AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ತೆರಳುವ ಮಾರ್ಗಗಳನ್ನೇ ಬಂದ್ ಮಾಡುತ್ತೇವೆ: ಎಚ್ಚರಿಕೆ ನೀಡಿದ ಪಂಜಾಬ್ ರೈತರು

ಸತತ ಐದನೇ ದಿನಕ್ಕೆ ದೆಹಲಿ ಚಲೋ ಕಾಲಿಟ್ಟಿದೆ. ಯಾವುದೇ ಪೂರ್ವಭಾವಿ ಷರತ್ತು ವಿಧಿಸದೇ ಮಾತುಕತೆಗೆ ಒಪ್ಪಿದರೆ ಮಾತ್ರ, ಕೇಂದ್ರ ಸರ್ಕಾರದ ಜೊತೆ ಸಭೆ ನಡೆಸಲು ಸಿದ್ಧರಿದ್ದೇವೆ ಎಂದು ರೈತರು ತಿಳಿಸಿದ್ದಾರೆ.

ದೆಹಲಿಗೆ ತೆರಳುವ ಮಾರ್ಗಗಳನ್ನೇ ಬಂದ್ ಮಾಡುತ್ತೇವೆ: ಎಚ್ಚರಿಕೆ ನೀಡಿದ ಪಂಜಾಬ್ ರೈತರು
ಚಳಿಯಲ್ಲಿ ಪ್ರತಿಭಟನಾ ನಿರತ ಪಂಜಾಬ್ ರೈತರು
guruganesh bhat
|

Updated on:Dec 05, 2020 | 11:28 AM

Share

ದೆಹಲಿ: ಪಂಜಾಬ್ ರೈತರ ದೆಹಲಿ ಚಲೋ ಚಳವಳಿ ಐದನೇ ದಿನಕ್ಕೆ ಕಾಲಿಟ್ಟಿದೆ. ಸಿಂಘು-ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್​ ರೈತರು ದೆಹಲಿಯ ಬುರಾರಿಯಲ್ಲಿರುವ ನಿರಂಕಾರಿ ಮೈದಾನಕ್ಕೆ ತೆರಳಲು ನಿರಾಕರಿಸಿದ್ದಾರೆ. ದೆಹಲಿ ಪ್ರವೇಶಿಸುವ ಎಲ್ಲ ಐದು ಮಾರ್ಗಗಳನ್ನು ಮುಚ್ಚುವ ಆಯ್ಕೆಯೂ ತಮ್ಮ ಬಳಿಯಿದೆಯೆಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಷರತ್ತಿಗೆ ಮಣಿಯಲ್ಲ ಗೃಹ ಸಚಿವ ಅಮಿತ್ ಶಾ ನಿರಂಕಾರಿ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಒದಗಿಸುವ ಭರವಸೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಯೂನಿಯನ್​ ನಾಯಕ ಹರ್ಮೀತ್ ಸಿಂಗ್, ‘ಯಾವುದೇ ಪೂರ್ವಭಾವಿ ಷರತ್ತು ವಿಧಿಸದೇ ಮಾತುಕತೆಗೆ ಒಪ್ಪಿದರೆ ಮಾತ್ರ, ಕೇಂದ್ರ ಸರ್ಕಾರದ ಜೊತೆ ಸಭೆ ನಡೆಸಲು ಸಿದ್ಧರಿದ್ದೇವೆ’ ಎಂದು ತಿಳಿಸಿದರು. ಇನ್ನೂ ಸಾವಿರಾರು ರೈತರು ಈ ಪ್ರತಿಭಟನೆಯನ್ನು ಸೇರಿಕೊಳ್ಳಲಿದ್ದಾರೆ. ನಿರಂಕಾರಿ ಮೈದಾನವನ್ನು ಕೆಲವು ರೈತರು ತಲುಪಿದರೂ ಅದು ತೆರೆದ ಜೈಲಿಗೆ ಸಮ’ ಎಂದು ಸಹ ಅವರು ಹೇಳಿದ್ದಾರೆ.

ಭದ್ರತೆಯ ದೃಷ್ಟಿಯಿಂದ ಗಾಜಿಯಾಬಾದ್​ನ ಬಳಿ ಪೊಲೀಸರು ರಸ್ತೆ ತಡೆಹಿಡಿಯುತ್ತಿರುವುದು

ಸರ್ಕಾರ ರೈತರನ್ನು ಭಯೋತ್ಪಾಕರಂತೆ ನಡೆಸಿಕೊಳ್ಳುತ್ತಿದೆ ದೆಹಲಿ ಚಲೋ ವಿಷಯದಲ್ಲಿ ಬಿಜೆಪಿ ರೈತರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಶಿವಸೇನೆ ಟೀಕಿಸಿದೆ. ಶಿವಸೇನಾ ಸಂಸದ ಸಂಜಯ್ ರಾವುತ್, ಕೇಂದ್ರವು ರೈತರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳುತ್ತಿದೆ. ರೈತರ ಬೇಡಿಕೆಗಳನ್ನು ಆಲಿಸಬೇಕಿತ್ತು. ಬದಲಿಗೆ, ರೈತರನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಹರಿಹಾಯ್ದಿದ್ದಾರೆ.

ಇನ್ನಷ್ಟು.. ಪಂಜಾಬ್ ರೈತರಿಂದ ದೆಹಲಿ ಚಲೊ: ಇಲ್ಲಿವೆ ಕುಗ್ಗದ-ಜಗ್ಗದ ರೈತನ ದಾರುಣ ಚಿತ್ರಣಗಳು ಪ್ರತಿಭಟನೆ ಸ್ಥಳ ಬದಲಿಸಿದರೆ ಮಾತುಕತೆ ಎಂಬ ಅಮಿತ್​ ಶಾ ಷರತ್ತಿಗೆ ರೈತರ ತಿರಸ್ಕಾರ ‘ದೆಹಲಿ ಚಲೋ; ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು ಏನೇ ಆಗ್ಲಿ, ದೆಹಲಿ ತಲುಪೇ ತಲುಪುತ್ತೇವೆ -6 ತಿಂಗಳ ದಿನಸಿ ಹೊತ್ತು ದೆಹಲಿಯತ್ತ ಸಾಗಿದ ರೈತನ ಆಕ್ರೋಶ

Published On - 11:28 am, Mon, 30 November 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ