AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ​ ಸ್ವಾಮಿ ಆಗ್ರಹಿಸಿದ್ದಾರೆ.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ
ಧರಣಿ ನಿರತ ಮುಖ್ಯಮಂತ್ರಿ (ಎಡ)-ಕಿರಣ್​ ಬೇಡಿ (ಬಲ)
Lakshmi Hegde
| Edited By: |

Updated on: Jan 10, 2021 | 2:04 PM

Share

ಪುದುಚೇರಿ: ಇಲ್ಲಿನ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ನಡುವಿನ ಮನಸ್ತಾಪ, ಜಟಾಪಟಿ ಹೊಸದಲ್ಲ. ಅಲ್ಲಿ ಕಿರಣ್​ ಬೇಡಿ ಸರ್ಕಾರದ ಆಡಳಿತಕ್ಕೆ ಅಡ್ಡಿಯುಂಟು ಮಾಡುತ್ತಾರೆ ಎಂಬ ಆರೋಪವನ್ನು ಸಿಎಂ ಮತ್ತು ಅವರ ಕ್ಯಾಬಿನೆಟ್​ ಮಂತ್ರಿಗಳು ಮಾಡುತ್ತಲೇ ಬಂದಿದ್ದಾರೆ.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ. ಯಾವುದೇ ಹೊಸ ಯೋಜನೆ ಅನುಷ್ಠಾನಕ್ಕೂ ಬಿಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸರ್ಕಾರದ ಸಚಿವರು, ಶಾಸಕರು ಜ.8ರಿಂದ ರಾಜ್ ​ನಿವಾಸ್​ ಎದುರು ನಾಲ್ಕು ದಿನಗಳ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ಪುದುಚೇರಿಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​ ನೇತೃತ್ವದ ಸೆಕ್ಯೂಲರ್​ ಡೆಮಾಕ್ರಟಿಕ್​ ಅಲಯನ್ಸ್​ದೊಂದಿಗೆ, ಸಿಪಿಐ, ಸಿಪಿಐ (ಎಂ), ವಿಸಿಕೆ (Viduthalai Chiruthaigal Katchi) ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ್​ ಸ್ವಾಮಿ ಆಗ್ರಹಿಸಿದ್ದಾರೆ. ಧರಣಿ ಕುಳಿತಿರುವ ಮುಖ್ಯಮಂತ್ರಿ ಮತ್ತು ಸಚಿವರು, ಮುಖಂಡರು ಕೈಯಲ್ಲಿ ಕಿರಣ್​ ಬೇಡಿ ವಿರುದ್ಧದ ಘೋಷಣೆಗಳುಳ್ಳ ಪೋಸ್ಟರ್​ಗಳನ್ನು ಹಿಡಿದಿದ್ದಾರೆ. ಕಾರ್ಪೊರೇಟ್ ಮೋದಿ ಕ್ವಿಟ್​, ಕ್ವಿಟ್​, ಕಿರಣ್ ಬೇಡಿಯನ್ನು ಹುದ್ದೆಯಿಂದ ಕೆಳಗಳಿಸಿ ಎಂಬಂಥ ಘೋಷಣೆಗಳನ್ನು ಪೋಸ್ಟರ್​ನಲ್ಲಿ ನೋಡಬಹುದು.

ನಮ್ಮ ಚುನಾಯಿತ ಸರ್ಕಾರ ಕಾರ್ಯನಿರ್ವಹಿಸಲು ಕಿರಣ್​ ಬೇಡಿ ಅವಕಾಶ ನೀಡುತ್ತಿಲ್ಲ. ನಮ್ಮ ನಿತ್ಯದ ಆಡಳಿತದಲ್ಲಿ ಅತಿಯಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ತಮಿಳುನಾಡು ವಿದ್ಯಾರ್ಥಿಗಳಿಗೆ 2 ಜಿಬಿ ಡಾಟಾ ಉಚಿತ

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?