ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ, ಕಾರಣವೇನು, ಇಲ್ಲಿದೆ ಮಾಹಿತಿ

ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಅದರಲ್ಲಿ ವಿಷಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಬ್ಯಾನ್ ಮಾಡಲಾಗಿದ್ದು, ಸೂಕ್ತ ಪ್ರಮಾಣಪತ್ರ ಪಡೆದು ಮಾರಾಟ ಮಾಡಬಹುದಾಗಿದೆ.

ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ, ಕಾರಣವೇನು, ಇಲ್ಲಿದೆ ಮಾಹಿತಿ
ಕಾಟನ್ ಕ್ಯಾಂಡಿ-ಬಾಂಬೆ ಮಿಠಾಯಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 12, 2024 | 6:34 PM

ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ನೆಚ್ಚಿನ ತಿನಿಸಾಗಿದ್ದ ಬಾಂಬೆ ಮಿಠಾಯಿ(ಕಾಟನ್ ಕ್ಯಾಂಡಿ)ಯನ್ನು ಪುದುಚೇರಿಯಲ್ಲಿ ನಿಷೇಧಿಸಲಾಗಿದೆ. ಅದರಲ್ಲಿ ಆರೋಗ್ಯಕ್ಕೆ ಹಾನಿಕರ­ವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ­ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳ್‌ಸಾಯಿ ಸುಂದರರಾಜನ್‌ ಹೇಳಿದ್ದಾರೆ.

ಆದರೆ, ಆಹಾರ ಸುರಕ್ಷತಾ ಇಲಾಖೆಯಿಂದ ಗುಣಮಟ್ಟದ ಪ್ರಮಾಣ ಪತ್ರ ಪಡೆದ ಮಾರಾಟಗಾರರು ಕಾಟನ್ ಕ್ಯಾಂಡಿ ಮಾರಾಟ ಮುಂದುವರಿಸಬಹುದು. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯಲ್ಲಿ ‘ರೋಡಮೈನ್-ಬಿ’ ಎಂಬ ಹಾನಿಕಾರಕ ರಾಸಾಯನಿಕ ಅಂಶವನ್ನು ಪರೀಕ್ಷಿಸಿದಾಗ ಕಂಡುಬಂದಿದೆ. ಇದರ ಬೆನ್ನಲ್ಲೇ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಆಹಾರ ಸುರಕ್ಷತಾ ಪ್ರಮಾಣ ಪತ್ರ ಎಷ್ಟು ಬೇಗ ಸಿಗುತ್ತದೋ ಅಷ್ಟು ಬೇಗ ವ್ಯಾಪಾರ ಆರಂಭಿಸಬಹುದು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬಣ್ಣದ ಸೇರ್ಪಡೆಗಳನ್ನು ಹೊಂದಿರುವ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಾರದು ಎಂದು ಜನರು ತಿಳಿದಿರಬೇಕು ಎಂದರು. ರೋಡಮೈನ್ ಬಿ, ಸಾಮಾನ್ಯವಾಗಿ RhB ಎಂದು ಸಂಕ್ಷೇಪಿಸಲಾಗಿದೆ, ಇದು ರಾಸಾಯನಿಕ ಸಂಯುಕ್ತವಾಗಿದ್ದು ಅದು ಬಣ್ಣವಾಗಿ ಕಾರ್ಯನಿರ್ವಹಿಸುತ್ತದೆ.

ಮತ್ತಷ್ಟು ಓದಿ: Video: ಈ ವ್ಯಾಪಾರಿಯ ಬಳಿ ಬಾಂಬೆ ಮಿಠಾಯಿ ಖರೀದಿ ಮಾಡೋದಿದ್ರೆ ಹಣ ಬೇಡ, ಬದಲಿಗೆ ಇದೊಂದು ವಸ್ತು ಕೊಡಿ ಸಾಕು !

ರೋಡಮೈನ್ ಬಿ ಮಾನವರಿಗೆ ವಿಷಕಾರಿಯಾಗಿದೆ ಮತ್ತು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಆಹಾರದೊಂದಿಗೆ ಬೆರೆಸಿದಾಗ ಇದು ವಿಶೇಷವಾಗಿ ಅಪಾಯಕಾರಿಯಾಗಿದೆ, ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಕ್ಯಾನ್ಸರ್ಗೆ ಕಾರಣವಾಗುತ್ತದೆ.

ಸುಮಾರು ಒಂದೆರಡು ದಶಕಗಳ ಹಿಂದೆ ಎಲ್ಲಾ ಊರುಗಳಲ್ಲಿ ಕಾಟನ್ ಕ್ಯಾಂಡಿ ತುಂಬಾ ಪ್ರಸಿದ್ಧಿ ಪಡೆದಿತ್ತು, ಜತೆಗೆ ಅದರ ಬೆಲೆಯೂ ಕಡಿಮೆ ಇತ್ತು ಜತೆಗೆ ರುಚಿಯೂ ಇದ್ದ ಕಾರಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ತಿನ್ನುತ್ತಿದ್ದರು. ಸೈಕಲ್ ಏರಿ ಊರೂರು ಸುತ್ತಿ ಕಾಟನ್ ಕ್ಯಾಂಡಿ ಮಾರಾಟ ಮಾಡಿ ನೂರಾರು ಕುಟುಂಬಗಳು ಜೀವನ ಸಾಗಿಸುತ್ತಿದ್ದವು.

ಆದರೆ ಇತ್ತೀಚಿನ ದಿನಗಳಲ್ಲಿ ಅನೇಕ ದೇಶೀಯ ಹಾಗೂ ವಿದೇಶಿ ಕಂಪನಿಗಳು ಅನೇಕ ಬಗೆಯ ಸಿಹಿ ತಿನಿಸುಗಳನ್ನು ಮಾರಾಟ ಮಾಡುತ್ತಿವೆ. ಇದರ ನಡುವೆ ಕಾಟನ್ ಕ್ಯಾಂಡಿ ತಿನ್ನುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಮಿಠಾಯಿ ಬಾಯಲ್ಲಿ ಇಟ್ಟಾಕ್ಷಣ ಕರಗಿ ನಾಲಿಗೆಗೆ ಮೆತ್ತಿಕೊಂಡು ರುಚಿ ಕೊಡುತ್ತಿತ್ತು.

ಹಲ್ಲಿನ ಬಣ್ಣವು ಗುಲಾಬಿ ಬಣ್ಣಕ್ಕೆ ತಿರುಗಿದ್ರೂ ಬಾಂಬೆ ಮಿಠಾಯಿ ತಿನ್ನುವುದು ಮಾತ್ರ ಮಕ್ಕಳು ಬಿಡುತ್ತಿರಲಿಲ್ಲ. ಇದೀಗ ಈ ಮಿಠಾಯಿಯನ್ನು ಮಕ್ಕಳಿಗೆ ಕೊಡಬೇಕೋ ಬೇಡವೋ ಎನ್ನುವ ಆತಂಕ ಶುರುವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:32 am, Mon, 12 February 24

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ