AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚಲೋ: ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಬಗ್ಗೆ ಇಂದಿನ ಸಭೆಯಲ್ಲಿ ರೈತರ ತೀರ್ಮಾನ

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಜೊತೆಗೆ ನಡೆಯುವ ಮಾತುಕತೆಯಲ್ಲಿ ಭಾಗವಹಿಸುವ ಬಗ್ಗೆ ರೈತರು ಇಂದು ಸಭೆ ನಡೆಸಿ ನಿರ್ಣಯ ಕೈಗೊಳ್ಳಲಿದ್ದಾರೆ.

ದೆಹಲಿ ಚಲೋ: ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಬಗ್ಗೆ ಇಂದಿನ ಸಭೆಯಲ್ಲಿ ರೈತರ ತೀರ್ಮಾನ
ದೆಹಲಿಯ ಗಢಿಭಾಗದಲ್ಲಿ ಪ್ರತಿಭಟನಾನಿರತ ರೈತರು
TV9 Web
| Edited By: |

Updated on:Apr 06, 2022 | 11:29 PM

Share

ದೆಹಲಿ: ಕೇಂದ್ರದ ಹೊಸ ಕೃಷಿ ಕಾಯ್ದೆಯ ವಿರುದ್ಧ ಹೋರಾಡುತ್ತಿರುವ ರೈತರನ್ನು ಸರ್ಕಾರವು ಮಾತುಕತೆಗೆ ಆಹ್ವಾನಿಸಿದ್ದು, ಮಾತುಕತೆಯಲ್ಲಿ ಭಾಗವಹಿಸಬೇಕೆ, ಬೇಡವೇ ಎಂಬ ಬಗ್ಗೆ ರೈತ ಸಂಘವು ಸಭೆ ನಡೆಸಿ ತೀರ್ಮಾನಿಸುವುದಾಗಿ ತಿಳಿಸಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಜೊತೆಗೆ ನಡೆಯುವ ಸಭೆಯಲ್ಲಿ ಭಾಗವಹಿಸುವ ಬಗ್ಗೆ ರೈತರು ಇಂದು ತೀರ್ಮಾನಿಸಲಿದ್ದಾರೆ.

ಸಚಿವ ನರೇಂದ್ರ ಸಿಂಗ್ ತೋಮರ್, ಚಳಿ ಮತ್ತು ಕೊರೊನಾ ಕಾರಣ ನೀಡಿ, ರೈತ ಮುಖಂಡರನ್ನು ಡಿಸೆಂಬರ್ 3ರ ಬದಲಾಗಿ ಇಂದೇ ಮಾತುಕತೆಗೆ ಬರುವಂತೆ ಆಹ್ವಾನಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರೈತ ಮುಖಂಡ ಬಲಿಜೀತ್ ಸಿಂಗ್ ಮಹಲ್, ಕೇಂದ್ರದ ಆಹ್ವಾನವನ್ನು ಸ್ವೀಕರಿಸುವ ಬಗ್ಗೆ ಇಂದಿನ ಸಭೆಯಲ್ಲಿ ತೀಮಾರ್ನಿಸಲಿದ್ದೇವೆ ಎಂದಿದ್ದಾರೆ.

ಆರು ದಿನಗಳಿಂದ ರೈತರ ಪ್ರತಿಭಟನೆ ಸತತ ಆರು ದಿನಗಳಿಂದ ದೆಹಲಿಯ ವಿವಿಧ ಗಡಿಪ್ರದೇಶಗಳಲ್ಲಿ ನೆರೆದಿರುವ ರೈತರು, ಕೇಂದ್ರದ ಹೊಸ ಕೃಷಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ಕಾಯ್ದೆಯು ರೈತರಿಗೆ ಸಿಗುವ ಕನಿಷ್ಠ ಬೆಂಬಲ ಬೆಲೆಯನ್ನು ಕಿತ್ತುಹಾಕಲಿದೆ ಎಂಬ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇಂದಿನ ಸಭೆಯ ಬಗ್ಗೆ ಸಚಿವ ತೋಮರ್ ಏನು ಹೇಳಿದ್ದಾರೆ? ಇಂದಿನ ಸಭೆಯನ್ನು ಅಪರಾಹ್ನ 3 ಗಂಟೆಗೆ, ದೆಹಲಿಯ ವಿಜ್ಞಾನ ಭವನದಲ್ಲಿ ನಡೆಸುವ ಬಗ್ಗೆ ಸಚಿವ ತೋಮರ್ ನಿನ್ನೆ ಹೇಳಿಕೆ ನೀಡಿದ್ದರು. ಈ ಹಿಂದೆ, ನವೆಂಬರ್ 13ರಂದು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರಿಗೆ ಆಹ್ವಾನ ನೀಡಲಾಗಿದೆ ಎಂದೂ ಹೇಳಿದ್ದರು.

ರೈತರ ‘ಮನ್ ಕೀ ಬಾತ್’ ನಾವು ಒಂದು ನಿರ್ಣಾಯಕ ಯುದ್ಧಕ್ಕಾಗಿ ದೆಹಲಿಗೆ ಬಂದಿದ್ದೇವೆ ಎಂದಿರುವ ರೈತರು, ನಮ್ಮ ‘ಮನ್ ಕೀ ಬಾತ್’ಅನ್ನು ಪ್ರಧಾನಿ ಮೋದಿ ಆಲಿಸಬೇಕು ಎಂದಿದ್ದಾರೆ. ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವವರೆಗೆ ನಾವು ಆಂದೋಲನ ಕೈಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ: ಕುಮಾರಸ್ವಾಮಿ ಸರಣಿ ಟ್ವೀಟ್

Published On - 11:08 am, Tue, 1 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ