AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hindi Imposition: ಹಿಂದಿ ಹೇರಿಕೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಮಿಳುನಾಡಿನ ವೃದ್ಧ

ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ನಿಲ್ಲಿಸದಿದ್ದರೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಡಿಎಂಕೆ ಯುವ ಘಟಕದ ಕಾರ್ಯದರ್ಶಿ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.

Hindi Imposition: ಹಿಂದಿ ಹೇರಿಕೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಮಿಳುನಾಡಿನ ವೃದ್ಧ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 26, 2022 | 4:30 PM

Share

ಸೇಲಂ: ಕೇಂದ್ರ ಸರ್ಕಾರದ ‘ಹಿಂದಿ ಹೇರಿಕೆ (Hindi Imposition)’ ಧೋರಣೆ ವಿರೋಧಿಸಿ ತಮಿಳುನಾಡಿನ 85 ವರ್ಷ ವಯಸ್ಸಿನ ವೃದ್ಧ ಕೃಷಿಕ ತಂಗವೇಲ್ ಎಂಬವರು ಶನಿವಾರ ಬೆಳಿಗ್ಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಸೇಲಂನ ಮೆಟ್ಟೂರು ಬಳಿಯ ತಲೈಯೂರು (Thalaiyur) ಎಂಬಲ್ಲಿ ಡಿಎಂಕೆ (DMK) ಕಚೇರಿ ಎದುರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 11 ಗಂಟೆ ವೇಳೆಗೆ ಡಿಎಂಕೆ ಕಚೇರಿ ಬಳಿ ಅವರು ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಂಡಿದ್ದಾರೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಂಗವೇಲ್ ಅವರು ಡಿಎಂಕೆಯ ಸಕ್ರಿಯ ಸದ್ಯರೂ ಆಗಿದ್ದರು. ಶಿಕ್ಷಣ ಮಾಧ್ಯಮವಾಗಿ ಹಿಂದಿಯನ್ನು ಅನುಷ್ಠಾನಗೊಳಿಸುವ ಕೇಂದ್ರ ಸರ್ಕಾರದ ಕ್ರಮದಿಂದ ಆಘಾತಗೊಂಡಿದ್ದರು ಎನ್ನಲಾಗಿದೆ.

‘ಮೋದಿ ಸರ್ಕಾರವೇ, ನಮಗೆ ಹಿಂದಿ ಬೇಡ’

ಆತ್ಮಹತ್ಯೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಬರೆದ ಬ್ಯಾನರ್ ಒಂದನ್ನು ತಂಗವೇಲ್ ಹಿಡಿದುಕೊಂಡಿದ್ದರು. ‘ಮೋದಿ ಸರ್ಕಾವೇ, ಕೇಂದ್ರ ಸರ್ಕಾರವೇ ನಮಗೆ ಹಿಂದಿ ಬೇಡ. ನಮ್ಮ ಮಾತೃಭಾಷೆ ತಮಿಳು. ಹಿಂದಿ ವಿದೂಷಕರ ಭಾಷೆ. ಹಿಂದಿ ಹೇರಿಕೆಯಿಂದ ನಮ್ಮ ವಿದ್ಯಾರ್ಥಿಗಳ ಜೀವನಕ್ಕೆ ತೊಂದರೆಯಾಗಲಿದೆ. ಹಿಂದಿಯನ್ನು ತೊಲಗಿಸಿ, ಹಿಂದಿಯನ್ನು ತೊಲಗಿಸಿ, ಹಿಂದಿಯನ್ನು ತೊಲಗಿಸಿ’ ಎಂಬ ಸಂದೇಶ ಬ್ಯಾನರ್​​ನಲ್ಲಿತ್ತು ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ನಿಲ್ಲಿಸದಿದ್ದರೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಡಿಎಂಕೆ ಯುವ ಘಟಕದ ಕಾರ್ಯದರ್ಶಿ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು. ಕೇಂದ್ರ ಸರ್ಕಾರದ ಕ್ರಮವನ್ನು ನೋಡಿಕೊಂಡು ಮೂಕಪ್ರೇಕ್ಷನಾಗಿರಲು ಸಾಧ್ಯವಿಲ್ಲ ಎಂದಿದ್ದ ಡಿಎಂಕೆ ತಮಿಳುನಾಡಿನಲ್ಲಿ ಸಾಮೂಹಿಕ ಪ್ರತಿಭಟನೆಗಳನ್ನೂ ನಡೆಸಿತ್ತು. ಐಐಟಿಯಂಥ ಉನ್ನತ ಮಟ್ಟದ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಕಲಿಕಾ ಮಾಧ್ಯಮವನ್ನಾಗಿ ಅಳವಡಿಸುವ ಬಗ್ಗೆ ಸಂಸದೀಯ ಸಮಿತಿ ಇತ್ತೀಚೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇದರ ಬೆನ್ನಲ್ಲೇ ಪ್ರತಿಭಟನೆಗಳು ತೀವ್ರಗೊಂಡಿದ್ದವು.

ಹಿಂದಿ ಭಾಷೆಯನ್ನು ಹೇರಲು ಬಯಸುವವರು ಅದನ್ನು ಪ್ರಾಬಲ್ಯದ ಸಂಕೇತವೆಂದು ಪರಿಗಣಿಸುತ್ತಾರೆ. ಒಂದೇ ಧರ್ಮ ಇರಬೇಕು ಎಂದುಕೊಂಡಂತೆ, ಒಂದೇ ಭಾಷೆ ಇರಬೇಕು ಎಂದು ಭಾವಿಸುತ್ತಾರೆ. ನಾವು ತಮಿಳು ಭಾಷೆಯ ಬಗ್ಗೆ ಮಾತನಾಡುತ್ತೇವೆ ಎಂದ ಮಾತ್ರಕ್ಕೆ ನಾವು ಸಂಕುಚಿತ ಮನಸ್ಸಿನವರು ಎಂದು ಅರ್ಥವಲ್ಲ. ಹಿಂದಿ ಮಾತ್ರವಲ್ಲ, ನಾವು ಯಾವುದೇ ಭಾಷೆಯ ವಿರೋಧಿಯಲ್ಲ. ನಾವು ಹಿಂದಿ ಹೇರಿಕೆಯ ವಿರೋಧಿಗಳೇ ವಿನಃ ಹಿಂದಿ ಭಾಷೆಯ ವಿರೋಧಿಗಳಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇತ್ತೀಚೆಗೆ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು