AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ, ಕಾರಣವೇನು, ಇಲ್ಲಿದೆ ಮಾಹಿತಿ

ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಅದರಲ್ಲಿ ವಿಷಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಬ್ಯಾನ್ ಮಾಡಲಾಗಿದ್ದು, ಸೂಕ್ತ ಪ್ರಮಾಣಪತ್ರ ಪಡೆದು ಮಾರಾಟ ಮಾಡಬಹುದಾಗಿದೆ.

ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ, ಕಾರಣವೇನು, ಇಲ್ಲಿದೆ ಮಾಹಿತಿ
ಕಾಟನ್ ಕ್ಯಾಂಡಿ-ಬಾಂಬೆ ಮಿಠಾಯಿ
ನಯನಾ ರಾಜೀವ್
| Updated By: ಅಕ್ಷಯ್​ ಪಲ್ಲಮಜಲು​​|

Updated on:Feb 12, 2024 | 6:34 PM

Share

ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ನೆಚ್ಚಿನ ತಿನಿಸಾಗಿದ್ದ ಬಾಂಬೆ ಮಿಠಾಯಿ(ಕಾಟನ್ ಕ್ಯಾಂಡಿ)ಯನ್ನು ಪುದುಚೇರಿಯಲ್ಲಿ ನಿಷೇಧಿಸಲಾಗಿದೆ. ಅದರಲ್ಲಿ ಆರೋಗ್ಯಕ್ಕೆ ಹಾನಿಕರ­ವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ­ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳ್‌ಸಾಯಿ ಸುಂದರರಾಜನ್‌ ಹೇಳಿದ್ದಾರೆ.

ಆದರೆ, ಆಹಾರ ಸುರಕ್ಷತಾ ಇಲಾಖೆಯಿಂದ ಗುಣಮಟ್ಟದ ಪ್ರಮಾಣ ಪತ್ರ ಪಡೆದ ಮಾರಾಟಗಾರರು ಕಾಟನ್ ಕ್ಯಾಂಡಿ ಮಾರಾಟ ಮುಂದುವರಿಸಬಹುದು. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯಲ್ಲಿ ‘ರೋಡಮೈನ್-ಬಿ’ ಎಂಬ ಹಾನಿಕಾರಕ ರಾಸಾಯನಿಕ ಅಂಶವನ್ನು ಪರೀಕ್ಷಿಸಿದಾಗ ಕಂಡುಬಂದಿದೆ. ಇದರ ಬೆನ್ನಲ್ಲೇ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಆಹಾರ ಸುರಕ್ಷತಾ ಪ್ರಮಾಣ ಪತ್ರ ಎಷ್ಟು ಬೇಗ ಸಿಗುತ್ತದೋ ಅಷ್ಟು ಬೇಗ ವ್ಯಾಪಾರ ಆರಂಭಿಸಬಹುದು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬಣ್ಣದ ಸೇರ್ಪಡೆಗಳನ್ನು ಹೊಂದಿರುವ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಾರದು ಎಂದು ಜನರು ತಿಳಿದಿರಬೇಕು ಎಂದರು. ರೋಡಮೈನ್ ಬಿ, ಸಾಮಾನ್ಯವಾಗಿ RhB ಎಂದು ಸಂಕ್ಷೇಪಿಸಲಾಗಿದೆ, ಇದು ರಾಸಾಯನಿಕ ಸಂಯುಕ್ತವಾಗಿದ್ದು ಅದು ಬಣ್ಣವಾಗಿ ಕಾರ್ಯನಿರ್ವಹಿಸುತ್ತದೆ.

ಮತ್ತಷ್ಟು ಓದಿ: Video: ಈ ವ್ಯಾಪಾರಿಯ ಬಳಿ ಬಾಂಬೆ ಮಿಠಾಯಿ ಖರೀದಿ ಮಾಡೋದಿದ್ರೆ ಹಣ ಬೇಡ, ಬದಲಿಗೆ ಇದೊಂದು ವಸ್ತು ಕೊಡಿ ಸಾಕು !

ರೋಡಮೈನ್ ಬಿ ಮಾನವರಿಗೆ ವಿಷಕಾರಿಯಾಗಿದೆ ಮತ್ತು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಆಹಾರದೊಂದಿಗೆ ಬೆರೆಸಿದಾಗ ಇದು ವಿಶೇಷವಾಗಿ ಅಪಾಯಕಾರಿಯಾಗಿದೆ, ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಕ್ಯಾನ್ಸರ್ಗೆ ಕಾರಣವಾಗುತ್ತದೆ.

ಸುಮಾರು ಒಂದೆರಡು ದಶಕಗಳ ಹಿಂದೆ ಎಲ್ಲಾ ಊರುಗಳಲ್ಲಿ ಕಾಟನ್ ಕ್ಯಾಂಡಿ ತುಂಬಾ ಪ್ರಸಿದ್ಧಿ ಪಡೆದಿತ್ತು, ಜತೆಗೆ ಅದರ ಬೆಲೆಯೂ ಕಡಿಮೆ ಇತ್ತು ಜತೆಗೆ ರುಚಿಯೂ ಇದ್ದ ಕಾರಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ತಿನ್ನುತ್ತಿದ್ದರು. ಸೈಕಲ್ ಏರಿ ಊರೂರು ಸುತ್ತಿ ಕಾಟನ್ ಕ್ಯಾಂಡಿ ಮಾರಾಟ ಮಾಡಿ ನೂರಾರು ಕುಟುಂಬಗಳು ಜೀವನ ಸಾಗಿಸುತ್ತಿದ್ದವು.

ಆದರೆ ಇತ್ತೀಚಿನ ದಿನಗಳಲ್ಲಿ ಅನೇಕ ದೇಶೀಯ ಹಾಗೂ ವಿದೇಶಿ ಕಂಪನಿಗಳು ಅನೇಕ ಬಗೆಯ ಸಿಹಿ ತಿನಿಸುಗಳನ್ನು ಮಾರಾಟ ಮಾಡುತ್ತಿವೆ. ಇದರ ನಡುವೆ ಕಾಟನ್ ಕ್ಯಾಂಡಿ ತಿನ್ನುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಮಿಠಾಯಿ ಬಾಯಲ್ಲಿ ಇಟ್ಟಾಕ್ಷಣ ಕರಗಿ ನಾಲಿಗೆಗೆ ಮೆತ್ತಿಕೊಂಡು ರುಚಿ ಕೊಡುತ್ತಿತ್ತು.

ಹಲ್ಲಿನ ಬಣ್ಣವು ಗುಲಾಬಿ ಬಣ್ಣಕ್ಕೆ ತಿರುಗಿದ್ರೂ ಬಾಂಬೆ ಮಿಠಾಯಿ ತಿನ್ನುವುದು ಮಾತ್ರ ಮಕ್ಕಳು ಬಿಡುತ್ತಿರಲಿಲ್ಲ. ಇದೀಗ ಈ ಮಿಠಾಯಿಯನ್ನು ಮಕ್ಕಳಿಗೆ ಕೊಡಬೇಕೋ ಬೇಡವೋ ಎನ್ನುವ ಆತಂಕ ಶುರುವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:32 am, Mon, 12 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ