AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಭಗವಂತ್ ಮಾನ್ ಮನೆ ಮುಂದೆ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ

ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಗ್ರೂರ್‌ನಲ್ಲಿರುವ ಮಾನ್ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಮಜ್ದೂರ್ ಯೂನಿಯನ್ ಸದಸ್ಯರ ಮೇಲೆ ಪಂಜಾಬ್ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಪಂಜಾಬ್ ಸಿಎಂ ಭಗವಂತ್ ಮಾನ್ ಮನೆ ಮುಂದೆ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
ಭಗವಂತ್ ಮಾನ್ ನಿವಾಸದ ಮುಂದೆ ಪ್ರತಿಭಟನೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 30, 2022 | 6:12 PM

Share

ದೆಹಲಿ: ಸಂಗ್ರೂರ್‌ನಲ್ಲಿರುವ ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರ ಮನೆ ಮುಂದೆ ಕಾರ್ಮಿಕ ಮತ್ತು ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಗ್ರೂರ್‌ನಲ್ಲಿರುವ ಮಾನ್ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಮಜ್ದೂರ್ ಯೂನಿಯನ್ ಸದಸ್ಯರ ಮೇಲೆ ಪಂಜಾಬ್ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಭಗವಂತ್ ಮಾನ್ ಅವರ ಬಾಡಿಗೆ ನಿವಾಸದ ಹೊರಗೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ 2005 (ಎಂಜಿಎನ್‌ಆರ್‌ಇಜಿಎ) ಅಡಿಯಲ್ಲಿ ಕನಿಷ್ಠ ದಿನಗೂಲಿಯನ್ನು ₹ 700 ಕ್ಕೆ ಹೆಚ್ಚಿಸಬೇಕು, ದಲಿತರಿಗೆ ಐದು ಮರ್ಲಾ ಪ್ಲಾಟ್‌ಗಳನ್ನು ಜಾರಿಗೊಳಿಸಬೇಕು ಮತ್ತು ಸಮುದಾಯಕ್ಕೆ ಸಾಮಾನ್ಯ ಪಂಚಾಯ್ತಿ ಭೂಮಿಯ ಮೂರನೇ ಭಾಗವನ್ನು ಗುತ್ತಿಗೆಗೆ ಹಂಚಿಕೆ ಮಾಡಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ಎಂಟು ಕಾರ್ಮಿಕ ಸಂಘಟನೆಗಳ ಜಂಟಿ ಸಂಘಟನೆಯಾದ ಸಂಝಾ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಸಂಗ್ರೂರಿನ ಪಟಿಯಾಲ-ಭಟಿಂಡಾ ರಸ್ತೆಯ ಬಳಿ ಬೆಳಗ್ಗೆ ನೂರಾರು ಕೃಷಿ ಕಾರ್ಮಿಕರು ಜಮಾಯಿಸಿ ನಂತರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ  ನಿವಾಸದ ಕಡೆಗೆ ಮೆರವಣಿಗೆ ನಡೆಸಿದರು.ಪ್ರತಿಭಟನಾಕಾರರು ಮಾನ್ ಅವರ ನಿವಾಸ ಇರುವ ಖಾಸಗಿ ಕಾಲೋನಿಯ ಹೊರಗೆ ತಲುಪಿದಾಗ, ಪೊಲೀಸರು ಲಾಠಿ ಚಾರ್ಜ್ ಮಾಡಿದರು.

ಸಂಗ್ರೂರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮನ್‌ಪ್ರೀತ್ ಸಿಂಗ್ ಲಾಠಿ ಚಾರ್ಜ್‌ನ ನೇತೃತ್ವ ವಹಿಸಿದ್ದರು. ಪೊಲೀಸರು ಪ್ರತಿಭಟನಾಕಾರರಿಗೆ ಹೊಡೆಯುವುದು ವಿಡಿಯೊದಲ್ಲಿದೆ.

ಜಮೀನ್ ಪ್ರಾಪ್ತಿ ಸಂಘರ್ಷ ಸಮಿತಿಯ ಅಧ್ಯಕ್ಷ ಮುಖೇಶ್ ಮಾಲಾದ್ ಮಾತನಾಡಿ, ‘ಈ ಹಿಂದೆ ಮುಖ್ಯಮಂತ್ರಿಗಳು ನಮಗೆ ಸಭೆ ನಡೆಸಿದ್ದರು ಆದರೆ ನಂತರ ಅವರು ನಮ್ಮನ್ನು ಭೇಟಿ ಮಾಡಲು ನಿರಾಕರಿಸಿದರು. ಈಗ, ನಮ್ಮ ಬೇಡಿಕೆಗಳನ್ನು ಈಡೇರಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದಿದ್ದಾರೆ.

Published On - 4:54 pm, Wed, 30 November 22

Follow Us
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ