AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prophet Row: ಜಾರ್ಖಂಡ್​ನಲ್ಲಿ ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಹಿಂಸಾಚಾರ; ಇಬ್ಬರು ಸಾವು, ಹಲವರಿಗೆ ಗಾಯ

ಜಾರ್ಖಂಡ್ ಮಾತ್ರವಲ್ಲದೆ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದಲ್ಲೂ ಇದೇ ರೀತಿಯ ಘರ್ಷಣೆಗಳು ನಡೆದಿವೆ. ಈ ಘಟನೆಗಳಲ್ಲಿ 20 ಜನರು ಗಾಯಗೊಂಡಿದ್ದಾರೆ.

Prophet Row: ಜಾರ್ಖಂಡ್​ನಲ್ಲಿ ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಹಿಂಸಾಚಾರ; ಇಬ್ಬರು ಸಾವು, ಹಲವರಿಗೆ ಗಾಯ
ಜಾರ್ಖಂಡ್​ನಲ್ಲಿ ಹಿಂಸಾಚಾರImage Credit source: Hindustan Times
TV9 Web
| Updated By: ಸುಷ್ಮಾ ಚಕ್ರೆ|

Updated on:Jun 11, 2022 | 10:03 AM

Share

ರಾಂಚಿ: ಪ್ರವಾದಿ ಮೊಹಮ್ಮದ್ ಪೈಗಂಬರ್ (Prophet Muhammed) ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ನಾಯಕರ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಜಾರ್ಖಂಡ್‌ನ ರಾಂಚಿಯಲ್ಲಿ (Ranchi) ಪ್ರವಾದಿ ಮೊಹಮ್ಮದ್ ವಿರುದ್ಧದ ಹೇಳಿಕೆಗಳ ವಿರುದ್ಧ ಹಿಂಸಾಚಾರ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ಶನಿವಾರ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಮತ್ತು ವಿವಾದದ ನಡುವೆ ಪಕ್ಷದಿಂದ ಉಚ್ಛಾಟಿತರಾಗಿರುವ ನವೀನ್ ಜಿಂದಾಲ್ (Naveen Jindal) ಅವರ ಹೇಳಿಕೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಕಳೆದ ಕೆಲವು ದಿನಗಳಲ್ಲಿ ಈ ಹೇಳಿಕೆಗಳನ್ನು ಸೌದಿ ಅರೇಬಿಯಾ, ಕತಾರ್, ಇರಾನ್ ಮತ್ತು ಹಲವಾರು ಇತರ ರಾಷ್ಟ್ರಗಳು ಕೂಡ ಟೀಕಿಸಿವೆ.

ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದಾರೆ ಮತ್ತು ವಾಹನಗಳಿಗೆ ಹಾನಿಯಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
Kulgam Encounter: ಕಾಶ್ಮೀರದ ಕುಲ್ಗಾಂನಲ್ಲಿ ಎನ್​ಕೌಂಟರ್; ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಹತ್ಯೆ
Image
ಸೋನಿಯಾ ಗಾಂಧಿಗೆ ಮತ್ತೆ ಸಮನ್ಸ್ ಜಾರಿ ಮಾಡಿದ ಇಡಿ, ಜೂನ್ 23ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ
Image
ದಾರಿತಪ್ಪಿಸುವ ಜಾಹೀರಾತುಗಳನ್ನು ತಡೆಯಲು ಹೊಸ ಮಾರ್ಗ ಸೂಚಿಗಳನ್ನು ಹೊರಡಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ

ಇದನ್ನೂ ಓದಿ: Nupur Sharma: ಬಿಜೆಪಿ ನಾಯಕಿ ನೂಪುರ್ ಶರ್ಮಾ ತಲೆ ಕತ್ತರಿಸಿದವರಿಗೆ 50 ಲಕ್ಷ ಬಹುಮಾನ ಘೋಷಿಸಿದ ಪಾಕಿಸ್ತಾನಿಗಳು

ಜಾರ್ಖಂಡ್ ಮಾತ್ರವಲ್ಲದೆ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದಲ್ಲೂ ಇದೇ ರೀತಿಯ ಘರ್ಷಣೆಗಳು ನಡೆದಿವೆ. ಈ ಘಟನೆಗಳಲ್ಲಿ 20 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಭದ್ರತಾ ಸಿಬ್ಬಂದಿಯೇ ಹೆಚ್ಚಾಗಿದ್ದಾರೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಕರ್ನಾಟಕದಲ್ಲಿಯೂ ಜನರು ಬೀದಿಗಿಳಿದು ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 am, Sat, 11 June 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ