AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ನಿತ್ಯ ಪೀಡಿಸುತ್ತಿದ್ನಂತೆ ವಾರ್ಡನ್, ಪೋಷಕರಿಂದ ಕಾಮುಕನಿಗೆ ಧರ್ಮದೇಟು

ಹೈದರಾಬಾದ್: ಇತ್ತೀಚೆಗಷ್ಟೇ ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಆದ ಪ್ರಕರಣ ಮಾಸುವ ಮುನ್ನ, ತೆಲಂಗಾಣದಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣ ವರದಿಯಾಗಿದೆ. ಈ ಬಾರಿ ಶಾಲಾ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದಿದ್ದು, ವಿಷಯ ತಿಳಿದ ವಿದ್ಯಾರ್ಥಿನಿ ಮನೆಯವರು ವಾರ್ಡನ್​ಗೆ ಹಿಗ್ಗಾಮುಗ್ಗಾ ಧರ್ಮದೇಟು ಕೊಟ್ಟಿದ್ದಾರೆ. ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ವಾರ್ಡನ್: ತೆಲಂಗಾಣದ ಆದಿಲಾಬಾದ್​ನಲ್ಲಿ ಇರುವ ಹಾಸ್ಟೆಲ್​ಗೆ ಬಂದಿದ್ದ ಪೋಷಕರು ಕಾಮುಕ ವಾರ್ಡನ್​ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ ತಮ್ಮ ಮನೆ ಹುಡುಗಿಗೆ ಟಾರ್ಚರ್ ಕೊಟ್ಟ ಆಸಾಮಿ ವಿರುದ್ಧ ಸಿಕ್ಕಾಪಟ್ಟೆ ಆಕ್ರೋಶವೂ ಇದೆ. […]

ವಿದ್ಯಾರ್ಥಿನಿಗೆ ನಿತ್ಯ ಪೀಡಿಸುತ್ತಿದ್ನಂತೆ ವಾರ್ಡನ್, ಪೋಷಕರಿಂದ ಕಾಮುಕನಿಗೆ ಧರ್ಮದೇಟು
ಸಾಧು ಶ್ರೀನಾಥ್​
| Updated By: ಪೃಥ್ವಿಶಂಕರ|

Updated on:Jan 02, 2021 | 11:35 AM

Share

ಹೈದರಾಬಾದ್: ಇತ್ತೀಚೆಗಷ್ಟೇ ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಆದ ಪ್ರಕರಣ ಮಾಸುವ ಮುನ್ನ, ತೆಲಂಗಾಣದಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣ ವರದಿಯಾಗಿದೆ. ಈ ಬಾರಿ ಶಾಲಾ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದಿದ್ದು, ವಿಷಯ ತಿಳಿದ ವಿದ್ಯಾರ್ಥಿನಿ ಮನೆಯವರು ವಾರ್ಡನ್​ಗೆ ಹಿಗ್ಗಾಮುಗ್ಗಾ ಧರ್ಮದೇಟು ಕೊಟ್ಟಿದ್ದಾರೆ.

ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ವಾರ್ಡನ್: ತೆಲಂಗಾಣದ ಆದಿಲಾಬಾದ್​ನಲ್ಲಿ ಇರುವ ಹಾಸ್ಟೆಲ್​ಗೆ ಬಂದಿದ್ದ ಪೋಷಕರು ಕಾಮುಕ ವಾರ್ಡನ್​ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ ತಮ್ಮ ಮನೆ ಹುಡುಗಿಗೆ ಟಾರ್ಚರ್ ಕೊಟ್ಟ ಆಸಾಮಿ ವಿರುದ್ಧ ಸಿಕ್ಕಾಪಟ್ಟೆ ಆಕ್ರೋಶವೂ ಇದೆ. ಆದಿಲಾಬಾದ್​ನ ಗಿರಿಜನ ವಸತಿಯುತ ಪ್ರೌಢ ಶಾಲೆಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿರೋ ವಸಂತರಾವ್. ತನ್ನಪಾಡಿಗೆ ನೌಕರಿ ಮಾಡ್ಕೊಂಡು ಇದ್ದಿದ್ರೆ ಈ ಗತಿ ಬರ್ತಿರಲಿಲ್ಲ. ಆದ್ರೆ ಈ ಕಾಮುಕ 8ನೇ ತರಗತಿ ವಿದ್ಯಾರ್ಥಿನಿಗೆ ನಿತ್ಯವೂ ಕಾಟ ಕೊಡ್ತಿದ್ದನಂತೆ. ತನ್ನ ಮಾತು ಕೇಳಿದ್ರೆ ಮನೆಯವರ ಜತೆ ಮಾತನಾಡಲು ಅವಕಾಶ ಕೊಡ್ತೀನಿ ಅಂತಾ ಪುಸಲಾಯಿಸ್ತಿದ್ದನಂತೆ. ಇದನ್ನ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದು, ವಿದ್ಯಾರ್ಥಿನಿ ಮನೆಯರು ಶಾಲೆಗೆ ಎಂಟ್ರಿ ಕೊಟ್ಟು ಕಾಮುಕನಿಗೆ ಬುದ್ಧಿ ಕಲಿಸಿದ್ದಾರೆ.

ಘಟನೆ ಖಂಡಿಸಿ ಆಕ್ರೋಶ, ಅಮಾನತಿಗೆ ಒತ್ತಾಯ! ಇನ್ನು ಘಟನೆ ಖಂಡಿಸಿ, ಬಾಲಕಿ ಮನೆಯವರು ಮಾತ್ರವಲ್ಲ ವಿವಿಧ ಸಂಘಟನೆಗಳು ಕೂಡ ಪ್ರತಿಭಟನೆಯನ್ನ ನಡೆಸಿದ್ವು. ವಾರ್ಡನ್ ಅಮಾನತು ಮಾಡುವಂತೆ ಆಕ್ರೋಶ ವ್ಯಕ್ತಪಡಿಸಲಾಯಿತು. ಕಡೆಗೂ ಈ ಒತ್ತಡಕ್ಕೆ ಮಣಿದ ಶಿಕ್ಷಣ ಇಲಾಖೆ, ಕಾಮುಕನಿಗೆ ಮನೆಯ ದಾರಿ ತೋರಿಸಿದೆ. ವಾರ್ಡನ್ ವಸಂತರಾವ್​ನ ಅಮಾನತು ಮಾಡಲಾಗಿದೆ. ಒಟ್ನಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವೆಸಗಿ, ಸಲೀಸಾಗಿ ಪಾರಾಗಬಹುದು ಅಂತಾ ಅಂದುಕೊಂಡಿದ್ದ ಕಿರಾತಕನಿಗೆ ಸರಿಯಾಗಿ ಪಾಠ ಕಲಿಸಲಾಗಿದೆ. ಘಟನೆ ಕುರಿತು ‘ಪೋಕ್ಸೋ’ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿ ವಾರ್ಡನ್ ವಸಂತರಾವ್​ನನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Published On - 11:01 am, Tue, 7 January 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ