AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಅಗ್ನಿಪಥ್​​ ಯೋಜನೆ ವಿರುದ್ಧ ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ

ಅರ್ರಾದಲ್ಲಿರುವ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಕೇಂದ್ರದ ಅಗ್ನಿಪಥ್​​ ಯೋಜನೆ ವಿರುದ್ಧ ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ
ಬಿಹಾರದಲ್ಲಿ ಪ್ರತಿಭಟನೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 16, 2022 | 12:13 PM

Share

ಪಟನಾ: ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ (Bihar) ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಸಶಸ್ತ್ರ ಪಡೆಗಳ ಆಮೂಲಾಗ್ರ ನೇಮಕಾತಿ ಯೋಜನೆಯಾದ ಅಗ್ನಿಪಥ್ (Agnipath) ವಿರುದ್ಧದ ಪ್ರತಿಭಟನೆಗಳು ಇಂದು ಹಿಂಸಾಚಾರಕ್ಕೆ (violent) ತಿರುಗಿದವು. ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದರು. ಪ್ರತಿಭಟನಾಕಾರರು  Indian Army lovers ಎಂಬ ಬ್ಯಾನರ್ ಹಿಡಿದುಕೊಂಡು ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ. ಅರ್ರಾದಲ್ಲಿರುವ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರು ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ ಉಂಟಾದ ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಅಗ್ನಿಶಾಮಕಗಳನ್ನು ಬಳಸಿದ್ದಾರೆ. ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು, ರೈಲು ಸಂಚಾರಕ್ಕೆ ಅಡ್ಡಿಪಡಿಸಲು ಅವರು ಕ್ಯಾಂಪ್ ಮಾಡಿದ್ದ ರೈಲ್ವೆ ಹಳಿಗಳನ್ನು ತೆರವುಗೊಳಿಸುವ ವೇಳೆ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ತೋರಿಸಿದ್ದಾರೆ.

ನಾವಡಾದಲ್ಲಿ ಯುವಕರ ಗುಂಪುಗಳು ಸಾರ್ವಜನಿಕ ಕ್ರಾಸಿಂಗ್‌ನಲ್ಲಿ ಟೈರ್‌ಗಳನ್ನು ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ನಾವಡಾ ನಿಲ್ದಾಣದಲ್ಲಿ ರೈಲು ಹಳಿಗಳನ್ನು ತಡೆದು ಹಳಿಗಳ ಮೇಲೆ ಟೈರ್‌ಗಳನ್ನು ಸುಟ್ಟಿದ್ದಾರೆ. ಪ್ರತಿಭಟನಾಕಾರ ಗುಂಪು ರೈಲ್ವೇ ಆಸ್ತಿಯನ್ನು ಹಾನಿಗೊಳಿಸಿ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದೆ.

ಅಗ್ನಿಪಥ್ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಜವಾನರ ನೇಮಕಾತಿಯನ್ನು ಪ್ರಸ್ತಾಪಿಸುತ್ತದೆ ಮತ್ತು ಗ್ರಾಚ್ಯುಟಿ ಮತ್ತು ಪಿಂಚಣಿ ಪ್ರಯೋಜನಗಳಿಲ್ಲದೆ ಹೆಚ್ಚಿನವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುತ್ತದೆ. ಹೊಸ ನೇಮಕಾತಿ ಯೋಜನೆಯು ಸರ್ಕಾರದ ಬೃಹತ್ ಸಂಬಳ ಮತ್ತು ಪಿಂಚಣಿ ಬಿಲ್‌ಗಳನ್ನು ಕಡಿತಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಸಂಗ್ರಹಣೆಗಾಗಿ ಹಣವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 11:54 am, Thu, 16 June 22

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ