AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೆಹಲಿ ಚಲೋ ಕೊರೊನಾ ಹರಡುವಿಕೆಗೆ ಕಾರಣವಾಗುವುದಿಲ್ಲವೇ?‘ ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ತಬ್ಲಿಘಿ ಜಮಾತ್ ಘಟನೆಯನ್ನು ಉದಾಹರಣೆ ನೀಡಿರುವ ಸರ್ವೋಚ್ಛ ನ್ಯಾಯಾಲಯ ‘ದೆಹಲಿ ಚಲೋ’ ಕೊರೊನಾ ಸೋಂಕಿನ ಹರಡುವಿಕೆಗೆ ಕಾರಣವಾಗುವುದಿಲ್ಲವೇ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

‘ದೆಹಲಿ ಚಲೋ ಕೊರೊನಾ ಹರಡುವಿಕೆಗೆ ಕಾರಣವಾಗುವುದಿಲ್ಲವೇ?‘ ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್
ಚಳವಳಿ ನಿರತ ವೃದ್ಧ ರೈತ
guruganesh bhat
| Updated By: ರಶ್ಮಿ ಕಲ್ಲಕಟ್ಟ|

Updated on:Jan 07, 2021 | 6:14 PM

Share

ದೆಹಲಿ: ಚಳುವಳಿ ನಿರತ ಪಂಜಾಬ್ ರೈತರು ಕೊರೊನಾ ಸೋಂಕಿನಿಂದ ರಕ್ಷಿಸಲ್ಪಟ್ಟಿದ್ದಾರೆಯೇ? ಎಂದು 43ನೇ ದಿನ ಪ್ರವೇಶಿಸಿರುವ ದೆಹಲಿ ಚಲೋ ಚಳುವಳಿ ಕುರಿತು ಸರ್ವೋಚ್ಛ ನ್ಯಾಯಾಲಯ ಕೇಂದ್ರ ಸರ್ಕಾರವನ್ನು ಗಂಭೀರವಾಗಿ ಪ್ರಶ್ನಿಸಿದೆ. ದೇಶದ ರಾಜಧಾನಿಯ ಗಡಿಭಾಗದಲ್ಲಿ ಸಾವಿರಾರು ರೈತರು ವಾಸ್ತವ್ಯ ಹೂಡಿ ಪ್ರತಿಭಟಿಸುತ್ತಿದ್ದು, ಕೊರೊನಾ ಸೋಂಕಿನಿಂದ ಅವರು ಮುಕ್ತವಾಗಿದ್ದಾರೆಯೇ? ಹಿಂದೊಮ್ಮೆ ಕೊರೊನಾ ಸೋಂಕು ಹರಡಲು ಕಾರಣವಾಗಿದ್ದ ತಬ್ಲಿಘಿ ಜಮಾತ್ ಘಟನೆಯಿಂದ ಪಾಠ ಕಲಿತಿಲ್ಲವೇ ಎಂದು ನ್ಯಾಯಾಲಯ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್  ಬೋಬಡೆ ಅವರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ಸರ್ವೋಚ್ಛ ನ್ಯಾಯಾಲಯ ಪಂಜಾಬ್ ರೈತರ ಯೋಗಕ್ಷೇಮ ವಿಚಾರಿಸಿದಂತಾಗಿದೆ.

2020ರ ಮಾರ್ಚ್​ನಲ್ಲಿ ಕೊರೊನಾ ಸೋಂಕಿನ ಭಯದ ನಡುವೆ ದೆಹಲಿಯ ದರ್ಗಾವೊಂದರಲ್ಲಿ ತಬ್ಗಿಘಿ ಜಮಾತ್ ಸಂಘಟನೆಯ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮ ದೇಶದಲ್ಲಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ‘ಸೂಪರ್ ಸ್ಪ್ರೆಡರ್’ ಆಗಿ ಪರಿಣಮಿಸುತ್ತದೆ ಎಂದು ಬಿಂಬಿಸಲಾಗಿತ್ತು. ಪೊಲೀಸರು ಆದರೆ, ಕೆಲ ತಿಂಗಳ ನಂತರ ಸರ್ವೋಚ್ಛ ನ್ಯಾಯಾಲಯ ಸಾಕ್ಷಿಯ ಕೊರತೆಯಿಂದ ತಬ್ಲಿಘಿ ಜಮಾತ್ ವಿರುದ್ಧದ ಆರೋಪವನ್ನು ನಿರಾಕರಿಸಿತ್ತು.

ಈ ಘಟನೆಯಂತೆಯೇ, ದೆಹಲಿ ಚಲೋ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳಕ್ಕೆ ಕಾರಣವಾಗುವುದಿಲ್ಲವೇ ಎಂದು ಸರ್ವೋಚ್ಛ ನ್ಯಾಯಾಲಯ ಸರ್ಕಾರವನ್ನು ಪ್ರಶ್ನಿಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದಾರೆ.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ

Published On - 6:07 pm, Thu, 7 January 21

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ