AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

P T Usha: ಮೊದಲ ಬಾರಿಗೆ ರಾಜ್ಯಸಭೆ ಕಲಾಪಗಳ ಅಧ್ಯಕ್ಷತೆ ವಹಿಸಿದ ಪಿಟಿ ಉಷಾ, ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ

ಪಿ.ಟಿ ಉಷಾ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಂತರ ಮೊದಲ ಬಾರಿಗೆ ಗುರುವಾರ ರಾಜ್ಯಸಭೆಯ ಕಲಾಪದ ಅಧ್ಯಕ್ಷತೆ ವಹಿಸಿದ್ದರು. ಈ ಬಗ್ಗೆ ಪಿ.ಟಿ ಉಷಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಆ ಕ್ಷಣದ ಚಿಕ್ಕ ಕ್ಲಿಪ್​ನ್ನು ಪೋಸ್ಟ್ ಮಾಡಿದ್ದಾರೆ.

P T Usha: ಮೊದಲ ಬಾರಿಗೆ ರಾಜ್ಯಸಭೆ ಕಲಾಪಗಳ ಅಧ್ಯಕ್ಷತೆ ವಹಿಸಿದ ಪಿಟಿ ಉಷಾ, ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ
PT Usha
ಅಕ್ಷಯ್​ ಪಲ್ಲಮಜಲು​​
|

Updated on:Feb 09, 2023 | 2:54 PM

Share

ಸಂಸತ್ತಿನ ರಾಜ್ಯಸಭೆಯಲ್ಲಿ (Rajya Sabha) ಮಧ್ಯಾಹ್ನದ ಚರ್ಚೆಗೆ ಸಭ್ಯಾಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಅನುಪಸ್ಥಿತಿಯ ಸಮಯದಲ್ಲಿ ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಥ್ಲೀಟ್ ಕ್ರೀಡಾಪಟು ಪಿ.ಟಿ ಉಷಾ (PT Usha) ಗುರುವಾರ ರಾಜ್ಯಸಭೆಯ ಕಲಾಪದ ಅಧ್ಯಕ್ಷತೆ ವಹಿಸಿದ್ದರು. ಈ ಬಗ್ಗೆ ಪಿ.ಟಿ ಉಷಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಆ ಕ್ಷಣದ ಚಿಕ್ಕ ಕ್ಲಿಪ್​ನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಪೋಸ್ಟ್​ನಲ್ಲಿ ನನಗೆ ಇದು ಒಂದು ಮೈಲಿಗಲ್ಲು ಮತ್ತು ಹೆಮ್ಮೆಯ ಕ್ಷಣ ಎಂದು ವಿವರಿಸಿದ್ದಾರೆ. ಜುಲೈ 2022 ರಲ್ಲಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಪಿ.ಟಿ ಉಷಾ ಮೇಲ್ಮನೆಗೆ ನಾಮನಿರ್ದೇಶನಗೊಂಡರು. ನವೆಂಬರ್‌ನಲ್ಲಿ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷರಾಗಿ ಆಯ್ಕೆಯಾದರು.

ಫ್ರಾಂಕ್ಲಿನ್ ಡಿ. ರೂಸ್‌ವೆಲ್ಟ್ ಅವರು ಹೇಳಿದಂತೆ ‘ಮಹಾ ಶಕ್ತಿಯು ದೊಡ್ಡ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಎಂದು ನಾನು ರಾಜ್ಯಸಭೆಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದಾಗ ನನಗೆ ಅನಿಸಿತು. ನನ್ನ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯೊಂದಿಗೆ ನಾನು ಈ ಪ್ರಯಾಣವನ್ನು ಕೈಗೊಂಡಾಗ ಈ ದೊಡ್ಡ ಮೈಲಿಗಲ್ಲುಗಳನ್ನು ಸೃಷ್ಟಿಸಲು ಸಾಧ್ಯವಾಗಿದೆ ಎಂದು ಪಿ.ಟಿ ಉಷಾ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಅವರು ಈ ವೀಡಿಯೊವನ್ನು ಪೋಸ್ಟ್ ಮಾಡಿದ ಟ್ವಿಟರ್​ನಲ್ಲಿ ಅನೇಕರು ಕಮೆಂಟ್ ಮಾಡಿದ್ದಾರೆ. ಜೊತೆಗೆ ರಾಜ್ಯಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡದಕ್ಕೆ ಅಭಿನಂದಿಸಿದ್ದಾರೆ.

ಇದನ್ನೂ ಓದಿ: PT Usha: ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ಭೇಟಿಯಾಗಿ ಕೃತಜ್ಞತೆ ಅರ್ಪಿಸಿದ ನೂತನ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ

ನಿಮ್ಮ ಬಗ್ಗೆ ತುಂಬಾ ಹೆಮ್ಮೆಯಿದೆ ಉಷಾ, ನಿಮ್ಮ ಮುಂದಿನ ಪ್ರಯಾಣಕ್ಕೆ ಶುಭವಾಗಲಿ. ಹೀಗೆ ಮುಂದುವರಿಯಿರಿ ಮತ್ತು ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ತುಂಬಾ ಹೆಮ್ಮೆ ಅನಿಸುತ್ತಿದೆ. ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ ಟ್ವಿಟರ್​ ಬಳಖೆದಾರರೂ ಹೇಳಿದ್ದಾರೆ.

ಇದು ನಿಜವಾದ ಮಹಿಳಾ ಸಬಲೀಕರಣ, ಆಲ್ ದಿ ಬೆಸ್ಟ್ ಮತ್ತು ಮತ್ತೆ ನೀವು ಈ ದೇಶದ ಕೀರ್ತಿಯನ್ನು ಎತ್ತರಕ್ಕೆ ತರುವ ಕಾರ್ಯವನ್ನು ಮಾಡುತ್ತೀರಾ ಎಂದು ಹೇಳಿದ್ದಾರೆ. ಡಿಸೆಂಬರ್‌ನಲ್ಲಿ, ಸಂಸತ್ತು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಲಭ್ಯವಿಲ್ಲದಿದ್ದಾಗ ಸದನದ ಕಲಾಪಗಳನ್ನು ನಡೆಸುವ ರಾಜ್ಯಸಭೆಯ ಉಪಾಧ್ಯಕ್ಷರ ಸಮಿತಿಯ ಭಾಗವಾದ ಮೊದಲ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.

Published On - 2:53 pm, Thu, 9 February 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್