AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ​ ಸ್ವಾಮಿ ಆಗ್ರಹಿಸಿದ್ದಾರೆ.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ
ಧರಣಿ ನಿರತ ಮುಖ್ಯಮಂತ್ರಿ (ಎಡ)-ಕಿರಣ್​ ಬೇಡಿ (ಬಲ)
Lakshmi Hegde
| Edited By: |

Updated on: Jan 10, 2021 | 2:04 PM

Share

ಪುದುಚೇರಿ: ಇಲ್ಲಿನ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ನಡುವಿನ ಮನಸ್ತಾಪ, ಜಟಾಪಟಿ ಹೊಸದಲ್ಲ. ಅಲ್ಲಿ ಕಿರಣ್​ ಬೇಡಿ ಸರ್ಕಾರದ ಆಡಳಿತಕ್ಕೆ ಅಡ್ಡಿಯುಂಟು ಮಾಡುತ್ತಾರೆ ಎಂಬ ಆರೋಪವನ್ನು ಸಿಎಂ ಮತ್ತು ಅವರ ಕ್ಯಾಬಿನೆಟ್​ ಮಂತ್ರಿಗಳು ಮಾಡುತ್ತಲೇ ಬಂದಿದ್ದಾರೆ.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ. ಯಾವುದೇ ಹೊಸ ಯೋಜನೆ ಅನುಷ್ಠಾನಕ್ಕೂ ಬಿಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸರ್ಕಾರದ ಸಚಿವರು, ಶಾಸಕರು ಜ.8ರಿಂದ ರಾಜ್ ​ನಿವಾಸ್​ ಎದುರು ನಾಲ್ಕು ದಿನಗಳ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ಪುದುಚೇರಿಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​ ನೇತೃತ್ವದ ಸೆಕ್ಯೂಲರ್​ ಡೆಮಾಕ್ರಟಿಕ್​ ಅಲಯನ್ಸ್​ದೊಂದಿಗೆ, ಸಿಪಿಐ, ಸಿಪಿಐ (ಎಂ), ವಿಸಿಕೆ (Viduthalai Chiruthaigal Katchi) ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ್​ ಸ್ವಾಮಿ ಆಗ್ರಹಿಸಿದ್ದಾರೆ. ಧರಣಿ ಕುಳಿತಿರುವ ಮುಖ್ಯಮಂತ್ರಿ ಮತ್ತು ಸಚಿವರು, ಮುಖಂಡರು ಕೈಯಲ್ಲಿ ಕಿರಣ್​ ಬೇಡಿ ವಿರುದ್ಧದ ಘೋಷಣೆಗಳುಳ್ಳ ಪೋಸ್ಟರ್​ಗಳನ್ನು ಹಿಡಿದಿದ್ದಾರೆ. ಕಾರ್ಪೊರೇಟ್ ಮೋದಿ ಕ್ವಿಟ್​, ಕ್ವಿಟ್​, ಕಿರಣ್ ಬೇಡಿಯನ್ನು ಹುದ್ದೆಯಿಂದ ಕೆಳಗಳಿಸಿ ಎಂಬಂಥ ಘೋಷಣೆಗಳನ್ನು ಪೋಸ್ಟರ್​ನಲ್ಲಿ ನೋಡಬಹುದು.

ನಮ್ಮ ಚುನಾಯಿತ ಸರ್ಕಾರ ಕಾರ್ಯನಿರ್ವಹಿಸಲು ಕಿರಣ್​ ಬೇಡಿ ಅವಕಾಶ ನೀಡುತ್ತಿಲ್ಲ. ನಮ್ಮ ನಿತ್ಯದ ಆಡಳಿತದಲ್ಲಿ ಅತಿಯಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ತಮಿಳುನಾಡು ವಿದ್ಯಾರ್ಥಿಗಳಿಗೆ 2 ಜಿಬಿ ಡಾಟಾ ಉಚಿತ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ