AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ನಷ್ಟಕ್ಕೊಳಗಾಗಿದ್ದ ಸಾರ್ವಜನಿಕ ವಲಯ ಲಾಭದ ಉತ್ತುಂಗದಲ್ಲಿದೆ; ಸಚಿವ ಕಿಶನ್ ರೆಡ್ಡಿ

ಕಳೆದ ದಶಕದಲ್ಲಿ ಪಿಎಸ್‌ಯುಗಳ ಒಟ್ಟು ನಿವ್ವಳ ಮೌಲ್ಯ 9.5 ಲಕ್ಷ ಕೋಟಿ ರೂ.ನಿಂದ 17 ಲಕ್ಷ ಕೋಟಿ ರೂ.ಗೂ ಹೆಚ್ಚಾಗಿದೆ. 2014ರಲ್ಲಿ ಪ್ರಾರಂಭವಾದ ಈ ನಿರಂತರ ಬೆಳವಣಿಗೆಯ ಪಥವು ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಯಶಸ್ಸಿನ ಅರ್ಥ ಸ್ವಾವಲಂಬಿ, ಸಮರ್ಥ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಭಾರತ. ಇದು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಬಂದಿರುವ ನೀತಿ ಆಧಾರಿತ ಆಡಳಿತ, ನೀತಿ ಸುಧಾರಣೆಗಳು, ಹೊಣೆಗಾರಿಕೆ ಮತ್ತು ನಾವೀನ್ಯತೆಯ ಪ್ರಜ್ಞೆಯ ನೇರ ಪರಿಣಾಮವಾಗಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ.

ತೀವ್ರ ನಷ್ಟಕ್ಕೊಳಗಾಗಿದ್ದ ಸಾರ್ವಜನಿಕ ವಲಯ ಲಾಭದ ಉತ್ತುಂಗದಲ್ಲಿದೆ; ಸಚಿವ ಕಿಶನ್ ರೆಡ್ಡಿ
Kishan Reddy
ಸುಷ್ಮಾ ಚಕ್ರೆ
|

Updated on: May 28, 2025 | 7:47 PM

Share

ನವದೆಹಲಿ, ಮೇ 28: ಒಂದು ಕಾಲದಲ್ಲಿ ನಷ್ಟ ಉಂಟುಮಾಡುವ ಮತ್ತು ಬಿಳಿ ಆನೆ ಎಂದು ಅಪಹಾಸ್ಯಕ್ಕೊಳಗಾಗಿದ್ದ ಸಾರ್ವಜನಿಕ ವಲಯವು ಈಗ ತನ್ನ ಉತ್ತುಂಗದಲ್ಲಿದೆ. ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿದೆ. ಇದು ಸಾರ್ವಜನಿಕ ವಲಯದ ಪುನರುಜ್ಜೀವನಕ್ಕೆ ಕಾರಣವಾಗಿದೆ. ಇಂದು ಸಾರ್ವಜನಿಕ ವಲಯವು ಭಾರತದ ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಯ ಶಕ್ತಿಶಾಲಿ ಎಂಜಿನ್ ಆಗಿ ಮಾರ್ಪಟ್ಟಿದೆ ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರು ಸಾರ್ವಜನಿಕ ವಲಯದ ಏರಿಕೆಯನ್ನು ಎತ್ತಿ ತೋರಿಸುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ನೀಡಿದ ಉತ್ತರದಲ್ಲಿ ಪ್ರಧಾನಿ ಮೋದಿ ಕಳೆದ 10 ವರ್ಷಗಳಲ್ಲಿ ಸಾರ್ವಜನಿಕ ವಲಯದ ಸಂಸ್ಥೆಗಳ ಮೇಲಿನ ಜನರ ನಂಬಿಕೆ ಹೆಚ್ಚಾಗಿದೆ ಮತ್ತು ಅವುಗಳ ದಕ್ಷತೆಯೂ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಹೇಳಿದ್ದರು . ಇದು ಕೇವಲ ಮಾತಲ್ಲ, ಅಂಕಿ-ಅಂಶಗಳು ಅದನ್ನು ಸಾಬೀತುಪಡಿಸುತ್ತವೆ. 2014ರಲ್ಲಿ ಪ್ರಾರಂಭವಾದ ಈ ಅಭಿವೃದ್ಧಿಯ ಪ್ರಯಾಣದಲ್ಲಿ ಸಾರ್ವಜನಿಕ ವಲಯದ ಉದ್ದಿಮೆಗಳ ಒಟ್ಟು ನಿವ್ವಳ ಮೌಲ್ಯವು 9.5 ಲಕ್ಷ ಕೋಟಿ ರೂ.ಗಳಿಂದ ಈಗ 17 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಾಗಿದೆ. ಈ ಅಂಶಗಳು ಭಾರತದ ರಾಷ್ಟ್ರ ನಿರ್ಮಾಣಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿವೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಪೊಟ್ಯಾಶ್ ಗಣಿಗಾರಿಕೆಯತ್ತ ಭಾರತದ ಮೊದಲ ಹೆಜ್ಜೆ; ಕೇಂದ್ರ ಸಚಿವ ಕಿಶನ್ ರೆಡ್ಡಿ ಶ್ಲಾಘನೆ

ಇದನ್ನೂ ಓದಿ
Image
ಮೇ 29-30ರಂದು ಈ ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ
Image
ಅಮೆರಿಕದ ಅಧೀನ ಕಾರ್ಯದರ್ಶಿ ಜೆಫ್ರಿಯನ್ನು ಭೇಟಿಯಾದ ವಿಕ್ರಮ್ ಮಿಸ್ರಿ
Image
ವೀಸಾ ರದ್ದು; ಭಾರತೀಯ, ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ಎಚ್ಚರಿಕೆ
Image
ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು; ದ್ವೀಪ ರಾಷ್ಟ್ರಕ್ಕೆ ಭಾರತದ ಸಹಾಯಹಸ್ತ

ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO) ತನ್ನ ಆರಂಭದಿಂದಲೂ ಅತ್ಯುನ್ನತ ಆರ್ಥಿಕ ಕಾರ್ಯಕ್ಷಮತೆಯನ್ನು ಸಾಧಿಸಿದೆ, ಇದು ಭಾರತದ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಹೊಸ ಶಕ್ತಿ ಮತ್ತು ಉದ್ದೇಶವನ್ನು ಸಂಕೇತಿಸುವ ಸಾಧನೆಯಾಗಿದೆ. ಅದೇ ರೀತಿ, ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL) ಕೂಡ 2024-25ರ ಹಣಕಾಸು ವರ್ಷದಲ್ಲಿ ಪ್ರಾರಂಭವಾದಾಗಿನಿಂದ ಅತ್ಯಧಿಕ ನಿವ್ವಳ ಲಾಭವನ್ನು ದಾಖಲಿಸಿದೆ. ಈ ಕಾರ್ಯಕ್ಷಮತೆಯು ಭಾರತದ ಖನಿಜಗಳು ಮತ್ತು ಲೋಹ ವಲಯದಲ್ಲಿ ಪಿಎಸ್‌ಯುಗಳ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಕಿಶನ್ ರೆಡ್ಡಿ ಬಣ್ಣಿಸಿದ್ದಾರೆ.

ಇದನ್ನೂ ಓದಿ: ಉಗ್ರರ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿಯಾಗಿದ್ದಕ್ಕಿಂತ ಹೆಚ್ಚು ಸಾಕ್ಷಿ ಬೇಕಾ?; ಇಸ್ಲಮಾಬಾದ್ ಬಣ್ಣ ಬಿಚ್ಚಿಟ್ಟ ಅಭಿಷೇಕ್ ಬ್ಯಾನರ್ಜಿ

ಆತ್ಮನಿರ್ಭರ ಭಾರತದಡಿ ಭಾರತದ ಸಾರ್ವಜನಿಕ ಉದ್ದಿಮೆಗಳನ್ನು ಪುನರುಜ್ಜೀವನಗೊಳಿಸಲಾಗುತ್ತಿದೆ, ತಂತ್ರಜ್ಞಾನ, ದಕ್ಷತೆ ಮತ್ತು ಉದ್ದೇಶದಿಂದ ತುಂಬಿಸಲಾಗುತ್ತಿದೆ. ಅಸಾಧಾರಣ ಕಾರ್ಯಕ್ಷಮತೆ ಮತ್ತು ಶ್ರೇಷ್ಠತೆಗಾಗಿ NALCO, HCL ತಂಡಗಳಿಗೆ ಅಭಿನಂದನೆಗಳು ಎಂದು ಕಿಶನ್ ರೆಡ್ಡಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ