್ಮಾ ವಿರುದ್ಧ ಅಸ್ತಿತ್ವದಲ್ಲಿರುವ ಅಥವಾ ಭವಿಷ್ಯದ ಯಾವುದೇ ಎಫ್‌ಐಆರ್‌ಗಳು ಅಥವಾ ದೂರುಗಳಲ್ಲಿ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿ: Big Breaking ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ ದೆಹಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್ ಆದೇಶ

ಪ್ರವಾದಿ ಮೊಹಮ್ಮದ್ ಅವರ ವಿವಾದಾತ್ಮಕ ಹೇಳಿಕೆ ಮತ್ತು ಮುಸ್ಲಿಂ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿರುವ ಆರೋಪದ ಮೇಲೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಹಿಂಪಡೆಯುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು ಅರ್ಜಿಯನ್ನು ಹಿಂತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿತು.

ಮಾರ್ಚ್ 26ರಂದು ಪ್ರವಾದಿಯ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ಈ ವರ್ಷದ ಆರಂಭದಲ್ಲಿ ರಾಷ್ಟ್ರದಾದ್ಯಂತ ಭಾರಿ ವಿವಾದ ಮತ್ತು ಹಿಂಸಾಚಾರವನ್ನು ಉಂಟುಮಾಡಿದವು. ಹಲವಾರು ಮುಸ್ಲಿಂ ರಾಷ್ಟ್ರಗಳು ಪ್ರತಿಭಟನೆಯನ್ನು ಘೋಷಿಸಿದ ನಂತರ ಬಿಜೆಪಿ ಕೂಡ ನೂಪುರ್ ಶರ್ಮಾ ಅವರ ಹೇಳಿಕೆಗೂ ತಮ್ಮ ಪಕ್ಷಕ್ಕೂ ಸಂಬಂಧವಿಲ್ಲವೆಂದು ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Fri, 9 September 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ