AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಖ್‌ಬೀರ್ ಬಾದಲ್, ಹರ್ಸಿಮ್ರತ್ ಕೌರ್ ಬಂಧನ; ದೆಹಲಿಯಲ್ಲಿ ಸೆಕ್ಷನ್ 144 ಜಾರಿ

Shiromani Akali Dal ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಪೂರ್ತಿಗೊಂಡಿರುವ ಹಿನ್ನಲೆಯಲ್ಲಿಗುರುದ್ವಾರ ರಕಾಬ್ ಗಂಜ್ ಸಾಹಿಬ್‌ನಿಂದ ಸಂಸತ್ತಿನವರೆಗೆ ಎಸ್​​ಎಡಿ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು

ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸುಖ್‌ಬೀರ್ ಬಾದಲ್, ಹರ್ಸಿಮ್ರತ್ ಕೌರ್ ಬಂಧನ; ದೆಹಲಿಯಲ್ಲಿ ಸೆಕ್ಷನ್ 144 ಜಾರಿ
ಸುಖ್‌ಬೀರ್ ಬಾದಲ್
TV9 Web
| Edited By: |

Updated on: Sep 17, 2021 | 4:42 PM

Share

ದೆಹಲಿ: ಶಿರೋಮಣಿ ಅಕಾಲಿದಳ (SAD) ಮುಖ್ಯಸ್ಥ ಸುಖ್‌ಬೀರ್ ಬಾದಲ್ ಮತ್ತು ಮಾಜಿ ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಸೇರಿದಂತೆ 15 ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದಕ್ಕೆ ಇವರನ್ನು ಬಂಧಿಸಿ,ಸಂಸದ್ ಮಾರ್ಗ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ನಮ್ಮನ್ನು ಬಂಧಿಸುವ ಮೊದಲು ಸುದ್ದಿಗಾರರಿಗೆ ಪಕ್ಷದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು ಮತ್ತು ಅವರ ವಾಹನಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ಮಾಡಿದ್ದಾರೆ ಎಂದು ಬಾದಲ್ ಹೇಳಿದ್ದಾರೆ. “ಶಾಂತಿಯುತ ಪ್ರತಿಭಟನೆಗೆ ತಡೆಯೊಡ್ಡಲಾಯಿತು. ಪಂಜಾಬ್ ಮಾತ್ರವಲ್ಲದ ಇಡೀ ದೇಶವು ತನ್ನ ಸರ್ಕಾರದ ವಿರುದ್ಧವಾಗಿದೆ ಎಂದು ಪ್ರಧಾನಿ ಮೋದಿಗೆ ಸಂದೇಶ ನೀಡಲು ಇಲ್ಲಿಗೆ ಬಂದಿದ್ದೇವೆ ಎಂದು ಬಾದಲ್ ಹೇಳಿದ್ದಾರೆ.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಪೂರ್ತಿಗೊಂಡಿರುವ ಹಿನ್ನಲೆಯಲ್ಲಿಗುರುದ್ವಾರ ರಕಾಬ್ ಗಂಜ್ ಸಾಹಿಬ್‌ನಿಂದ ಸಂಸತ್ತಿನವರೆಗೆ ಎಸ್​​ಎಡಿ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯಾದ್ಯಂತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಎಎನ್​​ಐಗೆ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಶುಕ್ರವಾರ ಮುಂಜಾನೆ ಹಂಚಿಕೊಂಡ ಟ್ವೀಟ್‌ನಲ್ಲಿ, ಎಲ್ಲಾ ದೆಹಲಿ ಗಡಿಗಳನ್ನು ಮುಚ್ಚಲಾಗಿದೆ ಮತ್ತು ಪಂಜಾಬ್ ವಾಹನಗಳನ್ನು ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಪಕ್ಷ ಹೇಳಿದೆ. “ನಮ್ಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪಂಜಾಬಿಗಳಿಗೆ ಹೇಳಲಾಗುತ್ತಿದೆ. ನಮ್ಮ ಶಾಂತಿಯುತ ಧ್ವನಿಯು ಶಕ್ತಿಗಳನ್ನು ಹೆದರಿಸಿದೆ ಎಂದು ಎಸ್‌ಎಡಿ ಟ್ವೀಟ್ ಮಾಡಿದೆ.

ಎಎನ್ಐ ಪ್ರಕಾರ, ‘ಬ್ಲಾಕ್ ಫ್ರೈಡೇ’ ಪ್ರತಿಭಟನೆಗೆ ಸುಖ್‌ಬೀರ್ ಬಾದಲ್ ಮತ್ತು ಹರ್ಸಿಮ್ರತ್ ಕೌರ್ ಬಾದಲ್ ನೇತೃತ್ವ ವಹಿಸಿದ್ದರು ಎಂದು ಹೇಳಲಾಗಿದೆ. ಈ ಹಿಂದೆ, ಎಸ್‌ಎಡಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ಸಿಂಗ್ ಚಂದುಮಾಜ್ರಾ ಅವರು ಮೆರವಣಿಗೆ ಶಾಂತಿಯುತವಾಗಿರುತ್ತದೆ ಎಂದು ಹೇಳಿದ್ದರು.

“ಮೆರವಣಿಗೆ ಶಾಂತಿಯುತವಾಗಿರುತ್ತದೆ. ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರಕ್ಕೆ ಜ್ಞಾಪನಾ ಪತ್ರವನ್ನು ನೀಡುತ್ತೇವೆ. ನಾವು ಪ್ರತಿಭಟನೆಗೆ ಅನುಮತಿ ಪಡೆಯದಿದ್ದರೂ, ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಮತ್ತು ನಮ್ಮ ಜ್ಞಾಪನಾ ಪತ್ರವನ್ನು ನೀಡುತ್ತೇವೆ ಎಂದು ಅವರು ಎಎನ್ಐಗೆ ತಿಳಿಸಿದರು.

ರಾಷ್ಟ್ರೀಯ ರಾಜಧಾನಿಯಾದ್ಯಂತ ಕೆಲವು ಪ್ರದೇಶಗಳನ್ನು ತಪ್ಪಿಸಲು ಪ್ರಯಾಣಿಕರನ್ನು ಒತ್ತಾಯಿಸಲಾಗಿದೆ.  ಪ್ರತಿಭಟನೆಯ ದೃಷ್ಟಿಯಿಂದ ಕೆಲವು ರಸ್ತೆಗಳನ್ನು ಮುಚ್ಚಲಾಗಿದೆ. ದೆಹಲಿ ಟ್ರಾಫಿಕ್ ಪೋಲಿಸ್ ಜನರು ಗುರುದ್ವಾರ ರಾಕಬ್‌ಗಂಜ್ ರಸ್ತೆ, ಆರ್‌ಎಂಎಲ್ ಆಸ್ಪತ್ರೆ, , ಅಶೋಕ ರೋಡ್ ಮತ್ತು ಬಾಬಾ ಖರಕ್ ಸಿಂಗ್ ಮಾರ್ಗ್‌ನಲ್ಲಿ ಟ್ರಾಫಿಕ್ ಅನ್ನು ತೆರವುಗೊಳಿಸುವಂತೆ ಜನರನ್ನು ಕೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಸ್ವೀಕರಿಸಿದ ಉಡುಗೊರೆ, ಸ್ಮರಣಿಕೆಗಳ ಹರಾಜು ಇಂದಿನಿಂದ; ನೀವೂ ಭಾಗವಹಿಸಬೇಕೆ? ಮಾಹಿತಿ ಇಲ್ಲಿದೆ

(Protest march to Parliament against the Centre’s farm laws Sukhbir Badal, Harsmirat Kaur detained by Delhi police )

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ