AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ​ ಸ್ವಾಮಿ ಆಗ್ರಹಿಸಿದ್ದಾರೆ.

ಕಿರಣ್​ ಬೇಡಿ ವಿರುದ್ಧ ಧರಣಿ ಮುಂದುವರಿಸಿದ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ
ಧರಣಿ ನಿರತ ಮುಖ್ಯಮಂತ್ರಿ (ಎಡ)-ಕಿರಣ್​ ಬೇಡಿ (ಬಲ)
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 10, 2021 | 2:04 PM

ಪುದುಚೇರಿ: ಇಲ್ಲಿನ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ನಡುವಿನ ಮನಸ್ತಾಪ, ಜಟಾಪಟಿ ಹೊಸದಲ್ಲ. ಅಲ್ಲಿ ಕಿರಣ್​ ಬೇಡಿ ಸರ್ಕಾರದ ಆಡಳಿತಕ್ಕೆ ಅಡ್ಡಿಯುಂಟು ಮಾಡುತ್ತಾರೆ ಎಂಬ ಆರೋಪವನ್ನು ಸಿಎಂ ಮತ್ತು ಅವರ ಕ್ಯಾಬಿನೆಟ್​ ಮಂತ್ರಿಗಳು ಮಾಡುತ್ತಲೇ ಬಂದಿದ್ದಾರೆ.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ. ಯಾವುದೇ ಹೊಸ ಯೋಜನೆ ಅನುಷ್ಠಾನಕ್ಕೂ ಬಿಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸರ್ಕಾರದ ಸಚಿವರು, ಶಾಸಕರು ಜ.8ರಿಂದ ರಾಜ್ ​ನಿವಾಸ್​ ಎದುರು ನಾಲ್ಕು ದಿನಗಳ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ಪುದುಚೇರಿಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​ ನೇತೃತ್ವದ ಸೆಕ್ಯೂಲರ್​ ಡೆಮಾಕ್ರಟಿಕ್​ ಅಲಯನ್ಸ್​ದೊಂದಿಗೆ, ಸಿಪಿಐ, ಸಿಪಿಐ (ಎಂ), ವಿಸಿಕೆ (Viduthalai Chiruthaigal Katchi) ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ಲೆಫ್ಟಿನೆಂಟ್​ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಮುಖ್ಯಮಂತ್ರಿ ವಿ.ನಾರಾಯಣ್​ ಸ್ವಾಮಿ ಆಗ್ರಹಿಸಿದ್ದಾರೆ. ಧರಣಿ ಕುಳಿತಿರುವ ಮುಖ್ಯಮಂತ್ರಿ ಮತ್ತು ಸಚಿವರು, ಮುಖಂಡರು ಕೈಯಲ್ಲಿ ಕಿರಣ್​ ಬೇಡಿ ವಿರುದ್ಧದ ಘೋಷಣೆಗಳುಳ್ಳ ಪೋಸ್ಟರ್​ಗಳನ್ನು ಹಿಡಿದಿದ್ದಾರೆ. ಕಾರ್ಪೊರೇಟ್ ಮೋದಿ ಕ್ವಿಟ್​, ಕ್ವಿಟ್​, ಕಿರಣ್ ಬೇಡಿಯನ್ನು ಹುದ್ದೆಯಿಂದ ಕೆಳಗಳಿಸಿ ಎಂಬಂಥ ಘೋಷಣೆಗಳನ್ನು ಪೋಸ್ಟರ್​ನಲ್ಲಿ ನೋಡಬಹುದು.

ನಮ್ಮ ಚುನಾಯಿತ ಸರ್ಕಾರ ಕಾರ್ಯನಿರ್ವಹಿಸಲು ಕಿರಣ್​ ಬೇಡಿ ಅವಕಾಶ ನೀಡುತ್ತಿಲ್ಲ. ನಮ್ಮ ನಿತ್ಯದ ಆಡಳಿತದಲ್ಲಿ ಅತಿಯಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ತಮಿಳುನಾಡು ವಿದ್ಯಾರ್ಥಿಗಳಿಗೆ 2 ಜಿಬಿ ಡಾಟಾ ಉಚಿತ

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್