AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ನಿತ್ಯ ಪೀಡಿಸುತ್ತಿದ್ನಂತೆ ವಾರ್ಡನ್, ಪೋಷಕರಿಂದ ಕಾಮುಕನಿಗೆ ಧರ್ಮದೇಟು

ಹೈದರಾಬಾದ್: ಇತ್ತೀಚೆಗಷ್ಟೇ ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಆದ ಪ್ರಕರಣ ಮಾಸುವ ಮುನ್ನ, ತೆಲಂಗಾಣದಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣ ವರದಿಯಾಗಿದೆ. ಈ ಬಾರಿ ಶಾಲಾ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದಿದ್ದು, ವಿಷಯ ತಿಳಿದ ವಿದ್ಯಾರ್ಥಿನಿ ಮನೆಯವರು ವಾರ್ಡನ್​ಗೆ ಹಿಗ್ಗಾಮುಗ್ಗಾ ಧರ್ಮದೇಟು ಕೊಟ್ಟಿದ್ದಾರೆ. ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ವಾರ್ಡನ್: ತೆಲಂಗಾಣದ ಆದಿಲಾಬಾದ್​ನಲ್ಲಿ ಇರುವ ಹಾಸ್ಟೆಲ್​ಗೆ ಬಂದಿದ್ದ ಪೋಷಕರು ಕಾಮುಕ ವಾರ್ಡನ್​ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ ತಮ್ಮ ಮನೆ ಹುಡುಗಿಗೆ ಟಾರ್ಚರ್ ಕೊಟ್ಟ ಆಸಾಮಿ ವಿರುದ್ಧ ಸಿಕ್ಕಾಪಟ್ಟೆ ಆಕ್ರೋಶವೂ ಇದೆ. […]

ವಿದ್ಯಾರ್ಥಿನಿಗೆ ನಿತ್ಯ ಪೀಡಿಸುತ್ತಿದ್ನಂತೆ ವಾರ್ಡನ್, ಪೋಷಕರಿಂದ ಕಾಮುಕನಿಗೆ ಧರ್ಮದೇಟು
ಸಾಧು ಶ್ರೀನಾಥ್​
| Edited By: |

Updated on:Jan 02, 2021 | 11:35 AM

Share

ಹೈದರಾಬಾದ್: ಇತ್ತೀಚೆಗಷ್ಟೇ ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಆದ ಪ್ರಕರಣ ಮಾಸುವ ಮುನ್ನ, ತೆಲಂಗಾಣದಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣ ವರದಿಯಾಗಿದೆ. ಈ ಬಾರಿ ಶಾಲಾ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದಿದ್ದು, ವಿಷಯ ತಿಳಿದ ವಿದ್ಯಾರ್ಥಿನಿ ಮನೆಯವರು ವಾರ್ಡನ್​ಗೆ ಹಿಗ್ಗಾಮುಗ್ಗಾ ಧರ್ಮದೇಟು ಕೊಟ್ಟಿದ್ದಾರೆ.

ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ವಾರ್ಡನ್: ತೆಲಂಗಾಣದ ಆದಿಲಾಬಾದ್​ನಲ್ಲಿ ಇರುವ ಹಾಸ್ಟೆಲ್​ಗೆ ಬಂದಿದ್ದ ಪೋಷಕರು ಕಾಮುಕ ವಾರ್ಡನ್​ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ ತಮ್ಮ ಮನೆ ಹುಡುಗಿಗೆ ಟಾರ್ಚರ್ ಕೊಟ್ಟ ಆಸಾಮಿ ವಿರುದ್ಧ ಸಿಕ್ಕಾಪಟ್ಟೆ ಆಕ್ರೋಶವೂ ಇದೆ. ಆದಿಲಾಬಾದ್​ನ ಗಿರಿಜನ ವಸತಿಯುತ ಪ್ರೌಢ ಶಾಲೆಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿರೋ ವಸಂತರಾವ್. ತನ್ನಪಾಡಿಗೆ ನೌಕರಿ ಮಾಡ್ಕೊಂಡು ಇದ್ದಿದ್ರೆ ಈ ಗತಿ ಬರ್ತಿರಲಿಲ್ಲ. ಆದ್ರೆ ಈ ಕಾಮುಕ 8ನೇ ತರಗತಿ ವಿದ್ಯಾರ್ಥಿನಿಗೆ ನಿತ್ಯವೂ ಕಾಟ ಕೊಡ್ತಿದ್ದನಂತೆ. ತನ್ನ ಮಾತು ಕೇಳಿದ್ರೆ ಮನೆಯವರ ಜತೆ ಮಾತನಾಡಲು ಅವಕಾಶ ಕೊಡ್ತೀನಿ ಅಂತಾ ಪುಸಲಾಯಿಸ್ತಿದ್ದನಂತೆ. ಇದನ್ನ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದು, ವಿದ್ಯಾರ್ಥಿನಿ ಮನೆಯರು ಶಾಲೆಗೆ ಎಂಟ್ರಿ ಕೊಟ್ಟು ಕಾಮುಕನಿಗೆ ಬುದ್ಧಿ ಕಲಿಸಿದ್ದಾರೆ.

ಘಟನೆ ಖಂಡಿಸಿ ಆಕ್ರೋಶ, ಅಮಾನತಿಗೆ ಒತ್ತಾಯ! ಇನ್ನು ಘಟನೆ ಖಂಡಿಸಿ, ಬಾಲಕಿ ಮನೆಯವರು ಮಾತ್ರವಲ್ಲ ವಿವಿಧ ಸಂಘಟನೆಗಳು ಕೂಡ ಪ್ರತಿಭಟನೆಯನ್ನ ನಡೆಸಿದ್ವು. ವಾರ್ಡನ್ ಅಮಾನತು ಮಾಡುವಂತೆ ಆಕ್ರೋಶ ವ್ಯಕ್ತಪಡಿಸಲಾಯಿತು. ಕಡೆಗೂ ಈ ಒತ್ತಡಕ್ಕೆ ಮಣಿದ ಶಿಕ್ಷಣ ಇಲಾಖೆ, ಕಾಮುಕನಿಗೆ ಮನೆಯ ದಾರಿ ತೋರಿಸಿದೆ. ವಾರ್ಡನ್ ವಸಂತರಾವ್​ನ ಅಮಾನತು ಮಾಡಲಾಗಿದೆ. ಒಟ್ನಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವೆಸಗಿ, ಸಲೀಸಾಗಿ ಪಾರಾಗಬಹುದು ಅಂತಾ ಅಂದುಕೊಂಡಿದ್ದ ಕಿರಾತಕನಿಗೆ ಸರಿಯಾಗಿ ಪಾಠ ಕಲಿಸಲಾಗಿದೆ. ಘಟನೆ ಕುರಿತು ‘ಪೋಕ್ಸೋ’ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿ ವಾರ್ಡನ್ ವಸಂತರಾವ್​ನನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Published On - 11:01 am, Tue, 7 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ