AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

P T Usha: ಮೊದಲ ಬಾರಿಗೆ ರಾಜ್ಯಸಭೆ ಕಲಾಪಗಳ ಅಧ್ಯಕ್ಷತೆ ವಹಿಸಿದ ಪಿಟಿ ಉಷಾ, ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ

ಪಿ.ಟಿ ಉಷಾ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಂತರ ಮೊದಲ ಬಾರಿಗೆ ಗುರುವಾರ ರಾಜ್ಯಸಭೆಯ ಕಲಾಪದ ಅಧ್ಯಕ್ಷತೆ ವಹಿಸಿದ್ದರು. ಈ ಬಗ್ಗೆ ಪಿ.ಟಿ ಉಷಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಆ ಕ್ಷಣದ ಚಿಕ್ಕ ಕ್ಲಿಪ್​ನ್ನು ಪೋಸ್ಟ್ ಮಾಡಿದ್ದಾರೆ.

P T Usha: ಮೊದಲ ಬಾರಿಗೆ ರಾಜ್ಯಸಭೆ ಕಲಾಪಗಳ ಅಧ್ಯಕ್ಷತೆ ವಹಿಸಿದ ಪಿಟಿ ಉಷಾ, ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ
PT Usha
ಅಕ್ಷಯ್​ ಪಲ್ಲಮಜಲು​​
|

Updated on:Feb 09, 2023 | 2:54 PM

Share

ಸಂಸತ್ತಿನ ರಾಜ್ಯಸಭೆಯಲ್ಲಿ (Rajya Sabha) ಮಧ್ಯಾಹ್ನದ ಚರ್ಚೆಗೆ ಸಭ್ಯಾಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಅನುಪಸ್ಥಿತಿಯ ಸಮಯದಲ್ಲಿ ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಥ್ಲೀಟ್ ಕ್ರೀಡಾಪಟು ಪಿ.ಟಿ ಉಷಾ (PT Usha) ಗುರುವಾರ ರಾಜ್ಯಸಭೆಯ ಕಲಾಪದ ಅಧ್ಯಕ್ಷತೆ ವಹಿಸಿದ್ದರು. ಈ ಬಗ್ಗೆ ಪಿ.ಟಿ ಉಷಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಆ ಕ್ಷಣದ ಚಿಕ್ಕ ಕ್ಲಿಪ್​ನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಪೋಸ್ಟ್​ನಲ್ಲಿ ನನಗೆ ಇದು ಒಂದು ಮೈಲಿಗಲ್ಲು ಮತ್ತು ಹೆಮ್ಮೆಯ ಕ್ಷಣ ಎಂದು ವಿವರಿಸಿದ್ದಾರೆ. ಜುಲೈ 2022 ರಲ್ಲಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಪಿ.ಟಿ ಉಷಾ ಮೇಲ್ಮನೆಗೆ ನಾಮನಿರ್ದೇಶನಗೊಂಡರು. ನವೆಂಬರ್‌ನಲ್ಲಿ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷರಾಗಿ ಆಯ್ಕೆಯಾದರು.

ಫ್ರಾಂಕ್ಲಿನ್ ಡಿ. ರೂಸ್‌ವೆಲ್ಟ್ ಅವರು ಹೇಳಿದಂತೆ ‘ಮಹಾ ಶಕ್ತಿಯು ದೊಡ್ಡ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಎಂದು ನಾನು ರಾಜ್ಯಸಭೆಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದಾಗ ನನಗೆ ಅನಿಸಿತು. ನನ್ನ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯೊಂದಿಗೆ ನಾನು ಈ ಪ್ರಯಾಣವನ್ನು ಕೈಗೊಂಡಾಗ ಈ ದೊಡ್ಡ ಮೈಲಿಗಲ್ಲುಗಳನ್ನು ಸೃಷ್ಟಿಸಲು ಸಾಧ್ಯವಾಗಿದೆ ಎಂದು ಪಿ.ಟಿ ಉಷಾ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಅವರು ಈ ವೀಡಿಯೊವನ್ನು ಪೋಸ್ಟ್ ಮಾಡಿದ ಟ್ವಿಟರ್​ನಲ್ಲಿ ಅನೇಕರು ಕಮೆಂಟ್ ಮಾಡಿದ್ದಾರೆ. ಜೊತೆಗೆ ರಾಜ್ಯಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡದಕ್ಕೆ ಅಭಿನಂದಿಸಿದ್ದಾರೆ.

ಇದನ್ನೂ ಓದಿ: PT Usha: ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ಭೇಟಿಯಾಗಿ ಕೃತಜ್ಞತೆ ಅರ್ಪಿಸಿದ ನೂತನ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ

ನಿಮ್ಮ ಬಗ್ಗೆ ತುಂಬಾ ಹೆಮ್ಮೆಯಿದೆ ಉಷಾ, ನಿಮ್ಮ ಮುಂದಿನ ಪ್ರಯಾಣಕ್ಕೆ ಶುಭವಾಗಲಿ. ಹೀಗೆ ಮುಂದುವರಿಯಿರಿ ಮತ್ತು ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ತುಂಬಾ ಹೆಮ್ಮೆ ಅನಿಸುತ್ತಿದೆ. ನೀವು ಭಾರತದ ಹೆಣ್ಣುಮಕ್ಕಳಿಗೆ ಸ್ಫೂರ್ತಿ ಟ್ವಿಟರ್​ ಬಳಖೆದಾರರೂ ಹೇಳಿದ್ದಾರೆ.

ಇದು ನಿಜವಾದ ಮಹಿಳಾ ಸಬಲೀಕರಣ, ಆಲ್ ದಿ ಬೆಸ್ಟ್ ಮತ್ತು ಮತ್ತೆ ನೀವು ಈ ದೇಶದ ಕೀರ್ತಿಯನ್ನು ಎತ್ತರಕ್ಕೆ ತರುವ ಕಾರ್ಯವನ್ನು ಮಾಡುತ್ತೀರಾ ಎಂದು ಹೇಳಿದ್ದಾರೆ. ಡಿಸೆಂಬರ್‌ನಲ್ಲಿ, ಸಂಸತ್ತು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಲಭ್ಯವಿಲ್ಲದಿದ್ದಾಗ ಸದನದ ಕಲಾಪಗಳನ್ನು ನಡೆಸುವ ರಾಜ್ಯಸಭೆಯ ಉಪಾಧ್ಯಕ್ಷರ ಸಮಿತಿಯ ಭಾಗವಾದ ಮೊದಲ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.

Published On - 2:53 pm, Thu, 9 February 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!