AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಿಯೋ ಕ್ಲಿಪ್ ವಿವಾದ: ಕೆ ಅಣ್ಣಾಮಲೈ ಹಾಗೂ ಸಚಿವ ಪಿಟಿಆರ್ ತ್ಯಾಗರಾಜನ್ ನಡುವೆ ಮುಗಿಯದ ವಾದ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು 57 ಸೆಕೆಂಡ್ ಅವಧಿಯ ಎರಡನೇ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ.

ಆಡಿಯೋ ಕ್ಲಿಪ್ ವಿವಾದ: ಕೆ ಅಣ್ಣಾಮಲೈ ಹಾಗೂ ಸಚಿವ ಪಿಟಿಆರ್ ತ್ಯಾಗರಾಜನ್ ನಡುವೆ ಮುಗಿಯದ ವಾದ
ಕೆ ಅಣ್ಣಾಮಲೈ, ಪಿಟಿಆರ್ ತ್ಯಾಗರಾಜನ್
ನಯನಾ ರಾಜೀವ್
|

Updated on: Apr 26, 2023 | 11:32 AM

Share

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು 57 ಸೆಕೆಂಡ್ ಅವಧಿಯ ಎರಡನೇ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ. ಇದು ರಾಜ್ಯ ಹಣಕಾಸು ಸಚಿವ ಪಿಟಿಆರ್ ತ್ಯಾಗರಾಜನ್ ಅವರದು ಎಂದು ಅವರು ಹೇಳಿಕೊಂಡಿದ್ದಾರೆ. ಆಡಿಯೋ ಕ್ಲಿಪ್ ಪ್ರಕಾರ, ವ್ಯಕ್ತಿ ತಮಿಳುನಾಡಿನ ಡಿಎಂಕೆ ಆಡಳಿತದ ಬಗ್ಗೆ ದೂರುತ್ತಿರುವಂತೆ ತೋರುತ್ತಿದೆ. ಟ್ವೀಟ್‌ನಲ್ಲಿ ಬಿಜೆಪಿ ನಾಯಕ ಅಣ್ಣಾಮಲೈ, ಡಿಎಂಕೆಯು ಒಳಗಿನಿಂದ ಕುಸಿಯುತ್ತಿರುವುದನ್ನು ಆಲಿಸಿ ಎಂದು ಹೇಳಿದ್ದಾರೆ.

ಆಡಿಯೋ ಕ್ಲಿಪ್‌ನಲ್ಲಿ, ವ್ಯಕ್ತಿ ತಾನು ರಾಜಕೀಯಕ್ಕೆ ಪ್ರವೇಶಿಸಿದಾಗಿನಿಂದ ಒಬ್ಬ ವ್ಯಕ್ತಿ, ಒಂದು ಹುದ್ದೆಯ ಪ್ರತಿಪಾದಕನಾಗಿದ್ದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಕುಟುಂಬದ ಸದಸ್ಯರ ಆಸ್ತಿಗಳ ಕುರಿತು ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ಕೆಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಎಂದು ಅಣ್ಣಾಮಲೈ ಟ್ವೀಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಪಿಟಿಆರ್ ಇದೊಂದು ದುರುದ್ದೇಶಪೂರಿತ ಕೆಲಸವಾಗಿದ್ದು, ಆಡಿಯೋವನ್ನು ಯಾರೋ ಸೃಷ್ಟಿಸಿದ್ದಾರೆ ಎಂದಿದ್ದರು.

ಮತ್ತಷ್ಟು ಓದಿ: ಹೆಲಿಕಾಪ್ಟರ್​ನಲ್ಲಿ ಹಣದ ಗಂಟು ಹಿಡಿದುಕೊಂಡು ಬಂದಿದ್ದಾರೆ ಎನ್ನುವ ವಿನಯ್ ಕುಮಾರ್ ಸೊರಕೆ ಆರೋಪಕ್ಕೆ ಅಣ್ಣಾಮಲೈ ತಿರುಗೇಟು

ಇತ್ತೀಚೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಒಂದು ಆಡಿಯೋ ಕ್ಲಿಪ್​ ಅನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದು ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಹಾಗೂ ಅಳಿಯ ಶಬರೇಶನ್ ಅವರ ಆಸ್ತಿಗಳ ಬಗ್ಗೆ ಪಿಟಿಆರ್ ಕೆಲವು ರಹಸ್ಯ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ಹೇಳಿದ್ದರು. ಈ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕೆಲವು ಆರೋಪಗಳನ್ನು ತಳ್ಳಿಹಾಕಿರುವ ಡಿಎಂಕೆ ಅಣ್ಣಾಮಲೈ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದೆ, ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.

ಅಣ್ಣಾಮಲೈ ಅವರು ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ ಮತ್ತು ಅವರು ಯಾವುದೇ ಮಾನನಷ್ಟ ಕಾನೂನನ್ನು ಉಲ್ಲಂಘಿಸಿಲ್ಲ ಆಡಿಯೋ ಕ್ಲಿಪ್ ವಿಧಿವಿಜ್ಞಾನ ವಿಶ್ಲೇಷಣೆಗೆ ಒಳಪಡಿಸಿ ಎಂದಿದ್ದಾರೆ.

ಈ ಆಡಿಯೋ ಕ್ಲಿಪ್ ಯಾರೋ ಸಿದ್ಧಪಡಿಸಿದ್ದು, ನೀವು ಮಾತನಾಡಿಲ್ಲ ಎಂದಾದರೆ ಅದೇ ರೀತಿ ನನ್ನ ಆಡಿಯೋ ಕ್ಲಿಪ್​ ಅನ್ನು ಕೂಡ ಸಿದ್ಧಪಡಿಸಿ ಆಗ ಒಪ್ಪುತ್ತೇನೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ