AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puducherry: ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ನೀಡುವ ನಿರ್ಣಯ ಅಂಗೀಕರಿಸಿದ ವಿಧಾನಸಭೆ

ಪುದುಚೇರಿ ವಿಧಾನಸಭೆಯು ನಿನ್ನೆ (ಮಾ.31) ರಂದು ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

Puducherry: ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ನೀಡುವ ನಿರ್ಣಯ ಅಂಗೀಕರಿಸಿದ ವಿಧಾನಸಭೆ
ಪುದುಚೇರಿ ವಿಧಾಸನಸಭೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 01, 2023 | 8:02 AM

Share

ಪುದುಚೇರಿ: ಪುದುಚೇರಿ ವಿಧಾನಸಭೆಯು (Puducherry Assembly Constituency) ನಿನ್ನೆ (ಮಾ.31) ರಂದು ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಕೇಂದ್ರಾಡಳಿತ ಪ್ರದೇಶಕ್ಕೆ (Union Territories) ರಾಜ್ಯ ರಚನೆಯ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಿರುವುದು ಇದು 14 ನೇ ಬಾರಿಯಾಗಿದೆ. ಮಾರ್ಚ್ 9 ರಂದು ಆರಂಭವಾದ ಪುದುಚೇರಿ ಬಜೆಟ್ ಅಧಿವೇಶನದ ಕೊನೆಯ ದಿನವಾದ ನಿನ್ನೆ (ಶುಕ್ರವಾರ) ವಿರೋಧ ಪಕ್ಷದ ನಾಯಕ ಶಿವ ಮತ್ತು ಪಕ್ಷೇತರ ಶಾಸಕ ನೆಹರು ಸೇರಿದಂತೆ ಡಿಎಂಕೆ ಶಾಸಕರು ನಿರ್ಣಯವನ್ನು ಮಂಡಿಸಿದರು.

ಆಡಳಿತಾರೂಢ ಎನ್‌ಆರ್ ಕಾಂಗ್ರೆಸ್ ಮತ್ತು ಬಿಜೆಪಿ (NDA) ಸಮಿಶ್ರ ಸರ್ಕಾರ, ಕಾಂಗ್ರೆಸ್, ಎಐಎಡಿಎಂಕೆ ಮತ್ತು ಪಕ್ಷೇತರ ಶಾಸಕರು ನಿರ್ಣಯಕ್ಕೆ ಒಮ್ಮತ ಸೂಚಿಸಿದರು. ಪುದುಚೇರಿ ರಾಜ್ಯದ ಎಲ್ಲ ಕಡತಗಳನ್ನು ಅಂತಿಮಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವಾಲಯಕ್ಕೆ ಮೌಖಿಕ ಆದೇಶ ನೀಡಿದ್ದು, ಎಲ್ಲ ಕಡತಗಳಿಗೆ ಶೀಘ್ರ ಅನುಮೋದನೆ ನೀಡಲಾಗುತ್ತಿದೆ ಎಂದು ಪುದುಚೇರಿ ಗೃಹ ಸಚಿವ ನಮಶಿವಾಯಂ ಹೇಳಿದ್ದಾರೆ.

ಪುದುಚೇರಿ ಕೇಂದ್ರಡಾಳಿತ ಪ್ರದೇಶವಾಗಿದ್ದರಿಂದ ಜನಪರವಾದ ಯೋಜನೆಗಳನ್ನು ಜಾರಿಗೆ ತರಲು ಕಷ್ಟವಾಗುತ್ತಿತ್ತು. ಆದೆರೆ ಈಗ ರಾಜ್ಯದ ಸ್ಥಾನಮಾನ ನೀಡುವುದರಿಂದ ಯೋಜನೆಗಳ ಅನುಷ್ಠಾಣಕ್ಕೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ರಂಗಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ