AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ. ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ […]

‘ಧೂಮಪಾನ ಹಾನಿಕಾರಕ ಆದ್ರೆ ಸರ್ಕಾರದ ಬೊಕ್ಕಸಕ್ಕೆ.. ಲಾಭದಾಯಕ!’
KUSHAL V
| Updated By: ಸಾಧು ಶ್ರೀನಾಥ್​|

Updated on: Aug 25, 2020 | 12:02 PM

Share

ದೆಹಲಿ: ಧೂಮಪಾನ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ಕ್ಯಾನ್ಸರ್​ನಂಥ ಮಾರಕ ಕಾಯಿಲೆ ಉಂಟಾಗಿ ಸಾವು ಸಹ ಸಂಭವಿಸಬಹುದು. ಹೀಗಂತ ಪ್ರತಿ ಬೀಡಿ, ಸಿಗರೇಟ್​ ಮತ್ತು ತಂಬಾಕು ಪ್ಯಾಕೆಟ್​ ಮೇಲೆ ಬರೆದಿರುತ್ತದೆ.

ಆದರೆ, ನಮ್ಮ ತಂಬಾಕು ಪ್ರಿಯರು ಈ ಮಾತು ಕೇಳಬೇಕಲ್ವೇ? ಹಾಗಾಗಿ, ಪ್ರತಿ ಪ್ಯಾಕೆಟ್​ ಮೇಲೆ ನಮೂದಿಸಲಾದ ಈ ಸಂದೇಶ ಏನೂ ಪ್ರಯೋಜನಕ್ಕೆ ಬರುತ್ತಿಲ್ಲ ಅನ್ನೋದು ಹಲವರ ಅಭಿಪ್ರಾಯ. ಹೀಗಾಗಿ, ಸಾರ್ವಜನಿಕ ಆರೋಗ್ಯ ತಜ್ಞರು, ವೈದ್ಯರು ಮತ್ತು ಆರ್ಥಿಕ ತಜ್ಞರು ಸೇರಿ ಕೇಂದ್ರ ಸರ್ಕಾರಕ್ಕೆ ಒಂದು ವಿನೂತನ ಐಡಿಯಾ ನೀಡಲು ಮುಂದಾಗಿದ್ದಾರೆ.

ಸಿಗರೇಟ್​, ಬೀಡಿ ಮತ್ತು ತಂಬಾಕು ಮೇಲೆ ತೆರಿಗೆ ವಿಧಿಸುವ GST ಸಭೆಗೆ ಮನವಿ ಸಲ್ಲಿಸಿರುವ ಈ ತಜ್ಞರು ಈಗಾಗಲೇ ಈ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಪರಿಹಾರ ಸೆಸ್​ನ (compensation cess) ಮೊತ್ತವನ್ನು ಬೀಡಿಯ ಮೇಲೆ ಒಂದು ರೂಪಾಯಿಯಷ್ಟು ಹಾಗೂ ಸಿಗರೇಟ್​ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಇನ್ನೂ ಹೆಚ್ಚು ಪ್ರಮಾಣದಲ್ಲಿ ಏರಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ

ಇದರಿಂದ, ಜನರು ಈ ಉತ್ಪನ್ನಗಳ ಖರೀದಿಗೆ ಹಿಂದೇಟು ಹಾಕುತ್ತಾರೆ ಹಾಗೂ ಯುವಕರು ತಂಬಾಕು ಉತ್ಪನ್ನಗಳ ಕಡೆ ಒಲವು ತೋರುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ಫಲ ಕೊಡುತ್ತದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಬಟ್​, ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಕನಿಷ್ಠ ಪಕ್ಷ 50 ಸಾವಿರ ಕೋಟಿ ವರಮಾನವಂತೂ ತಂದು ಕೊಡುತ್ತದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ