AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puducherry elections results 2021: ಪುದುಚೇರಿಯಲ್ಲಿ ಎನ್​ಡಿಎ ಒಕ್ಕೂಟಕ್ಕೆ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್​

ಈ ಬಾರಿ ಇಲ್ಲಿ ಎನ್​ಡಿಎ ಮುನ್ನಡೆಯಲಿದೆ. ಎನ್​ಡಿಒ ಒಕ್ಕೂಟದ ಆಲ್​ ಇಂಡಿಯಾ ಎನ್​ಆರ್ ಕಾಂಗ್ರೆಸ್ ಮುಖ್ಯಸ್ಥ​ (AINRC), ಮಾಜಿ ಮುಖ್ಯಮಂತ್ರಿ ಎನ್​.ರಂಗಸ್ವಾಮಿ ಅವರು ಯಾನಮ್​ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿದ್ದರು. ಆದರೆ ಈಗ ಅವರು ಹಿನ್ನಡೆಯಲ್ಲಿದ್ದಾರೆ.

Puducherry elections results 2021: ಪುದುಚೇರಿಯಲ್ಲಿ ಎನ್​ಡಿಎ ಒಕ್ಕೂಟಕ್ಕೆ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್​
ಪುದುಚೇರಿಯ ಮತ ಎಣಿಕೆ ಕೇಂದ್ರ
Lakshmi Hegde
|

Updated on: May 02, 2021 | 3:17 PM

Share

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಎನ್​ಡಿಎ ಮೈತ್ರಿ ಕೂಟ ಅಧಿಕಾರ ಹಿಡಿಯುವತ್ತ ದಾಪುಗಾಲು ಹಾಕುತ್ತಿದೆ. ಒಟ್ಟು 30 ಕ್ಷೇತ್ರಗಳಿದ್ದು ಅದರಲ್ಲಿ 17ಕ್ಷೇತ್ರಗಳಲ್ಲಿ ಎನ್​ಡಿಎ ಮೈತ್ರಿ ಮುನ್ನಡೆಯಲಿದ್ದು, 11ರಲ್ಲಿ ಯುಪಿಎ ಮುನ್ನಡೆ ಸಾಧಿಸಿದೆ.ಪುದುಚೇರಿಯಲ್ಲಿ ಇಂದು ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಈ ಹಿಂದಿನ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಸಾಬೀತು ಮಾಡಲಾಗದೆ ಇಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯಾಗಿತ್ತು. ಏಪ್ರಿಲ್​ 6ರಂದು ಚುನಾವಣೆ ನಡೆದಿತ್ತು.

ಒಟ್ಟು 30 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಯಲ್ಲಿ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದರೆ, ಡಿಎಂಕೆ 13 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಹಾಗೇ ಬಿಜೆಪಿ+ ಎಐಎನ್​​ಆರ್​ಸಿ + ಎಐಎಡಿಎಂಕೆ ಮೈತ್ರಿಯಲ್ಲಿ ಬಿಜೆಪಿ 9, ಎಐಎನ್​ಆರ್​ಸಿ 16 ಮತ್ತು ಎಐಎಡಿಎಂಕೆ 5 ಸೀಟುಗಳನ್ನು ಹಂಚಿಕೊಂಡಿದ್ದವು. 2016ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ 16 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದಿತ್ತು.

ಈ ಬಾರಿ ಇಲ್ಲಿ ಎನ್​ಡಿಎ ಮುನ್ನಡೆಯಲಿದೆ. ಎನ್​ಡಿಒ ಒಕ್ಕೂಟದ ಆಲ್​ ಇಂಡಿಯಾ ಎನ್​ಆರ್ ಕಾಂಗ್ರೆಸ್ ಮುಖ್ಯಸ್ಥ​ (AINRC), ಮಾಜಿ ಮುಖ್ಯಮಂತ್ರಿ ಎನ್​.ರಂಗಸ್ವಾಮಿ ಅವರು ಯಾನಮ್​ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿದ್ದರು. ಆದರೆ ಈಗ ಅವರು ಹಿನ್ನಡೆಯಲ್ಲಿದ್ದಾರೆ. ಹಾಗೇ ಕದಿರ್ಗಾಮಮ್​ ಕ್ಷೇತ್ರದಲ್ಲಿ ಎಐಎನ್​ಆರ್​​ಸಿಯ ಎಸ್​.ರಮೇಶ್ ಅವರು ಕಾಂಗ್ರೆಸ್​ನ ಪಿ.ಸೆಲ್ವನಡಾನೆ ವಿರುದ್ಧ 12 ಸಾವಿರ ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.

ಹಾಗೇ ಕಾಮರಾಜ್ ನಗರದ ಬಿಜೆಪಿ ಅಭ್ಯರ್ಥಿ ಜಾನ್​ ಕುಮಾರ್​ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಮೊಹಮ್ಮದ್​ ಶಹಜಾನ್ ವಿರುದ್ಧ 7229 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಸಹ ಒಂದು ಕ್ಷೇತ್ರದಲ್ಲಿ ಜಯ ಸಾಧಿಸಿದೆ. ಮಾಹೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಪರಂಬಾಥ್​ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಸಿಪಿಐ (ಎಂ) ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಹರಿದಾಸ್ ವಿರುದ್ಧ 301 ಮತಗಳ ಅಂತರದಿಂದ ಗೆದ್ದಿದ್ದಾರೆ.

Follow Us
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ