AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದುಚೇರಿ ರಾಜಕಾರಣ: ಸೋಮವಾರ ಬಹುಮತ ಸಾಬೀತು ಮಾಡುವಂತೆ ಕಾಂಗ್ರೆಸ್​ಗೆ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್

ಕಿರಣ್​ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರನ್ನೇ ಪ್ರಭಾರ ಲೆಫ್ಟಿನೆಂಟ್​ ಗವರ್ನರ್​ರನ್ನಾಗಿ ಇಲ್ಲಿಗೆ ನೇಮಕ ಮಾಡಲಾಗಿದೆ.

ಪುದುಚೇರಿ ರಾಜಕಾರಣ: ಸೋಮವಾರ ಬಹುಮತ ಸಾಬೀತು ಮಾಡುವಂತೆ ಕಾಂಗ್ರೆಸ್​ಗೆ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್
ಪುದುಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ನೂತನ ಲೆಫ್ಟಿನೆಂಟ್​ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್
Lakshmi Hegde
|

Updated on:Feb 18, 2021 | 7:08 PM

Share

ಪುದುಚೇರಿ: ಸದಸ್ಯ ಬಲ 14ಕ್ಕೆ ಕುಸಿದು, ಬಹುಮತ ಕಳೆದುಕೊಂಡಿರುವ ಆಡಳಿತರೂಢ ಕಾಂಗ್ರೆಸ್​ ಸರ್ಕಾರಕ್ಕೆ ತನ್ನ ಸದಸ್ಯ ಬಲ ಸಾಬೀತು ಪಡಿಸಲು ಸೋಮವಾರದವರೆಗೆ ಅವಕಾಶ ನೀಡಲಾಗಿದೆ. ಸೋಮವಾರ (ಫೆ.22) ಕಾಂಗ್ರೆಸ್​ ಸರ್ಕಾರ ಬಹುಮತ ಸಾಬೀತುಪಡಿಸಬೇಕು ಎಂದು ಈಗಿನ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್ ತಿಳಿಸಿದ್ದಾರೆ.

ಕಿರಣ್​ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರನ್ನೇ ಪ್ರಭಾರ ಲೆಫ್ಟಿನೆಂಟ್​ ಗವರ್ನರ್​ರನ್ನಾಗಿ ಇಲ್ಲಿಗೆ ನೇಮಕ ಮಾಡಲಾಗಿದೆ. ಈ ಮಧ್ಯೆ ಆಡಳಿತ ರೂಢ ಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ 14ಕ್ಕೆ ಕುಸಿದಿದೆ. ಪುದುಚೇರಿ ವಿಧಾನಸಭೆ 30 ಸದಸ್ಯ ಬಲ ಹೊಂದಿದ್ದು, ಅಧಿಕಾರ ಹಿಡಿಯಲು ಯಾವುದೇ ಪಕ್ಷಕ್ಕೆ 16 ಸದಸ್ಯರ ಬಲ ಇರಬೇಕು. ಕಾಂಗ್ರೆಸ್​ 18 ಶಾಸಕರ ಬಲದೊಂದಿಗೆ ಪುದುಚೇರಿ ಆಡಳಿತ ಹಿಡಿದಿತ್ತು. ಆದರೆ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್​ ಆಗಿದ್ದ ಕಿರಣ್​ ಬೇಡಿಯವರ ನಡುವಿನ ವಿವಾದದಿಂದ ಈಗ ಅಲ್ಲಿನ ರಾಜಕೀಯದಲ್ಲಿ ಏಕಾಏಕಿ ಬೆಳವಣಿಗೆಗಳು ನಡೆದಿವೆ. ನಾಲ್ವರು ರಾಜೀನಾಮೆ ನೀಡಿದ್ದರೂ, ನಮಗೆ ಸಂಖ್ಯಾಬಲ ಇದೆ ಎಂದು ಮುಖ್ಯಮಂತ್ರಿ ನಾರಾಯಣಸ್ವಾಮಿ ವಾದಿಸುತ್ತಿದ್ದಾರೆ.

ಆದರೆ ನೂತನ ಲೆಫ್ಟಿನೆಂಟ್ ಗವರ್ನರ್​, ಕಾಂಗ್ರೆಸ್​ ಸರ್ಕಾರ ಮುಂದುವರಿಯಬೇಕು ಎಂದರೆ ಅದಕ್ಕೆ ಸಾಕಷ್ಟು ಸದಸ್ಯರ ಬಲ ಇದೆ ಎಂಬುದು ಸಾಬೀತಾಗಾಬೇಕು. ಸೋಮವಾರ ಫ್ಲೋರ್​ ಟೆಸ್ಟ್ ನಡೆಯಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: Puducherry Politics | ಪುದುಚೇರಿಯ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿಂದಿದೆ ಬಿಜೆಪಿ ಮಹತ್ವಾಕಾಂಕ್ಷೆ

Published On - 6:59 pm, Thu, 18 February 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ