AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನಲ್ಲಿ ದುರ್ಗಾ ದೇವಿಯ ವಿಗ್ರಹಕ್ಕೆ ಭಾಗಶಃ ಹಾನಿ; ಪ್ರತಿಭಟನೆ

ಯಾವುದೇ ವಿಧ್ವಂಸಕ ಕೃತ್ಯಗಳಿಗೆ ಎಲ್ಲಾ ಹಿಂದೂಗಳು ಪ್ರತೀಕಾರ ತೀರಿಸಿಕೊಳ್ಳುವ ಸಮಯ ಬಂದಿದೆ. ಬಹುಶಃ ಅವರು ನಮ್ಮನ್ನು ಒಡೆಯಲು ಹೊರಟಿದ್ದಾರೆ ಎಂದು ಅವರು ಭಾವಿಸುತ್ತಿದ್ದಾರೆ. ಆದರೆ ಅವರು ಮತ್ತೆ ಮತ್ತೆ ಇಂತಹ ಕೆಲಸಗಳನ್ನು ಮಾಡುವ ಮೂಲಕ ನಮ್ಮನ್ನು ಒಂದುಗೂಡಿಸುತ್ತಾರೆ. ನಾನು ಅವರಿಗೆ ಎಚ್ಚರಿಕೆ ನೀಡುತ್ತೇನೆ ಎಂದು ಬಿಜೆಪಿ ನಾಯಕಿ ಮಾಧವಿ ಲತಾ ಎಚ್ಚರಿಕೆ ನೀಡಿದ್ದಾರೆ

ಹೈದರಾಬಾದ್‌ನಲ್ಲಿ ದುರ್ಗಾ ದೇವಿಯ ವಿಗ್ರಹಕ್ಕೆ ಭಾಗಶಃ ಹಾನಿ; ಪ್ರತಿಭಟನೆ
ದುರ್ಗಾ ದೇವಿ ವಿಗ್ರಹ
ರಶ್ಮಿ ಕಲ್ಲಕಟ್ಟ
|

Updated on: Oct 11, 2024 | 6:43 PM

Share

ಹೈದರಾಬಾದ್ ಅಕ್ಟೋಬರ್ 11: ಹೈದರಾಬಾದ್‌ನಲ್ಲಿ ಶುಕ್ರವಾರ ದುರ್ಗಾ ಪೂಜೆಯ ಮಂಟಪದಲ್ಲಿ ಅಪರಿಚಿತ ದುಷ್ಕರ್ಮಿಗಳು ದುರ್ಗಾ ಮಾತೆಯ ವಿಗ್ರಹವನ್ನು ಭಾಗಶಃ ಹಾನಿಗೊಳಿಸಿದ್ದಾರೆ. ಬೇಗಂ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಂಪಲ್ಲಿ ವಸ್ತುಪ್ರದರ್ಶನ ಮೈದಾನದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಸಹಾಯಕ ಪೊಲೀಸ್ ಆಯುಕ್ತ (ಏಬಿಡ್ಸ್) ಎ ಚಂದ್ರಶೇಖರ್ ಪ್ರಕಾರ, ಶುಕ್ರವಾರ ಮುಂಜಾನೆ ಅಪರಿಚಿತ ವ್ಯಕ್ತಿಗಳು ವಿಗ್ರಹದ ಒಂದು ಕೈಗೆ ಹಾನಿಯುಂಟು ಮಾಡಿದ್ದಾರೆ. ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ಅಧಿಕಾರಿ ಹೇಳಿದರು.

ಅಂದಿನಿಂದ ವಿಗ್ರಹವನ್ನು ಸರಿಮಾಡಲಾಗಿದ್ದು ಪೆಂಡಾಲ್​​ನಲ್ಲಿ ಪೂಜೆ ಮುಂದುವರಿಯುತ್ತದೆ. ವಿಧ್ವಂಸಕ ಕೃತ್ಯವು ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಅವರು ನಾಂಪಲ್ಲಿ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕಿ ಮಾಧವಿ ಲತಾ ಅವರು ಕೃತ್ಯವನ್ನು ಖಂಡಿಸಿದ್ದು, ಹಿಂದೂಗಳು ತಮ್ಮ ಪೂಜಾ ಸ್ಥಳಗಳ ಮೇಲೆ ಪದೇ ಪದೇ ದಾಳಿ ನಡೆಸಿದರೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

“ಯಾವುದೇ ವಿಧ್ವಂಸಕ ಕೃತ್ಯಗಳಿಗೆ ಎಲ್ಲಾ ಹಿಂದೂಗಳು ಪ್ರತೀಕಾರ ತೀರಿಸಿಕೊಳ್ಳುವ ಸಮಯ ಬಂದಿದೆ. ಬಹುಶಃ ಅವರು ನಮ್ಮನ್ನು ಒಡೆಯಲು ಹೊರಟಿದ್ದಾರೆ ಎಂದು ಅವರು ಭಾವಿಸುತ್ತಿದ್ದಾರೆ. ಆದರೆ ಅವರು ಮತ್ತೆ ಮತ್ತೆ ಇಂತಹ ಕೆಲಸಗಳನ್ನು ಮಾಡುವ ಮೂಲಕ ನಮ್ಮನ್ನು ಒಂದುಗೂಡಿಸುತ್ತಾರೆ. ನಾನು ಅವರಿಗೆ ಎಚ್ಚರಿಕೆ ನೀಡುತ್ತೇನೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿಯವರ ಕಾರ್ಯವೈಖರಿಯಿಂದಾಗಿ ವಿಪಕ್ಷ ನಾಯಕ ಸ್ಥಾನ ಬದಲಿಸಲು ಇಂಡಿಯಾ ಬ್ಲಾಕ್ ಚಿಂತಿಸುತ್ತಿದೆ: ಬಿಜೆಪಿ

ಈ ಸಂಬಂಧ ಬೇಗಂ ಬಜಾರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು