AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿಟಿ ಉಷಾ

ಖ್ಯಾತ ಮಾಜಿ ಅಥ್ಲೀಟ್ ಪಿಟಿ ಉಷಾ ಅವರು ರಾಜ್ಯಸಭಾ ಸದಸ್ಯೆಯಾಗಿ ಇಂದು (ಬುಧವಾರ) ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 6 ರಂದು ಸರ್ಕಾರದಿಂದ ಮೇಲ್ಮನೆಗೆ ನಾಮ ನಿರ್ದೇಶನಗೊಂಡಿದ್ದರು.

ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿಟಿ ಉಷಾ
PT Usha
TV9 Web
| Edited By: |

Updated on:Jul 20, 2022 | 1:08 PM

Share

ನವದೆಹಲಿ: ಖ್ಯಾತ ಮಾಜಿ ಅಥ್ಲೀಟ್ ಪಿಟಿ ಉಷಾ ಅವರು ರಾಜ್ಯಸಭಾ ಸದಸ್ಯೆಯಾಗಿ ಇಂದು (ಬುಧವಾರ) ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 6 ರಂದು ಸರ್ಕಾರದಿಂದ ಮೇಲ್ಮನೆಗೆ ನಾಮ ನಿರ್ದೇಶನಗೊಂಡಿದ್ದರು. ಸಂಗೀತ ಸಂಯೋಜಕ ಇಳಯರಾಜ, ಲೋಕೋಪಕಾರಿ ವೀರೇಂದ್ರ ಹೆಗ್ಗಡೆ ಮತ್ತು ಚಲನಚಿತ್ರ ನಿರ್ದೇಶಕ ಕೆ ವಿ ವಿಜಯೇಂದ್ರ ಪ್ರಸಾದ್ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಉಷಾ ಅವರು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ಜನಿಸಿದ ಪ್ರಸಿದ್ಧ ಕ್ರೀಡಾಪಟು, ಭಾರತದ ಅತ್ಯಂತ ಅಪ್ರತಿಮ ಕ್ರೀಡಾಪಟುಗಳಲ್ಲಿ ಒಬ್ಬರು. ಕ್ರೀಡೆಯಲ್ಲಿ, ವಿಶೇಷವಾಗಿ ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ಗಳಲ್ಲಿ ವೃತ್ತಿಜೀವನವನ್ನು ಆರಂಭಿಸುವ ಕನಸು ಕಂಡಿರುವ ದೇಶಾದ್ಯಂತ ಲಕ್ಷಾಂತರ ಯುವತಿಯರಿಗೆ ಅವರು ಮಾದರಿ ಮತ್ತು ಸ್ಫೂರ್ತಿಯಾಗಿದ್ದಾರೆ.

ವಿಶ್ವ ಜೂನಿಯರ್ ಇನ್ವಿಟೇಶನಲ್ ಮೀಟ್, ಏಷ್ಯನ್ ಚಾಂಪಿಯನ್‌ಶಿಪ್‌ ಗಳು ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಪದಕಗಳನ್ನು ಗೆದ್ದಿರುವ ಕಾರಣ ಆಕೆಯನ್ನು ಪಯ್ಯೋಲಿ ಎಕ್ಸ್‌ಪ್ರೆಸ್ ಎಂದು  ಕರೆಯಲಾಗುತ್ತದೆ. ಅವರು ತಮ್ಮ ವೃತ್ತಿಜೀವನದಲ್ಲಿ ಅನೇಕ ರಾಷ್ಟ್ರೀಯ ಮತ್ತು ಏಷ್ಯನ್ ದಾಖಲೆಗಳನ್ನು ಮಾಡಿದ್ದಾರೆ.

ಇದನ್ನೂ ಓದಿ
Image
Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
Image
Gallstone: ಶಸ್ತ್ರಚಿಕಿತ್ಸೆಯಿಲ್ಲದೆ ಪಿತ್ತಕೋಶದ ಕಲ್ಲುಗಳನ್ನು ತೆಗೆಯಲು ಸಾಧ್ಯವೆ! ಇಲ್ಲಿದೆ ಮನೆಮದ್ದು

1984 ರ ಒಲಂಪಿಕ್ಸ್‌ನಲ್ಲಿ, ಅವರು ಮಹಿಳಾ 400M ಹರ್ಡಲ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದು 1/100 ಸೆಕೆಂಡ್‌ನಿಂದ ಕಂಚಿನ ಪದಕವನ್ನು ಕಳೆದುಕೊಂಡಿದ್ದರಿಂದ ಫೋಟೋ-ಫಿನಿಶ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಭಾರತದ ಮೊದಲ ಪದಕವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ನಿವೃತ್ತಿಯ ನಂತರ, ಅವರು ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್ ಅನ್ನು ಪ್ರಾರಂಭಿಸಿದರು, ಇದು ಪ್ರತಿಭಾವಂತ ಯುವಕರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ನೀಡಿದ್ದಾರೆ.

ಅರ್ಜುನ ಪ್ರಶಸ್ತಿ ಮತ್ತು ಪದ್ಮಶ್ರೀ ಪುರಸ್ಕೃತೆ ಉಷಾ ಅವರಿಗೆ  ಬಿಜೆಪಿಯ ನಾಯಕರು ದೆಹಲಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಭವ್ಯ ಸ್ವಾಗತ ಕೋರಲಾಯಿತು. ಲೋಕಸಭಾ ಸದಸ್ಯ ಮನೋಜ್ ತಿವಾರಿ ಮತ್ತು ಪಕ್ಷದ ದೆಹಲಿ ಘಟಕದ ಉಪಾಧ್ಯಕ್ಷ ವೀರೇಂದ್ರ ಸಚ್‌ದೇವ ನೇತೃತ್ವದ ಬಿಜೆಪಿ ನಿಯೋಗ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

Published On - 1:05 pm, Wed, 20 July 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ