AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Laws ರೈತರ ಆಂದೋಲನ ತಕ್ಷಣ ಹಿಂಪಡೆಯುವುದಿಲ್ಲ, ಸಂಸತ್​​ನಲ್ಲಿ ಕೃಷಿ ಕಾನೂನು ರದ್ದಾಗಲಿ: ರಾಕೇಶ್ ಟಿಕಾಯತ್

ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆ ಆರಂಭವಷ್ಟೇ ಎಂದು ಹೇಳಿದ ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಸಂಸತ್ತಿನಲ್ಲಿ ನಿರ್ಧಾರವನ್ನು ಅಂಗೀಕರಿಸಿದ ನಂತರವೇ ಪ್ರತಿಭಟನಾ ನಿರತ ರೈತರು ತಮ್ಮ ಮನೆಗಳಿಗೆ ಮರಳುತ್ತಾರೆ ಎಂದಿದ್ದಾರೆ.

Farmers Laws ರೈತರ ಆಂದೋಲನ ತಕ್ಷಣ ಹಿಂಪಡೆಯುವುದಿಲ್ಲ, ಸಂಸತ್​​ನಲ್ಲಿ ಕೃಷಿ ಕಾನೂನು ರದ್ದಾಗಲಿ: ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 19, 2021 | 11:09 AM

Share

ದೆಹಲಿ: ರೈತರ ಆಂದೋಲನ (Farmers Protest) ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು(farm laws)  ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್​​ಪಿ (MSP) ಜೊತೆಗೆ ಸರ್ಕಾರವು ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ (Rakesh Tikait) ಟ್ವೀಟ್ ಮಾಡಿದ್ದಾರೆ. ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆ ಆರಂಭವಷ್ಟೇ ಎಂದು ಹೇಳಿದ ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಸಂಸತ್ತಿನಲ್ಲಿ ನಿರ್ಧಾರವನ್ನು ಅಂಗೀಕರಿಸಿದ ನಂತರವೇ ಪ್ರತಿಭಟನಾ ನಿರತ ರೈತರು ತಮ್ಮ ಮನೆಗಳಿಗೆ ಮರಳುತ್ತಾರೆ ಎಂದು ಪುನರುಚ್ಚರಿಸಿದರು. ದೂರವಾಣಿ ಮೂಲಕ ಹಿಂದೂಸ್ತಾನ್ ಟೈಮ್ಸ್ ಜತೆ ಮಾತನಾಡಿದ ಟಿಕಾಯತ್ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು ಸೇರಿದಂತೆ ಅನೇಕ ಸಮಸ್ಯೆಗಳು ಬಾಕಿ ಉಳಿದಿವೆ, ಇವುಗಳನ್ನು ಪ್ರಧಾನಿ ತಿಳಿಸಿಲ್ಲ. ನಾವು “ಖೂಂತಾ ತಭಿ ಉಖರೇಂಗೆ ಜಬ್ ಕಾಮ್ ಪಕ್ಕಾ ಹೋ ಜಾವೇಗಾ (ಕಾರ್ಯ ಮುಗಿದ ನಂತರ ಮಾತ್ರ ಹಿಂತಿರುಗುತ್ತೇವೆ)” ಎಂದು ಪುನರಾವರ್ತಿಸಿದರು. ಸಂಸತ್ತಿನಲ್ಲಿ ಅದನ್ನು ಸರಿಯಾಗಿ ಅಂಗೀಕರಿಸುವವರೆಗೆ ರೈತರು ಅಂತಹ ಘೋಷಣೆಗಳನ್ನು ನಂಬುವುದಿಲ್ಲ ಎಂದು ಟಿಕಾಯತ್ ಹೇಳಿದ್ದಾರೆ.

” ಇಂದು ಈ ಬೆಳವಣಿಗೆ ಬಗ್ಗೆ ಚರ್ಚಿಸಲು ಮತ್ತು ಪರಿಶೀಲಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸಭೆ ಕರೆಯಲಾಗುವುದು ಮತ್ತು ಅದರ ಪ್ರಕಾರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು. ಮೋದಿಯವರ ಘೋಷಣೆ ಆರಂಭವಷ್ಟೇ ಎಂದಿದ್ದಾರೆ ಟಿಕಾಯತ್.

ಆಂದೋಲನವನ್ನು ಬಲಪಡಿಸಲು ಮತ್ತು ಮುನ್ನಡೆಸಲು 600 ಕ್ಕೂ ಹೆಚ್ಚು ರೈತರು ತಮ್ಮ ತ್ಯಾಗವನ್ನು ನೀಡಿದ್ದಾರೆ ಮತ್ತು ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ನಾವು ಅವರ ತ್ಯಾಗವನ್ನು ಗೌರವಿಸಬೇಕಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್  ಪಡೆಯುವ ನಿರ್ಧಾರ  ದೇಶದ ಎಲ್ಲ ರೈತರಿಗೆ ಸಿಕ್ಕಿರುವ ಗೆಲುವು ಎಂದು ಆಲ್ ಇಂಡಿಯಾ ಕಿಸಾನ್ ಸಭಾ ಪ್ರತಿಕ್ರಿಯೆ ನೀಡಿದೆ.ಈ ಹೋರಾಟದಲ್ಲಿ 700 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು  ಎಐಕೆಎಸ್ ಹೇಳಿದೆ.

ಇದನ್ನೂ ಓದಿ: PM Modi on Farm Laws: ರೈತರ ನಿರಂತರ ಹೋರಾಟ ಹಿನ್ನೆಲೆ; ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್: ಪ್ರಧಾನಿ ಮೋದಿ

ಇದನ್ನೂ ಓದಿ:  PM Modi on Farm Laws: ಮೂರೂ ಕೃಷಿ ಮಸೂದೆಗಳು ವಾಪಸ್​ ತೆಗೆದುಕೊಂಡು, ರೈತರ ಕ್ಷಮೆ ಕೋರಿದ ಪ್ರಧಾನಿ ನರೇಂದ್ರ ಮೋದಿ

Published On - 10:34 am, Fri, 19 November 21

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!