AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puducherry elections results 2021: ಪುದುಚೇರಿಯಲ್ಲಿ ಎನ್​ಡಿಎ ಒಕ್ಕೂಟಕ್ಕೆ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್​

ಈ ಬಾರಿ ಇಲ್ಲಿ ಎನ್​ಡಿಎ ಮುನ್ನಡೆಯಲಿದೆ. ಎನ್​ಡಿಒ ಒಕ್ಕೂಟದ ಆಲ್​ ಇಂಡಿಯಾ ಎನ್​ಆರ್ ಕಾಂಗ್ರೆಸ್ ಮುಖ್ಯಸ್ಥ​ (AINRC), ಮಾಜಿ ಮುಖ್ಯಮಂತ್ರಿ ಎನ್​.ರಂಗಸ್ವಾಮಿ ಅವರು ಯಾನಮ್​ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿದ್ದರು. ಆದರೆ ಈಗ ಅವರು ಹಿನ್ನಡೆಯಲ್ಲಿದ್ದಾರೆ.

Puducherry elections results 2021: ಪುದುಚೇರಿಯಲ್ಲಿ ಎನ್​ಡಿಎ ಒಕ್ಕೂಟಕ್ಕೆ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್​
ಪುದುಚೇರಿಯ ಮತ ಎಣಿಕೆ ಕೇಂದ್ರ
Lakshmi Hegde
|

Updated on: May 02, 2021 | 3:17 PM

Share

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಎನ್​ಡಿಎ ಮೈತ್ರಿ ಕೂಟ ಅಧಿಕಾರ ಹಿಡಿಯುವತ್ತ ದಾಪುಗಾಲು ಹಾಕುತ್ತಿದೆ. ಒಟ್ಟು 30 ಕ್ಷೇತ್ರಗಳಿದ್ದು ಅದರಲ್ಲಿ 17ಕ್ಷೇತ್ರಗಳಲ್ಲಿ ಎನ್​ಡಿಎ ಮೈತ್ರಿ ಮುನ್ನಡೆಯಲಿದ್ದು, 11ರಲ್ಲಿ ಯುಪಿಎ ಮುನ್ನಡೆ ಸಾಧಿಸಿದೆ.ಪುದುಚೇರಿಯಲ್ಲಿ ಇಂದು ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಈ ಹಿಂದಿನ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಸಾಬೀತು ಮಾಡಲಾಗದೆ ಇಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯಾಗಿತ್ತು. ಏಪ್ರಿಲ್​ 6ರಂದು ಚುನಾವಣೆ ನಡೆದಿತ್ತು.

ಒಟ್ಟು 30 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಯಲ್ಲಿ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದರೆ, ಡಿಎಂಕೆ 13 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಹಾಗೇ ಬಿಜೆಪಿ+ ಎಐಎನ್​​ಆರ್​ಸಿ + ಎಐಎಡಿಎಂಕೆ ಮೈತ್ರಿಯಲ್ಲಿ ಬಿಜೆಪಿ 9, ಎಐಎನ್​ಆರ್​ಸಿ 16 ಮತ್ತು ಎಐಎಡಿಎಂಕೆ 5 ಸೀಟುಗಳನ್ನು ಹಂಚಿಕೊಂಡಿದ್ದವು. 2016ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ 16 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದಿತ್ತು.

ಈ ಬಾರಿ ಇಲ್ಲಿ ಎನ್​ಡಿಎ ಮುನ್ನಡೆಯಲಿದೆ. ಎನ್​ಡಿಒ ಒಕ್ಕೂಟದ ಆಲ್​ ಇಂಡಿಯಾ ಎನ್​ಆರ್ ಕಾಂಗ್ರೆಸ್ ಮುಖ್ಯಸ್ಥ​ (AINRC), ಮಾಜಿ ಮುಖ್ಯಮಂತ್ರಿ ಎನ್​.ರಂಗಸ್ವಾಮಿ ಅವರು ಯಾನಮ್​ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿದ್ದರು. ಆದರೆ ಈಗ ಅವರು ಹಿನ್ನಡೆಯಲ್ಲಿದ್ದಾರೆ. ಹಾಗೇ ಕದಿರ್ಗಾಮಮ್​ ಕ್ಷೇತ್ರದಲ್ಲಿ ಎಐಎನ್​ಆರ್​​ಸಿಯ ಎಸ್​.ರಮೇಶ್ ಅವರು ಕಾಂಗ್ರೆಸ್​ನ ಪಿ.ಸೆಲ್ವನಡಾನೆ ವಿರುದ್ಧ 12 ಸಾವಿರ ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.

ಹಾಗೇ ಕಾಮರಾಜ್ ನಗರದ ಬಿಜೆಪಿ ಅಭ್ಯರ್ಥಿ ಜಾನ್​ ಕುಮಾರ್​ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಮೊಹಮ್ಮದ್​ ಶಹಜಾನ್ ವಿರುದ್ಧ 7229 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಸಹ ಒಂದು ಕ್ಷೇತ್ರದಲ್ಲಿ ಜಯ ಸಾಧಿಸಿದೆ. ಮಾಹೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಪರಂಬಾಥ್​ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಸಿಪಿಐ (ಎಂ) ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಹರಿದಾಸ್ ವಿರುದ್ಧ 301 ಮತಗಳ ಅಂತರದಿಂದ ಗೆದ್ದಿದ್ದಾರೆ.

Follow Us
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?