AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ​ ಸ್ವಾಮಿ ಆಗ್ರಹಿಸಿದ್ದಾರೆ.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ
ಧರಣಿ ನಿರತ ಮುಖ್ಯಮಂತ್ರಿ (ಎಡ)-ಕಿರಣ್​ ಬೇಡಿ (ಬಲ)
Lakshmi Hegde
| Edited By: |

Updated on: Jan 10, 2021 | 2:04 PM

Share

ಪುದುಚೇರಿ: ಇಲ್ಲಿನ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ನಡುವಿನ ಮನಸ್ತಾಪ, ಜಟಾಪಟಿ ಹೊಸದಲ್ಲ. ಅಲ್ಲಿ ಕಿರಣ್​ ಬೇಡಿ ಸರ್ಕಾರದ ಆಡಳಿತಕ್ಕೆ ಅಡ್ಡಿಯುಂಟು ಮಾಡುತ್ತಾರೆ ಎಂಬ ಆರೋಪವನ್ನು ಸಿಎಂ ಮತ್ತು ಅವರ ಕ್ಯಾಬಿನೆಟ್​ ಮಂತ್ರಿಗಳು ಮಾಡುತ್ತಲೇ ಬಂದಿದ್ದಾರೆ.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ. ಯಾವುದೇ ಹೊಸ ಯೋಜನೆ ಅನುಷ್ಠಾನಕ್ಕೂ ಬಿಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸರ್ಕಾರದ ಸಚಿವರು, ಶಾಸಕರು ಜ.8ರಿಂದ ರಾಜ್ ​ನಿವಾಸ್​ ಎದುರು ನಾಲ್ಕು ದಿನಗಳ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ಪುದುಚೇರಿಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​ ನೇತೃತ್ವದ ಸೆಕ್ಯೂಲರ್​ ಡೆಮಾಕ್ರಟಿಕ್​ ಅಲಯನ್ಸ್​ದೊಂದಿಗೆ, ಸಿಪಿಐ, ಸಿಪಿಐ (ಎಂ), ವಿಸಿಕೆ (Viduthalai Chiruthaigal Katchi) ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ್​ ಸ್ವಾಮಿ ಆಗ್ರಹಿಸಿದ್ದಾರೆ. ಧರಣಿ ಕುಳಿತಿರುವ ಮುಖ್ಯಮಂತ್ರಿ ಮತ್ತು ಸಚಿವರು, ಮುಖಂಡರು ಕೈಯಲ್ಲಿ ಕಿರಣ್​ ಬೇಡಿ ವಿರುದ್ಧದ ಘೋಷಣೆಗಳುಳ್ಳ ಪೋಸ್ಟರ್​ಗಳನ್ನು ಹಿಡಿದಿದ್ದಾರೆ. ಕಾರ್ಪೊರೇಟ್ ಮೋದಿ ಕ್ವಿಟ್​, ಕ್ವಿಟ್​, ಕಿರಣ್ ಬೇಡಿಯನ್ನು ಹುದ್ದೆಯಿಂದ ಕೆಳಗಳಿಸಿ ಎಂಬಂಥ ಘೋಷಣೆಗಳನ್ನು ಪೋಸ್ಟರ್​ನಲ್ಲಿ ನೋಡಬಹುದು.

ನಮ್ಮ ಚುನಾಯಿತ ಸರ್ಕಾರ ಕಾರ್ಯನಿರ್ವಹಿಸಲು ಕಿರಣ್​ ಬೇಡಿ ಅವಕಾಶ ನೀಡುತ್ತಿಲ್ಲ. ನಮ್ಮ ನಿತ್ಯದ ಆಡಳಿತದಲ್ಲಿ ಅತಿಯಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ತಮಿಳುನಾಡು ವಿದ್ಯಾರ್ಥಿಗಳಿಗೆ 2 ಜಿಬಿ ಡಾಟಾ ಉಚಿತ

Follow Us
Lakshmi Hegde
Lakshmi Hegde
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?